ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ‘ಭಾರತ ರತ್ನ’ ಸಿಗಲಿ, ಮೋದಿ ಮನಸ್ಸು ಮಾಡಲಿ: ರಣದೀಪ್‌ ಸುರ್ಜೇವಾಲ

Date:

“ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರಿಗೆ ನಿಜಕ್ಕೂ ಮರಣೋತ್ತರ ‘ಭಾರತ ರತ್ನʼ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ರಣದೀಪ್ ಸುರ್ಜೇವಾಲ, “ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಸಿದ್ಧಗಂಗಾ ಶ್ರೀಗಳು. ಇಡೀ ದೇಶಕ್ಕೇ ಮಾದರಿಯಾಗಿದ್ದವರು. ಹೀಗಾಗಿ ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಶ್ರೀಗಳಿಗೆ ಭಾರತ ರತ್ನ ನೀಡಲು ಆದ್ಯತೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

“ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ,ಅಕ್ಷರ ಮತ್ತು ಜ್ಞಾನ ದಾಸೋಹಗಳ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದವರು. ಯಾವುದೇ ಜಾತಿ, ಧರ್ಮ ಭೇದ ಇಲ್ಲಿಲ್ಲ. ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರನ್ನು ಗಳಿಸುವಂತೆ ಮಾಡಿದವರು” ಅವರು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ನಡೆದಾಡುವ ದೇವರಿಗೆ ಸಿಗಲಿ ಗೌರವ

“ಶತಾಯುಷಿಗಳಾಗಿರುವ ಅವರು ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದರು. ಜನರು ಶಿವಕುಮಾರ ಸ್ವಾಮೀಜಿಯಲ್ಲಿ ದೇವರನ್ನು ಕಂಡಿದ್ದಾರೆ. ದೇವರು ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಈ ನಮ್ಮ ನಡೆದಾಡುವ ದೇವರು ಎಲ್ಲವನ್ನೂ ಮಾಡಿ ತೋರಿಸಿದ್ದಾರೆ. ಆರಂಭದಲ್ಲಿ ಶ್ರೀಮಠದ ಆದಾಯ ಕಡಿಮೆ ಇದ್ದಾಗಲೂ ಕುಗ್ಗದ ಶ್ರೀಗಳು, ಭಕ್ತರ ಮನೆ ಮನೆಗೆ ತೆರಳಿ ದವಸ-ಧಾನ್ಯಗಳನ್ನು ಭಿಕ್ಷೆ ಎತ್ತಿ ಮಠವನ್ನು ನಿರ್ವಹಿಸಿದರು. ಮಠದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಇಂಥವರು ಸಿಗುವುದೇ ಅಪರೂಪ” ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ.

ಇದು ಆರೂವರೆ ಕೋಟಿ ಕನ್ನಡಿಗರ ಭಾವನೆ

“ನಿಜವಾಗಿಯೂ ಭಾರತದ ಅಮೂಲ್ಯ ರತ್ನವಾಗಿರುವಂಥ ಕರ್ನಾಟಕದ ಈ ಮಹಾನ್‌ ಪುರುಷ, ಅವತಾರ ಪುರುಷರಾಗಿರುವ ಶಿವಕುಮಾರ್‌ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂಬುದು ನನ್ನ ಭಾವನೆಯಾಗಿದೆ. ಇದು ಆರೂವರೆ ಕೋಟಿ ಕನ್ನಡಿಗರ ಅಭಿಮತವೂ ಆಗಿದೆ ಎಂಬುದು ನನ್ನ ಅನ್ನಿಸಿಕೆ” ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...