ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ ಎರಡು ಸೀಟು ತರಲಿ: ಎಚ್‌ಡಿಕೆ ಸವಾಲು

Date:

  • ಹೊಸ ಪಕ್ಷ ಸ್ಥಾಪಿಸಿ ಸೀಟು ಗೆಲ್ಲುವಂತೆ ಸಿದ್ದರಾಮಯ್ಯಗೆ ಸವಾಲು
  • ಸಿ ವೋಟರ್‌ ಸಮೀಕ್ಷೆ ಅಂಕಿ ಅಂಶ ತಳ್ಳಿಹಾಕಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊಸ ಪಕ್ಷ ಕಟ್ಟಿ, ಎರಡು ಸೀಟು ತರಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ‘ಜೆಡಿಎಸ್‌ನಲ್ಲಿ ಅಪ್ಪ ಮಕ್ಕಳ ಮಾತು ಕೇಳದಿದ್ದರೆ ಪಕ್ಷದಿಂದ ಹೊರ ಹಾಕುತ್ತಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ನಮ್ಮ ಪಕ್ಷದಲ್ಲಿದ್ದಾಗ ಪಾಳೆಗಾರಿಕೆ ಮಾಡಿಕೊಂಡು ದೇವೇಗೌಡರನ್ನು ಹೆದರಿಸಿಕೊಂಡಿದ್ದರು. ಹಿಂದೆ ಬ್ಯಾನರ್‌ನಲ್ಲಿ ಭಾವಚಿತ್ರ ಇಲ್ಲ ಅಂತ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಈ ಮಹಾಶಯ. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸೀಟು ತರಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ಜೆಡಿಎಸ್ ಬೆಳೆಸದಿದ್ದರೆ ನಿಮ್ಮನ್ನು ಕಾಂಗ್ರೆಸ್‌ನವರು ಎಲ್ಲಿ ಕರೆಯುತ್ತಿದ್ದರು. ಮೂಸಿಯೂ ನೋಡುತ್ತಿರಲಿಲ್ಲ. ಮೈಸೂರಲ್ಲಿ ಎಂಟು ಜನ ಶಾಸಕರನ್ನು ಕರೆದುಕೊಂಡು ಹೋಗಿ ಮತ್ತೆ ಎಷ್ಟು ಗೆಲ್ಲಿಸಿಕೊಂಡರು. ಹೋಗಲಿ ಅವರು ಗೆದ್ದಿದ್ದು ಎಷ್ಟು ವೋಟಿನಿಂದ? ಕೇವಲ 200 ವೋಟಿನಿಂದ ಗೆದ್ದು ಮುಖ ಉಳಿಸಿಕೊಂಡರು. ಅವರಿಗೆ ಜನತೆಯ ಮೂಲಕ ಉತ್ತರ ಕೊಡಿಸುತ್ತೇನೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೂ ರಾಷ್ಟ್ರೀಯ ಪಕ್ಷಗಳು ಒಂದಾಗಿವೆ

“ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳೂ ಒಂದಾಗಿ ಜೆಡಿಎಸ್‌ ವಿರುದ್ಧ ಷಡ್ಯಂತ್ರ ರೂಪಿಸಿವೆ. ಎ ಟೀಮ್, ಬಿ ಟೀಮ್‌ಗಳಂತೆ ಕೆಲಸ ಮಾಡುತ್ತಿವೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

“ಕಾಂಗ್ರೆಸ್ ಮತ್ತು ಬಿಜೆಪಿ ನಮ್ಮ ವಿರುದ್ಧ ಒಳ ಒಪ್ಪಂದದ ಆರೋಪ ಮಾಡಿವೆ. ಎರಡೂ ಪಕ್ಷಗಳಿಗೆ ನಾಚಿಕೆ ಆಗಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇನ್ನಾದರೂ ಈ ರಾಷ್ಟ್ರೀಯ ಪಕ್ಷಗಳು ಒಳ ಒಪ್ಪಂದ ಆರೋಪಕ್ಕೆ ಫುಲ್‌ಸ್ಟಾಪ್ ಇಡಬೇಕು. ಇವರಿಗೆ ಜೆಡಿಎಸ್‌ಅನ್ನು ಟೀಕೆ ಮಾಡುವುದೇ ನಿತ್ಯ ಕಾಯಕವಾಗಿದೆ. ಎರಡೂ ಪಕ್ಷಗಳ ಭೀತಿ ಎಷ್ಟಿದೆ ಎನ್ನುವುದಕ್ಕೆ ಇದೇ ಸಾಕ್ಷಿ” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

“ಜವಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ಹೇಳುತಾರೆ, ಹೈದರಾಬಾದ್‌ನಲ್ಲಿ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ಆಗಿದೆ ಎಂದು. ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳ್ತಾರೆ, ಬಿಜೆಪಿ ಜತೆ ಜೆಡಿಎಸ್ ಒಳ ಒಪ್ಪಂದ ಆಗಿದೆ ಎಂದು. ಈ ಇಬ್ಬರಿಗೆ ಇದು ಬಿಟ್ಟು ಬೇರೆ ವಿಚಾರವೇ ಇಲ್ಲವೇ? ವಿಷಯ ಇಲ್ಲ ಅಂದರೆ, ಮಾತನಾಡಲು ನಾನೇ ವಿಷಯ ಕೊಡುತ್ತೇನೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್, ಬಿಜೆಪಿಗೆ ಅಧಿಕಾರಕ್ಕೆ ಬರುವ ಯಾವ ಸ್ಪಷ್ಟ ಭರವಸೆಯೂ ಇಲ್ಲ. ಎರಡೂ ಪಕ್ಷಗಳಿಗೆ ಆತಂಕ ಶುರುವಾಗಿದೆ. ಜೆಡಿಎಸ್‌ನವರು ಎಲ್ಲಿ ಬಿಜೆಪಿ ಜತೆ ಹೋಗ್ತಾರೆ ಅಂತ ಕಾಂಗ್ರೆಸ್‌ನವರಿಗೆ, ಕಾಂಗ್ರೆಸ್ ಜತೆ ಎಲ್ಲಿ ಹೋಗ್ತಾರೆ ಅಂತ ಬಿಜೆಪಿಯವರಿಗೆ ಭಯವಿದೆ. ಹೀಗಾಗಿ ಪದೇಪದೆ ನಮ್ಮನ್ನು ಕೆಣಕುತ್ತಿದ್ದಾರೆ. ನಾನು ಈ ಬಾರಿ 123 ಕ್ಷೇತ್ರಗಳನ್ನು ಗುರಿ ಇಟ್ಟುಕೊಂಡು ಹೊರಟಿದ್ದೇವೆ. ಅದನ್ನು ಸಹಿಸುವುದು ಎರಡೂ ಪಕ್ಷಗಳಿಗೆ ಆಗುತ್ತಿಲ್ಲ. ಹೊಟ್ಟೆಕಿಚ್ಚಿನಿಂದ ಹೀಗೆ ಮಾತನಾಡುತ್ತವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ನನಗೆ ಸಮೀಕ್ಷೆಗಳ ಆತಂಕವಿಲ್ಲ

ಸಿ ವೋಟರ್ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ನನಗೆ ಸಮೀಕ್ಷೆಗಳ ಬಗ್ಗೆ ಆತಂಕವಿಲ್ಲ. ಸಿ ವೋಟರ್‌ ಈ ಹಿಂದೆ ಕಾಂಗ್ರೆಸ್ 120 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದಿತ್ತು. ಆದರೆ, ಕಾಂಗ್ರೆಸ್ ಗೆದ್ದ ಸೀಟುಗಳೆಷ್ಟು?” ಎಂದು ಸಮೀಕ್ಷೆಯ ಭವಿಷ್ಯವನ್ನು ತಳ್ಳಿ ಹಾಕಿದ್ದಾರೆ.

“ರಾಷ್ಟ್ರೀಯ ಪಕ್ಷಗಳು ತಮ್ಮ ಕಾರ್ಯತಂತ್ರದ ಭಾಗವಾಗಿ ಯಾವುದೋ ಕಂಪನಿ ಹೆಸರಾಕಿ ಸರ್ವೆ ರಿಪೋರ್ಟ್ ಅಂತ ಬಿಡುಗಡೆ ಮಾಡುತ್ತಿವೆ. ನಾನು ಕೂಡ ನಾಳೆ ದುಡ್ಡು ಕೊಟ್ಟು ಈ ರೀತಿ ಮಾಡಿ ಅಂತ ಹೇಳಬಹುದು. ಅಂತ ಅಗತ್ಯ ನನಗಿಲ್ಲ” ಎಂದಿದ್ದಾರೆ.

ಬಿಜೆಪಿ-ಕಾಂಗ್ರೆಸ್ ಮೈತ್ರಿಯಾದರೂ ಅಚ್ಚರಿ ಇಲ್ಲ

“ಮುಂದೆ ಬಿಜೆಪಿ, ಕಾಂಗ್ರೆಸ್ ಮೈತ್ರಿ ಆದರೂ ಅಚ್ಚರಿ ಇಲ್ಲ. ಈ ಬಗ್ಗೆ ಯಾವುದೇ ಸಂಶಯವೇ ಬೇಡ. ನನ್ನ ಮೈತ್ರಿ ಸರ್ಕಾರ ತೆಗೆಯಲು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವ ಹಣ ಕೊಟ್ಟ ವ್ಯಕ್ತಿಗೆ ಮದ್ದೂರಿನಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಲು ಮುಂದಾಗಿದೆ. ಅದೇ ವ್ಯಕ್ತಿಯ ಬಿಜೆಪಿ ಜತೆಗಿನ ಸಂಬಂಧ ಎಂತದ್ದು? ಆತ ಶ್ರೀಲಂಕಾಕ್ಕೆ ಏಕೆ ಓಡಿ ಹೋಗಿದ್ದ?” ಎಂದು ಕುಟುಕಿದ್ದಾರೆ

“ಸಚಿವ ನಾರಾಯಣಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಹೊರಟಿದ್ದಾರೆ ಏಕೆ? ಅದರ ಹಿಂದಿನ ಹಕೀಕತ್ತು ಏನು? ಎಲ್ಲವೂ ಜನರಿಗೆ ಗೊತ್ತಿದೆ. ಹೀಗಾಗಿ ಯಾವುದೇ ಅನುಮಾನ ಬೇಡ, ಕಾಂಗ್ರೆಸ್ – ಬಿಜೆಪಿ‌ ಮೈತ್ರಿ ಒಳ ಒಪ್ಪಂದ ಅದೆಷ್ಟು ಆಳವಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...