‌ವಕ್ಫ್‌ ಬೋರ್ಡ್‌ ಹೆಸರಲ್ಲಿ ರೈತರ ಜಮೀನು ಕಬಳಿಸುವ ಹುನ್ನಾರ, ಸಿಎಂ ಸ್ಪಷ್ಟನೆ ನೀಡಲಿ: ಆರ್‌ ಅಶೋಕ್

Date:

  • ವಕ್ಫ್‌ ಆಸ್ತಿಗಳ ಬಗ್ಗೆ ಗೊಂದಲವಿದ್ದರೆ ಜಂಟಿ ಸಂಸದೀಯ ಸಮಿತಿಯಲ್ಲಿ ಚರ್ಚಿಸಲಿ
  • ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ: ಆರ್‌ ಅಶೋಕ್

ಕಾಂಗ್ರೆಸ್‌ ಸರ್ಕಾರ ಮತ್ತು ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಜಮೀರ್ ಅಹ್ಮದ್‌ ಆಧುನಿಕ ಟಿಪ್ಪು ಸುಲ್ತಾನ್

ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರದಲ್ಲಿ ಚರ್ಚಿಸಲಿ

ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಬಾಯಿ ಬಿಡಲಿ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...