ಸಿಎಂ ರಾಜೀನಾಮೆ ನೀಡಲಿ, ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಆರ್‌ ಅಶೋಕ್‌ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್‌ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನೂ ನ್ಯಾಯಾಲಯ ಹೇಳಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

“ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್‌ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ” ಎಂದು ಪ್ರಶ್ನೆ ಮಾಡಿದರು.

“ಎರಡೂ ಕೋರ್ಟ್‌ಗಳಲ್ಲಿ ಅವರಿಗೆ ಹಿನ್ನಡೆಯಾಗಿದೆ. ಮೇಲಿನ ಕೋರ್ಟ್‌ಗೆ ಹೋಗುವ ಅವಕಾಶ ಇದ್ದೇ ಇದೆ. ಬಿಜೆಪಿ ಏನೂ ಹೇಳಿಲ್ಲ, ಎಲ್ಲವನ್ನೂ ಕೋರ್ಟ್‌ ಹೇಳಿದೆ. ಲೋಕಾಯುಕ್ತ ತನಿಖೆಗೆ ವಹಿಸಿರುವುದರಿಂದ ಎಫ್‌ಐಆರ್‌ ಆಗಲಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾದರೂ ಪೊಲೀಸರು, ಪೊಲೀಸ್‌ ಇಲಾಖೆಯಡಿಯಲ್ಲೇ ಬರುತ್ತಾರೆ” ಎಂದರು.

ಪ್ರತಿಭಟನೆ

“ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ್ದೇವೆ. ಪಕ್ಷದ ಎಲ್ಲ ಮುಖಂಡರು ಸೇರಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸಲಿದ್ದೇವೆ” ಎಂದು ಆರ್‌.ಅಶೋಕ್‌ ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...