ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವು ತಿಳಿಸಲಿ: ವಿಜಯೇಂದ್ರ ಆಗ್ರಹ

Date:

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕು. ನಮ್ಮ ನಿಲುವು ಸ್ಪಷ್ಟವಿದೆ. ನಾವು ರಾಜ್ಯದ ಹಿತಾಸಕ್ತಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ಮಾಧ್ಯಮ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ರಾಜ್ಯದಲ್ಲಿ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿ‌ತ್ತು. ಆದರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ. ಹೀಗಾಗಿ ಸೋಲುವ ಭಯದಿಂದ ಮಕ್ಕಳನ್ನು ನಿಲ್ಲಿಸಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಮನ ತಿಳಿಯಾಗಲಿದೆ. ‌ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಸುಭದ್ರವಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದೆ. ಮಾಧ್ಯಮರಂಗಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ಬಿಜೆಪಿಯಿಂದ ಮೀಡಿಯಾ ಸೆಂಟರ್ ತೆರೆಯಲಾಗಿದೆ. ಇಲ್ಲಿಯೇ ಎಲ್ಲ ಸುದ್ದಿಗೋಷ್ಠಿ ನಡೆಯಲಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಸಿಸೋಡಿಯಾ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಧಿಕಾರಿ, ನನ್ನೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ; ಕೇಜ್ರಿವಾಲ್ ಆರೋಪ

ದಿಕ್ಕು ಕಾಣದಂತಾದ ಕಾಂ‌ಗ್ರೆಸ್:‌ ಆರ್ ಅಶೋಕ್‌ 

“ವಿಪಕ್ಷಗಳ ಇಂಡಿಯಾ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ‘ಇಂಡಿಯಾ’ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕು ಕಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ” ಎಂದು ಆರ್‌ ಅಶೋಕ್‌ ಮಾರ್ಮಿಕವಾಗಿ ಹೇಳಿದರು.

“ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇ ರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಈ ತರಹ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...