ಬಿಜೆಪಿಯ ಹಳೆ ಹಗರಣ ಮುನ್ನೆಲೆಗೆ | ‘ಭಾಗ್ಯಲಕ್ಷ್ಮಿ ಯೋಜನೆʼಯ ಅಕ್ರಮವನ್ನು ಎಸ್‌ಐಟಿಗೆ ಕೊಡಲು ಸಿಎಂಗೆ ರಮೇಶ್‌ ಬಾಬು ಪತ್ರ

Date:

ರಾಜ್ಯ ಸರ್ಕಾರದ ‘ಭಾಗ್ಯಲಕ್ಷ್ಮಿ ಯೋಜನೆ’ಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಸಂಬಂಧ ನಡೆದಿದೆ ಎನ್ನಲಾದ ಸುಮಾರು 23 ಕೋಟಿ ರೂ. ಅವ್ಯವಹಾರವನ್ನು ಎಸ್‌ಐಟಿ ತನಿಖೆಗೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿದೆ” ಎಂದು ದೂರಿದ್ದಾರೆ.

“ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಆ ಸೀರೆಗಳನ್ನು ಕೊಳ್ಳಲಾಗಿದೆ. ಈ ವಹಿವಾಟಿನಲ್ಲಿ ಅಂದಿನ ಬಿಜೆಪಿಯ ವಿಧಾನ ಪರಿಷತ್ತಿನ ಸದಸ್ಯರು ಈಗಿನ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಅವರು ಭಾಗಿಯಾಗಿರುವ ಆರೋಪವಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರುಕಟ್ಟೆಯಲ್ಲಿ ಒಂದು ನೂರು ರೂಪಾಯಿಗಳಿಗೆ ದೊರೆಯಬಹುದಾದ ಸೀರೆಗಳನ್ನು ಹೆಚ್ಚಿನ ದರ ನಮೂದಿಸಿ ರಾಜ್ಯದ ಹೊರಭಾಗದಿಂದ ಅಂದಿನ ಬಿಜೆಪಿ ಸರ್ಕಾರ ಕೊಂಡಿರುತ್ತದೆ. ಈ ಸಂಬಂಧ ಮಾರ್ಚ್ 2011 ರಲ್ಲಿ ಕಾಂಗ್ರೆಸ್ ಪಕ್ಷ ಅಂದಿನ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಸದಸ್ಯರಾದ ಆರ್.ವಿ.ವೆಂಕಟೇಶ್, ದಯಾನಂದ್ ಮುಂತಾದವರು ಚರ್ಚೆ ಮಾಡಿ ಹಗರಣದ ತನಿಖೆಗೆ ಒತ್ತಾಯ ಮಾಡಿದ್ದರು” ಎಂದು ವಿವರಿಸಿದ್ದಾರೆ.

“ಸದರಿ 23 ಕೋಟಿ ರೂಪಾಯಿಗಳ ಹಗರಣದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವಾಗಿದ್ದು, ಇದರ ತನಿಖೆ ಆಗಬೇಕು. ಭಾಗ್ಯಲಕ್ಷ್ಮಿ ಸೀರೆ ವಿತರಣೆಗೆ ಗುಜರಾತಿನ ಸೂರತ್ ನಿಂದ ಸೀರೆಗಳನ್ನು ಹೆಚ್ಚು ಹಣ ನೀಡಿ ಪಡೆಯುವ ಮೂಲಕ ದೊಡ್ಡ ಮಟ್ಟದ ಭ್ರಷ್ಟಾಚಾರ ಎಸಗಿ ರಾಜ್ಯ ಸರ್ಕಾರಕ್ಕೆ ನಷ್ಟವನ್ನು ಉಂಟು ಮಾಡಿರುತ್ತಾರೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಮತ್ತು ಎಷ್ಟು ಸಾರ್ವಜನಿಕ ಹಣ ಲೂಟಿ ಆಗಿದೆ ಎಂಬುವ ಕುರಿತು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡದ ಮೂಲಕ ತನಿಖೆ ಮಾಡುವ ಅವಶ್ಯಕತೆ ಇರುತ್ತದೆ” ಎಂದು ರಮೇಶ್‌ ಬಾಬು ಕೋರಿದ್ದಾರೆ.

“ಕರ್ನಾಟಕದಲ್ಲಿ ಸೀರೆಗಳ ಪೂರೈಕೆಗೆ ವಿಸ್ತಾರವಾದ ಅವಕಾಶವಿದ್ದು, ನಮ್ಮ ರಾಜ್ಯದಲ್ಲೇ ಸೀರೆಗಳನ್ನು ಕ್ರಯಕ್ಕೆ ಪಡೆದುಕೊಂಡಿದ್ದರೆ ಇಲ್ಲಿನ ನೇಕಾರರಿಗೆ ಮತ್ತು ಕೈ ಮಗ್ಗದ ಸಹಕಾರ ಸಂಘಗಳಿಗೆ ಆರ್ಥಿಕವಾಗಿ ಶಕ್ತಿ ಬರುತ್ತಿತ್ತು. ಹೊರ ರಾಜ್ಯದಿಂದ ಸೀರೆಗಳನ್ನು ಹೆಚ್ಚು ದರಕ್ಕೆ ಪಡೆಯುವುದರ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ವಿಶೇಷವಾಗಿ ಇಲ್ಲಿನ ನೇಕಾರರಿಗೆ ಮೋಸ ಎಸಗಲಾಗಿದೆ. ಆದುದರಿಂದ ರಾಜ್ಯದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭಾಗ್ಯಲಕ್ಷ್ಮಿ ಯೋಜನೆಯ 2011 ರ ಬಿಜೆಪಿ ಸರ್ಕಾರದ 23 ಕೋಟಿ ರೂಪಾಯಿಗಳ ಸೀರೆ ಹಗರಣವನ್ನು ವಿಶೇಷ ತನಿಖಾ ತಂಡದ ಮೂಲಕ ತನಿಖೆಗೆ ಒಳಪಡಿಸಬೇಕು” ಎಂದು ಪತ್ರ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...