ನನ್ನ ತಂದೆಯಂತೆ ನಾನು ನಿಮಗಾಗಿ ಇರುತ್ತೇನೆ: ಬ್ರಿಜ್ ಭೂಷಣ್ ಪುತ್ರ

Date:

ಬಿಜೆಪಿಯ ಕೈಸರ್‌ಗಂಜ್ ಲೋಕಸಭಾ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ತಮ್ಮ ತಂದೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಹೊರಿಸಲಾಗಿರುವ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮಾಡಿದ ಆರೋಪವನ್ನು ತಳ್ಳಿ ಹಾಕಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ. ಹಾಗೆಯೇ ನನ್ನ ತಂದೆಯಂತೆ ನಾನು ನಿಮಗಾಗಿ ಇರುತ್ತೇನೆ ಎಂದು ಹೇಳಿದ್ದಾರೆ.

ಕರಣ್ ಭೂಷಣ್ ತನ್ನ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪ್ರತಿದಿನ ಸರಾಸರಿ 10 ಸಣ್ಣ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಶುಕ್ರವಾರ ಸಭೆಯೊಂದರಲ್ಲಿ ಮಾತನಾಡಿದ ಅವರು, “ಮತದಾನಕ್ಕೂ ಮುನ್ನ ಕ್ಷೇತ್ರದ ಪ್ರತಿ ಗ್ರಾಮಗಳ ಜನರನ್ನು ತಲುಪಿ ಬೆಂಬಲ ನೀಡುವಂತೆ ಮನವಿ ಮಾಡಲು ಯೋಜನೆ ರೂಪಿಸಲಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಮಿತ್ರಪಕ್ಷ ಆರ್‌ಎಲ್‌ಡಿ ವಕ್ತಾರ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವೆಲ್ಲರೂ ನನ್ನ ಕುಟುಂಬವನ್ನು ಬೆಂಬಲಿಸಿದ್ದೀರಿ. ನನ್ನ ತಂದೆಯೊಂದಿಗೆ ನಿಂತಿದ್ದೀರಿ. ನಮಗೆ ನೀಡುವ ಬೆಂಬಲ ಹೀಗೆಯೇ ಮುಂದುವರಿಸಬೇಕು ಎಂಬುವುದು ನಮ್ಮ ಆಶಯ. ನನ್ನ ತಂದೆಯಂತೆ ನಾನು ಯಾವಾಗಲೂ ನಿಮ್ಮೊಂದಿಗೆ ಇರುತ್ತೇನೆ” ಎಂದು ಹೇಳಿದರು.

“ನಾವು ಕಳೆದ ಚುನಾವಣೆಯಲ್ಲಿ 2.8 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಈಗ ವಾತಾವರಣ ಬಿಜೆಪಿ ಪರವಾಗಿದ್ದು ಮತ್ತೆ ಅಗಾಧ ಅಂತರದಲ್ಲಿ ಗೆಲುವು ಪಡೆಯಲಿದ್ದೇವೆ. ಯಾರದಾದರೂ ವಿರುದ್ಧ ದೌರ್ಜನ್ಯ ನಡೆದಾಗ ಜನರು ಅವರ ಪರವಾಗಿ ನಿಲ್ಲುತ್ತಾರೆ. ಒಂದುವರೆ ವರ್ಷದಿಂದ ಕೆಲವು ಜನರು ನಮ್ಮ ವಿರುದ್ಧ ಕೆಟ್ಟ ಭಾಷೆ ಬಳಸುತ್ತಿದ್ದಾರೆ. ಆದರೆ ಅದ್ಭುತ ಮತಗಳ ಅಂತರದಿಂದ ಕರಣ್ ಭೂಷಣ್ ಗೆಲ್ಲುವಂತೆ ಜನರು ಬಯಸುತ್ತಾರೆ” ಎಂದು ಬ್ರಿಜ್ ಭೂಷಣ್ ಹೇಳಿಕೊಂಡಿದ್ದಾರೆ.

ಬ್ರಿಜ್ ಭೂಷಣ್ ಕುಟುಂಬಕ್ಕೆ ಗೊಂಡಾ ಮತ್ತು ಹತ್ತಿರದ ಜಿಲ್ಲೆಗಳ ಮೇಲ್ಜಾತಿಯವರ ಬೆಂಬಲ ಅಧಿಕವಾಗಿದ್ದು, ಅದನ್ನು ಕಾಪಾಡಿಕೊಳ್ಳುವ ಪ್ರಯತ್ನದಲ್ಲಿ ಕುಟುಂಬವಿದೆ. ಗೊಂಡಾ, ಬಲರಾಂಪುರ ಮತ್ತು ಕೈಸರ್‌ಗಂಜ್ ಕ್ಷೇತ್ರಗಳನ್ನು ಪ್ರತಿನಿಧಿಸಿ ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್‌ಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ.

ಇದನ್ನು ಓದಿದ್ದೀರಾ? ಬ್ರಿಜ್ ಭೂಷಣ್‌ಗೆ ತಪ್ಪಿದ ಲೋಕಸಭಾ ಟಿಕೆಟ್: ಪುತ್ರನಿಗೆ ಮಣೆ ಹಾಕಿದ ಬಿಜೆಪಿ

ಆರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಆರೋಪವನ್ನು ಬ್ರಿಜ್ ಭೂಷಣ್ ಹೊತ್ತಿದ್ದಾರೆ. ಈ ಆರೋಪದ ಬಳಿಕ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಸ್ಥಾನದಿಂದ ಬ್ರಿಜ್ ಭೂಷಣ್ ಕೆಳಕ್ಕಿಳಿದಿದ್ದಾರೆ. ಇನ್ನು ಕರಣ್ ಭೂಷಣ್ ಅವರ ಹಿರಿಯ ಸಹೋದರ ಪ್ರತೀಕ್ ಭೂಷಣ್ ಸಿಂಗ್ ಬಿಜೆಪಿ ಶಾಸಕರಾಗಿದ್ದಾರೆ. ಅವರ ತಾಯಿ ಕೇತ್ಕಿ ದೇವಿ ಸಿಂಗ್ ಗೊಂಡಾದ ಮಾಜಿ ಸಂಸದೆಯಾಗಿದ್ದಾರೆ. ಒಟ್ಟಾರೆಯಾಗಿ ಈ ಕುಟುಂಬದ ಬಹುತೇಕ ಎಲ್ಲ ಸದಸ್ಯರು ಬಿಜೆಪಿಯಿಂದ ಒಮ್ಮೆಯಾದರೂ ಟಿಕೆಟ್‌ಗಿಟ್ಟಿಸಿಕೊಂಡು ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ.

ಕೈಸರ್‌ಗಂಜ್‌ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದಿಂದ ಸಮಾಜವಾದಿ ಪಕ್ಷದ ರಾಮ್ ಭಗತ್ ಮಿಶ್ರಾ ಅವರು ಕರಣ್ ಎದುರು ಸ್ಪರ್ಧಿಸಲಿದ್ದಾರೆ. ಬಿಎಸ್‌ಪಿಯಿಂದ ನರೇಂದ್ರ ಪಾಂಡೆ ಕಣಕ್ಕಿಳಿದಿದ್ದಾರೆ. ಮೇ 20 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...