ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

Date:

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಸಂಜೆ 5ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90ರಷ್ಟು ಮತದಾನವಾಗಿದೆ.

ದೇಶದಲ್ಲಿ ಇಂದು (ಏ.26) ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇದಾಗಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.

ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಯಿತು. ಬಿಸಿಲಿನ ಕಾವು ಏರುವ ಹೊತ್ತಿಗೆ ಶೇ.22.34ರಷ್ಟು ಮತದಾನ ರಾಜ್ಯದಲ್ಲಿ ಕಂಡು ಬಂತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.38.23ರಷ್ಟು, 3 ಗಂಟೆ ಹೊತ್ತಿಗೆ ಶೇ.50.93ರಷ್ಟು, ಹಾಗೂ ಸಂಜೆ 5 ಗಂಟೆಗೆ ಶೇ.63.90 ರಷ್ಟು ಮತದಾನ ನಡೆದಿದೆ. ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬಹುತೇಕ ಕಡೆ ಮತದಾರರು ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ. ಶತಾಯುಸಿಗಳು ಮತಗಟ್ಟೆಗೆ ಬಂದು ಮತಚಾಲಯಿಸಿದ್ದು ಅಲ್ಲಲ್ಲಿ ಕಂಡುಬಂತು. ಸ್ಟಾರ್‌ ನಟರುಮ ಸೆಲೆಬ್ರೆಟಿಗಳು ತಮ್ಮ ಹತ್ತರಿದರ ಬೂತ್‌ಗಳಿಗೆ ತೆರಳಿ ಮತ ಚಲಾಯಿಸಿದರು.

ಅಭ್ಯರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ದೇವಸ್ಥಾನಗಳಿಗೆ ತೆರಳಿ, ಹಿರಿಯರ ಅಶೀರ್ವಾದ ಪಡೆದು ಮತಚಲಾಯಿಸಿದರು. ಇದೇ ವೇಳೆ ಪ್ರಮುಖ ನಾಯಕಾರ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್‌ ಮತ ಚಲಾಯಿಸಿದ ಬಳಿಕ ಪರಸ್ಪರ ಟೀಕೆಗಳನ್ನು ಮಾಧ್ಯಮಗಳ ಮುಂದೆ ಮಾಡಿದರು.

ಕೆಲವು ಕಡೆ ವಿಳಂಬ

ಹುಣಸೂರು, ರಾಮನಗರ, ಮಂಗಳೂರು, ಚಿಕ್ಕಮಗಳೂರು, ವಿಟ್ಲ, ಸಳ್ಯ ಸೇರಿದಂತೆ ಕೆಲವು ಬೂತ್‌ಗಳಲ್ಲಿ ಇವಿಎಂ ಕೈಕೊಟ್ಟ ಕಾರಣ ಮತದಾನ ತಡವಾಗಿ ಆರಂಭವಾಯಿತು.

ಕಲ್ಲು ತೂರಾಟ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಿದರು.

ಮತದಾನ ಬಹಿಷ್ಕಾರ

ಚಿತ್ರದುರ್ಗ ತಾಲ್ಲೂಕಿನಲ್ಲಿ ಗಣಿಬಾಧಿತ ಪ್ರದೇಶದ ವ್ಯಾಪ್ತಿಯಿಂದ ಹೊರಗಿಟ್ಟ ಕ್ರಮವನ್ನು ವಿರೋಧಿಸಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ಸಿದ್ದಾಪುರ ಗ್ರಾಮಸ್ಥರು, ಶುಕ್ರವಾರ ಮತಗಟ್ಟೆಯತ್ತಲೇ ಸುಳಿಯಲಿಲ್ಲ.

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮತಗಟ್ಟೆಯ ಬಳಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ಚಾಮರಾಜಪೇಟೆ ಮತಗಟ್ಟೆಯ ಬಳಿ ನಡೆಯಿತು. ಮತಗಟ್ಟೆಯ ಬಳಿ ಬಿಜೆಪಿ ಕಾರ್ಯಕರ್ತರು ನಿಂತಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಮಧ್ಯಪ್ರವೇಶ ಮಾಡಿದ ಪೊಲೀಸರು ಗುಂಪನ್ನು ಚದುರಿಸಿದರು.

ಶಿಕ್ಷಕಿ ಹೃದಯಾಘಾತದಿಂದ ನಿಧನ

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿ ಮತಗಟ್ಟೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿ ಯಶೋಧಮ್ಮ(58)ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿ ಬೊಮ್ಮಸಮುದ್ರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು – ಶೇ.72.13
ಹಾಸನ – ಶೇ.72.13
ದಕ್ಷಿಣ ಕನ್ನಡ – ಶೇ.71.83
ಚಿತ್ರದುರ್ಗ – ಶೇ.67.00
ತುಮಕೂರು – ಶೇ.72.10
ಮಂಡ್ಯ – ಶೇ.74.87
ಮೈಸೂರು – ಶೇ.65.85
ಚಾಮರಾಜನಗರ – ಶೇ. 69.60
ಬೆಂಗಳೂರು ಗ್ರಾಮಾಂತರ – ಶೇ.61.78
ಬೆಂಗಳೂರು ಉತ್ತರ – ಶೇ.50.4
ಬೆಂಗಳೂರು ಕೇಂದ್ರ – ಶೇ.48.61
ಬೆಂಗಳೂರು ದಕ್ಷಿಣ – ಶೇ.49.37
ಚಿಕ್ಕಬಳ್ಳಾಪುರ – ಶೇ. 70.97
ಕೋಲಾರ – ಶೇ.71.26

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...