ಲೋಕಸಭಾ ಕ್ಷೇತ್ರ ಮರುವಿಂಗಡಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್

Date:

ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ತಮಿಳುನಾಡಿನ ಅರಣ್ಯ ಸಚಿವ ಪೊನ್ನುಮುಡಿ, ರಾಜ್ಯಸಭೆ ಸದಸ್ಯ ಎಂ ಎಂ ಅಬ್ದುಲ್ಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ಕೇಂದ್ರ ಸರಕಾರದ ಉದ್ದೇಶಿತ ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಕುರಿತು ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ತಮಿಳುನಾಡು ಸಿಎಂ ಸ್ಟಾಲಿನ್ ಅವರು ಚನ್ನೈನಲ್ಲಿ ಇದೇ 22 ರಂದು ಏರ್ಪಡಿಸಿರುವ ದಕ್ಷಿಣ ಭಾರತ ರಾಜ್ಯಗಳ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.

ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಹೆಸರಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಲೋಕಸಭೆ ಕ್ಷೇತ್ರಗಳ ಕಡಿಮೆ ಮಾಡುವ ಷಡ್ಯಂತ್ರ ವಿರುದ್ಧ ಹೋರಾಡಲು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಜಂಟಿ ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಹೀಗಾಗಿ ತಮಿಳುನಾಡಿನ ಮುಖ್ಯಮಂತ್ರಿಗಳ ಪರವಾಗಿ ಅಲ್ಲಿನ ಅರಣ್ಯ ಸಚಿವ ಪೊನ್ನುಮುಡಿ, ರಾಜ್ಯಸಭೆ ಸದಸ್ಯ ಎಂ.ಎಂ ಅಬ್ದುಲ್ಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 22ರಂದು ಚೆನ್ನೈನಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದಾರೆ. ಕ್ಷೇತ್ರ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ಮಾಡಿ ಚರ್ಚೆ ಮಾಡಿದ್ದು, ಅಲ್ಲಿ ಪಕ್ಷಾತೀತವಾಗಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ನಮ್ಮ ಮೈತ್ರಿ ಪಕ್ಷ ಕೂಡ ಆಗಿದ್ದು, ಈ ವಿಚಾರವಾಗಿ ಅವರ ನಿಲುವು ನಮಗೆ ಸಮಾಧಾನವಿದೆ. ಆದರೂ ನಮ್ಮದು ರಾಷ್ಟ್ರೀಯ ಪಕ್ಷವಾಗಿರುವ ಹಿನ್ನೆಲೆಯಲ್ಲಿ, ನಮ್ಮ ಪಕ್ಷದ ವರಿಷ್ಠರ ಜತೆ ಚರ್ಚೆ ಮಾಡಬೇಕು. ಅವರ ಮಾರ್ಗದರ್ಶನ ಪಡೆದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ತಮಿಳುನಾಡಿನ ಸಚಿವರು ಇಂದು ಭಾಷಾ ವಿಚಾರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ನಾವು ನಮ್ಮ ಗೌರವ ಹಾಗೂ ಸ್ವಾಭಿಮಾನ ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...