ಲೋಕಸಭಾ ಚುನಾವಣೆ | ಮೋದಿ 173 ಭಾಷಣಗಳ ಪೈಕಿ 110 ‘ಮುಸ್ಲಿಂ ದ್ವೇಷ’ದಿಂದ ಕೂಡಿವೆ

Date:

ಮಾರ್ಚ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಪ್ರಧಾನಿ ಮೋದಿ ಮಾಡಿದ 173 ಭಾಷಣಗಳ ಪೈಕಿ 110 ಭಾಷಣಗಳು ಮುಸ್ಲಿಂ ವಿರುದ್ಧ ದ್ವೇಷ (ಇಸ್ಲಾಮೋಫೋಬಿಯಾ) ಮತ್ತು ಪ್ರಚೋದನಾಕಾರಿಯಾಗಿವೆ ಎಂದು ಹ್ಯೂಮನ್‌ ರೈಟ್ಸ್‌ ವಾಚ್ (HRW) ಹೇಳಿದೆ.

ಚುನಾವಣಾ ಸಮಯದಲ್ಲಿನ ಮೋದಿ ಭಾಷಣಗಳ ಬಗ್ಗೆ ವಿಶ್ಲೇಷಣೆ ನಡೆಸಿ, ವರದಿ ಬಿಡುಗಡೆ ಮಾಡಿರುವ HRW, “ಈ ಇಸ್ಲಾಮೋಫೋಬಿಕ್ ಹೇಳಿಕೆಗಳು ರಾಜಕೀಯ ವಿರೋಧಿಗಳನ್ನು ದುರ್ಬಲಗೊಳಿಸುವ ಉದ್ದೇಶ ಹೊಂದಿದ್ದವು. ಮೋದಿ ಅವರ ಇಸ್ಲಾಮೋಫೋಬಿಕ್ ಭಾಷಣವು ಕೇವಲ ಮುಸ್ಲಿಂ ವಿರುದ್ಧ ದ್ವೇಷವನ್ನು ಉತ್ತೇಜಿಸುತ್ತದೆ. ತಪ್ಪು ಮಾಹಿತಿಯ ಮೂಲಕ ಬಹುಸಂಖ್ಯಾತ ಹಿಂದು ಸಮುದಾಯದಲ್ಲಿ ಭಯವನ್ನು ಬೆಳೆಸುತ್ತದೆ” ಎಂದು ಹೇಳಿದೆ.

ಬಾಂಗ್ಲಾದೇಶದಲ್ಲಿ ಹಿಂದುಗಳು ಮತ್ತು ಇತರ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ರಕ್ಷಣೆಗಾಗಿ ತಾನು ಆಶಿಸುವುದಾಗಿ ಮೋದಿ ಇತ್ತೀಚೆಗೆ ಹೇಳಿದ್ದರು. ಆದರೆ, ಮೋದಿ ಅವರು ಚುನಾವಣಾ ಸಮಯದಲ್ಲಿ ಮಾಡಿದ ಭಾಷಣಗಳು ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧದ ದ್ವೇಷವನ್ನು ಪ್ರಚೋದಿಸಿದೆ ಎಂದು HRW ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ವಿನೇಶ್ ಫೋಗಟ್ ವಿದಾಯ ಮತ್ತು ದೇಶಭಕ್ತರ ದ್ವೇಷ

ಗುಜರಾತ್‌ನಲ್ಲಿ ಚುನಾವಣಾ ಭಾಷಣ ಮಾಡಿದ್ದ ಮೋದಿ, ಮುಸ್ಲಿಮರನ್ನು ‘ನುಸುಳುಕೋರರು’ ಮತ್ತು ‘ಹೆಚ್ಚು ಮಕ್ಕಳನ್ನು ಹೊಂದಿರುವವರು’ ಎಂದು ತುಚ್ಛವಾಗಿ ಉಲ್ಲೇಖಿಸಿದ್ದರು. ಕಾಂಗ್ರೆಸ್ ಮುಸ್ಲಿಮರಿಗೆ ದೇಶದ ಆಸ್ತಿಯನ್ನು ಹಂಚುತ್ತದೆ ಎಂದು ಸುಳ್ಳು ಪ್ರತಿಪಾದನೆಯನ್ನು ಮುಂದಿಟ್ಟಿದ್ದರು.

ಮೋದಿ ಅವರು ತಮ್ಮ ಪ್ರಚಾರ ಭಾಷಣಗಳಲ್ಲಿ ಮಾಡಿದ ಇದೇ ರೀತಿಯ ಎಲ್ಲ ಹೇಳಿಕೆಗಳು ಮತ್ತು ಇತರ ನಿದರ್ಶನಗಳ ವಿಚಾರದಲ್ಲಿ ಅವರ ವಿರುದ್ಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು HRW ವಿವರಿಸಿದೆ.

“ಚುನಾವಣಾ ಆಯೋಗವು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಆಯೋಗದ ಪತ್ರ ನೀಡಿತು. ತಮ್ಮ ಪಕ್ಷದ ಎಲ್ಲ ಸ್ಟಾರ್ ಪ್ರಚಾರಕರಿಗೆ ಕೋಮುವಾದಿ ಭಾಷಣ ಮಾಡದಂತೆ ಸೂಚಿಸಬೇಕೆಂದು ನಿರ್ದೇಶಿಸಿತು. ಆದರೆ, ದ್ವೇಷ ಭಾಷಣ ಮಾಡದಂತೆ ಮೋದಿ ಅವರನ್ನು ತಡೆಯಲಿಲ್ಲ. ಮೋದಿ ಅವರು ತಮ್ಮ ಪ್ರಚಾರದ ಅವಧಿಯುದ್ದಕ್ಕೂ ದ್ವೇಷವನ್ನು ಪ್ರಚೋದಿಸುವ ಭಾಷಣಗಳನ್ನು ಮುಂದುವರೆಸಿದರು” ಎಂದು HRW ಹೇಳಿದೆ.

ಈ ವರದಿ ಓದಿದ್ದೀರಾ?: ಕಾವಡ್ ಯಾತ್ರೆ | ಆಹಾರದಲ್ಲಿ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

“ಮೋದಿಯ 10 ವರ್ಷಗಳ ಆಡಳಿತದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದಾಳಿ ಮತ್ತು ತಾರತಮ್ಯ ಹೆಚ್ಚಾಗಿದೆ. ಮೋದಿ ಮತ್ತು ಇತರ ಬಿಜೆಪಿ ನಾಯಕರು ಮಾಡಿದ ‘ದ್ವೇಷ’ ಭಾಷಣಗಳು ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಇತರರ ವಿರುದ್ಧದ ನಿಂದನೆ, ದ್ವೇಷವನ್ನು ಮತ್ತಷ್ಟು ಸಾಮಾನ್ಯಗೊಳಿಸಿದೆ” ಎಂದು HRWನ ಏಷ್ಯಾ ನಿರ್ದೇಶಕಿ ಎಲೈನ್ ಪಿಯರ್ಸನ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ನಂತರ ಭಾರತೀಯ ಅಧಿಕಾರಿಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದಾರೆ. ಕಾವಡ್ ಯಾತ್ರೆಗೆ ಮುಂಚಿತವಾಗಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಅಧಿಕಾರಿಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ‘ಉಪಾಹಾರ ಮತ್ತು ಆಹಾರ ಮಳಿಗೆಗಳ ಮಾಲೀಕರು ತಮ್ಮ ಹೆಸರುಗಳನ್ನು ಅಂಗಡಿಯ ಎದುರು ಪ್ರದರ್ಶಿಸಬೇಕು’ ಎಂದು ಆದೇಶಗಳನ್ನು ಹೊರಡಿಸಿದ್ದರು. ಮಧ್ಯಪ್ರದೇಶದಲ್ಲಿ ದನದ ಮಾಂಸ ಇಟ್ಟುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಮುಸ್ಲಿಮರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.

“2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ಮುಸ್ಲಿಂ ವಿರೋಧಿ ದ್ವೇಷದ ಮಾತುಗಳು ಹೆಚ್ಚಾಗಿವೆ” ಎಂದು HRW ಗಮನ ಸೆಳೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...