ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Date:

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು ಭವರಸೆಗಳನ್ನು ಘೋಷಿಸಿದೆ

ಕೃಷಿ ಕ್ಷೇತ್ರಕ್ಕೆ ಗ್ಯಾರಂಟಿಗಳನ್ನು ಘೋಷಿಸಿ, ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ದೇಶದ ಎಲ್ಲ ಅನ್ನದಾತರಿಗೆ ನನ್ನ ನಮನ! ಕಾಂಗ್ರೆಸ್ ನಿಮಗಾಗಿ 5 ಭರವಸೆಗಳನ್ನು ತಂದಿದೆ. ಈ ಭರವಸೆಗಳು ನಿಮ್ಮ ಎಲ್ಲ ಸಮಸ್ಯೆಗಳನ್ನು ಅವುಗಳ ಮೂಲದಿಂದ ತೊಡೆದು ಹಾಕುತ್ತವೆ” ಎಂದಿದ್ದಾರೆ.

ರೈತರಿಗೆ ಕಾಂಗ್ರೆಸ್‌ ಭರವಸೆಗಳು ಹೀಗಿವೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.
  2. ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.
  3. ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.
  4. ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.
  5. ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಕಾಂಗ್ರೆಸ್ ಭರವಸೆ1

“ತಮ್ಮ ಬೆವರಿನಿಂದ ನಾಡಿನ ಮಣ್ಣಿಗೆ ನೀರುಣಿಸುವ ರೈತರ ಬದುಕು ಹಸನುಗೊಳಿಸುವುದು ಕಾಂಗ್ರೆಸ್‌ನ ಉದ್ದೇಶವಾಗಿದೆ. ನಮ್ಮ 5 ಐತಿಹಾಸಿಕ ನಿರ್ಧಾರಗಳು ಆ ನಿಟ್ಟಿನಲ್ಲಿ ಕೈಗೊಂಡ ಹೆಜ್ಜೆಗಳಾಗಿವೆ. ಭಾರತದ ಕೃಷಿ ವ್ಯವಸ್ಥೆಯಲ್ಲಿ ‘ಸಮೃದ್ಧಿಯ ಸೂರ್ಯ’ ಉದಯಿಸಲಿದೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...