ಲೋಕಸಭೆ ಚುನಾವಣೆ | ಕುಮಾರಸ್ವಾಮಿ ಸಭೆಯ ಬೆನ್ನಲ್ಲೇ ಸಿ ಪಿ ಯೋಗೇಶ್ವರ್ ದೆಹಲಿಯಲ್ಲಿ ಅಚ್ಚರಿ ಹೇಳಿಕೆ

Date:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಗಳವಾರ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮುಖಂಡರ ನಡುವೆ ಗಂಭೀರ ಚರ್ಚೆ ನಡೆದಿದ್ದು, ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಮತ್ತು ದೇವೇಗೌಡರ ಅಳಿಯ ಡಾ. ಸಿ ಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಬುಧವಾರ ದೆಹಲಿಯಲ್ಲಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

“ಬೆಂಗಳೂರು ಗ್ರಾಮಾಂತರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವತ್ಥನಾರಾಯಣ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದ್ದರು. ಇನ್ನು ಆರ್ ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅವರೂ ಸಹ ಬೆಂಗಳೂರು ಗ್ರಾಮಾಂತರಿಂದ ಸ್ಪರ್ಧೆ ಮಾಡಬಹುದು” ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿ ಕೆ ಸುರೇಶ್​ ವಿರುದ್ಧ ಬಿಜೆಪಿಯಿಂದ ಡಾ. ಸಿ ಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡುವೆ, ಪಿ ಯೋಗೇಶ್ವರ್ ಹೇಳಿಕೆ ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಿ ಕೆ ಸುರೇಶ್ ಅವರನ್ನು ಸೋಲಿಸಲು ಲೆಕ್ಕಾಚಾರ ಹಾಕಿದ್ದಾರೆ. ಮೊದಲಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಿ ಪಿ ಯೋಗೇಶ್ವರ್ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದನ್ನು ಅವರೇ ತಳ್ಳಿ ಹಾಕಿದ್ದಾರೆ.

“ಎರಡು ದಿನಗಳಲ್ಲಿ ಅಭ್ಯರ್ಥಿ ಯಾರು ಎನ್ನುವುದು ಗೊತ್ತಾಗಲಿದೆ. ನಾನು ಮಂಜುನಾಥ್ ಅವರನ್ನು ಒಪ್ಪಿಸುವ ಕೆಲಸ ಮಾಡಿದ್ದು. ಅಂತಿಮವಾಗಿ ಪಕ್ಷ ತೀರ್ಮಾನ ತೆಗೆದುಕೊಳ್ಳಬೇಕು. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಎಂದುಕೊಂಡಿದ್ದೇನೆ. ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೆ ನೋಡೋಣ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...