ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ: ಸಂಸದ ಡಿ ಕೆ ಸುರೇಶ್

Date:

  • ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸಂಸದ ಸುರೇಶ್
  • ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ ಎಂದು ಬೇಸರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ವಿಚಾರದಲ್ಲಿ ಸದ್ಯ ಯಾವುದೇ ತೀರ್ಮಾನ ಮಾಡಿಲ್ಲ, ಕಾರ್ಯಕರ್ತರ ಸಲಹೆ ಪಡೆದು ಮುಂದುವರೆಯುವೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿಕೊಂಡಿದ್ದಾರೆ.

ರಾಮನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸ್ಪರ್ಧೆ ಬಗ್ಗೆ ಕಾರ್ಯಕರ್ತರ, ಮುಖಂಡರ ಸಲಹೆ ಪಡೆಯಬೇಕು. ಆದರೆ ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ. ರಾಜಕೀಯ ಸಾಕಾಗಿದೆ ಎಂದು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಅಧಿಕಾರದ ದಾಹ ಇರುವವರಿಗೆ ರಾಜಕೀಯ ಬೇಕಾಗುತ್ತದೆ. ಆದರೆ ನನಗಿರುವುದು ಅಭಿವೃದ್ದಿಯ ದಾಹ, ಈ ಕೆಲಸ ಮಾಡುವವರಿಗೆ ನನ್ನ ಬೆಂಬಲವಿದೆ. ಹೀಗಾಗಿ ಬೇರೆಯವರಿಗೆ ಅವಕಾಶ ನೀಡುವುದು ನನ್ನ ಉದ್ದೇಶ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ಮಂಗಳೂರು | ಕೋಮು ದ್ವೇಷಕ್ಕೆ ಬಲಿಯಾದವರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

ಇತ್ತೀಚಿಗಷ್ಟೆ ತಮ್ಮ ಚುನಾವಣಾ ರಾಜಕೀಯದ ಬಗ್ಗೆ ಮಾತನಾಡಿದ್ದ ಸುರೇಶ್, ಹಾಲಿ ರಾಜಕಾರಣದ ಶೈಲಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಆಗಲೂ ನನಗೆ ರಾಜಕಾರಣ ಸಾಕೆನಿಸಿಬಿಟ್ಟಿದೆ ಎನ್ನುವ ಮೂಲಕ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದರು. ಇಂದು ಮತ್ತೆ ಅದೇ ವಿಚಾರ ಪ್ರಸ್ತಾಪಿಸುವ ಮೂಲಕ ಅವರ ರಾಜಕೀಯ ನಿವೃತ್ತಿ ಪ್ರಶ್ನೆಯನ್ನು ಪುನರ್ ಉಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...