ಲೋಕಸಭಾ ಚುನಾವಣೆ | ತಮಿಳುನಾಡು: ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ಮೇಲ್ಪತಿ ದಲಿತರು

Date:

ತಮಿಳುನಾಡಿನ ಮೇಲ್ಪತಿ ಗ್ರಾಮದ 450 ಹೆಚ್ಚು ದಲಿತ ಮತದಾರರು ತಮಗೆ ಲೋಕಸಭಾ ಚುನಾವಣೆಯಲ್ಲಿ ಪ್ರತ್ಯೇಕ ಮತಗಟ್ಟೆ ನೀಡುವಂತೆ ಒತ್ತಾಯಿಸಿದ್ದಾರೆ. 2023ರ ಏಪ್ರಿಲ್‌ನಲ್ಲಿ ಗ್ರಾಮದ ದ್ರೌಪದಿ ಅಮ್ಮನ್ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಿದ್ದಕ್ಕಾಗಿ, ಅವರ ಮೇಲೆ ಹಲ್ಲೆ, ಜಾತಿ ನಿಂದನೆ ನಡೆದಿತ್ತು. ಹೀಗಾಗಿ, ಈಗ ಮತ ಚಲಾಯಿಸಲು ಗ್ರಾಮದ ಒಳಗೆ ಹೋದರೆ, ಮತ್ತೆ ಪ್ರಬಲ ಜಾತಿಗರು ಹಲ್ಲೆ ನಡೆಸಬಹುದು ಎಂಬ ಭಯ ದಲಿತರನ್ನು ಕಾಡುತ್ತಿದೆ.

ಗ್ರಾಮದ ದಲಿತರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. “ಪ್ರಬಲ ಜಾತಿಯವರು ಅವಕಾಶ ಸಿಕ್ಕಾಗಲೆಲ್ಲ ನಮ್ಮ ಮೇಲೆ ದಾಳಿ ನಡೆಸುವ ತಂತ್ರ ಎಣೆಯುತ್ತಿದ್ದಾರೆ. ಇದರಿಂದ ನಾವು ಭಯಭೀತರಾಗಿದ್ದೇವೆ. ಗ್ರಾಮದಲ್ಲಿ ಮತಗಟ್ಟೆಯು ಪ್ರಬಲ ಜಾತಿಗರಿರುವ ಪ್ರದೇಶದಲ್ಲಿದೆ. ಮತದಾನದ ದಿನ ನಾವು ಅಲ್ಲಿಗೆ ಹೋಗುವುದು ಸುರಕ್ಷಿತವಲ್ಲ. ಹೀಗಾಗಿ, ನಮಗೆ ಮತ ಚಲಾಯಿಸಲು ಪ್ರತ್ಯೇಕ ಮತಗಟ್ಟೆ ಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವು ಪ್ರತ್ಯೇಕ ಮತಗಟ್ಟೆ ಕೇಳುತ್ತಿರುವುದು ಭಯದಿಂದಲ್ಲ. ಆದರೆ, ನಮ್ಮ ಆತ್ಮಗೌರವ ಮತ್ತು ಘನತೆಯನ್ನು ಕಾಪಾಡುವುವುದಕ್ಕಾಗಿ. ಒಂದು ವರ್ಷದ ಹಿಂದೆ, ದೇವಸ್ಥಾನಕ್ಕೆ ಪ್ರವೇಶಿಸಿದ ಕಾರಣಕ್ಕೆ ಪ್ರಬಲ ಜಾತಿಗರು ಜಾತಿ ಹಿಂದೂಗಳು) ಅಟ್ಟಿಸಿಕೊಂಡು ಬಂದು ಹಲ್ಲೆ ನಡೆಸಿದ್ದರು. ನಂತರ, ನಾವು ಅವರಿಂದ ದೂರ ಉಳಿದಿದ್ದೇವೆ” ಎಂದು ಗ್ರಾಮದ ದಲಿತ ನಿವಾಸಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಬಲ ಜಾತಿಯವರು ನಮ್ಮನ್ನು ಕೃಷಿ ಕಾರ್ಮಿಕರಾಗಿ ನೇಮಿಸಿಕೊಳ್ಳುವುದನ್ನೂ ನಿಲ್ಲಿಸಿದ್ದಾರೆ. ಅಲ್ಲದೆ, ನಮ್ಮ ಮೇಲಿನ ಹಿಂಸಾಚಾರ ಮತ್ತು ಜಾತಿ ತಾರತಮ್ಯಕ್ಕಾಗಿ ಬಲಿಷ್ಠ ಜಾತಿಯವರಲ್ಲಿ ಯಾರನ್ನೂ ಈವರೆಗೆ ಬಂಧಿಸಿಲ್ಲ. ಘಟನೆಯನ್ನು ನಿಭಾಯಿಸುವಲ್ಲಿ ಸರ್ಕಾರದ ನಿಷ್ಕ್ರಿಯತೆ ಮತ್ತು ಪೊಲೀಸರ ನಿರಾಸಕ್ತಿ ತೋರಿದ್ದಾರೆ. ಹೀಗಾಗಿ, ಮತದಾನದ ದಿನದಂದು ಆಡಳಿತಗಳು ಒದಗಿಸಿದ ಭದ್ರತೆಯ ಬಗ್ಗೆ ನಮಗೆ ಅಪನಂಬಿಕೆ ಇದೆ. ನಾವು ಮತ್ತೆ ಅದೇ ನೋವನ್ನು ಅನುಭವಿಸಲು ಚುನಾವಣೆ ಕಾರಣವಾಗಬಾರದು” ಎಂದು ಅವರು ಹೇಳಿದ್ದಾರೆ.

“ಹೊಸ ಬೂತ್ ಸ್ಥಾಪಿಸಲು ಸಾಧ್ಯವಾಗದಿದ್ದರೆ, ನಾವು ಜಿಲ್ಲಾಕೇಂದ್ರದಲ್ಲಿಯೇ ಮತ ಚಲಾಯಿಸುತ್ತೇವೆ. ಮತದಾನದ ದಿನ ಅಲ್ಲಿಗೆ ಹೋಗಲು ನಮ್ಮ ಸ್ವಂತ ಹಣವನ್ನು ಖರ್ಚು ಮಾಡುತ್ತೇವೆ. ಕೇವಲ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕಾಗಿ ನಾವು ಅವಮಾನಕ್ಕೊಳಗಾದ ಊರಿಗೆ (ಜಾತಿ ಹಿಂದೂ ಪ್ರದೇಶ) ನಾವು ಹೋಗುವುದಿಲ್ಲ” ಎಂದು ಗ್ರಾಮದ ದಲಿತ ಮುಖಂಡರು ಹೇಳಿದ್ದಾಗಿ ‘ಟಿಎನ್‌ಐಇ’ ವರದಿ ಮಾಡಿದೆ.

ಮೇಲ್ಪತಿ ಗ್ರಾಮದ ದಲಿತರು ಪ್ರತ್ಯೇಕ ಮತಗಟ್ಟೆಗಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಮತದಾರರ ಸಂಖ್ಯೆ 1,500ಕ್ಕಿಂತ ಹೆಚ್ಚಿದ್ದರೆ ಮಾತ್ರ ಬೂತ್ ಹಂಚಿಕೆ ಮಾಡಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮಸ್ಯೆಗೆ ಪ್ರತಿಕ್ರಿಯಿಸಿದರುವ ಜಿಲ್ಲಾಧಿಕಾರಿ ಪಳನಿ, “ನಾವು ಮೇಲ್ಪತಿ ಗ್ರಾಮದ ಮತಗಟ್ಟೆಯನ್ನು ನಿರ್ಣಾಯಕ/ದುರ್ಬಲ ಮತಗಟ್ಟೆ ಎಂದು ಗುರುತಿಸಿದ್ದೇವೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ವಿಶೇಷ ರಕ್ಷಣೆ, ಲೈವ್ ವೆಬ್‌ಕ್ಯಾಮ್ ಕಾಸ್ಟಿಂಗ್, ರಾಜ್ಯ ಪೊಲೀಸ್ ಪಡೆ ಮತ್ತು ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸುತ್ತೇವೆ. ದಲಿತರು ಶಾಂತಿಯಿಂದ ಮತ ಚಲಾಯಿಸಬಹುದು. ಯಾವುದೇ ಅನಾಹುತ ಸಂಭವಿಸದಂತೆ ನೋಡಿಕೊಳ್ಳಲಾಗುವುದು. ಇದಲ್ಲದೆ, ಚುನಾವಣೆಯ ದಿನದಂದು ದಲಿತರೊಂದಿಗೆ ಜಗಳವಾದಲ್ಲಿ ಪ್ರಬಲ ಜಾತಿಗರಿಗೆ ಕಠಿಣ ಪೊಲೀಸ್ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...