ಲೋಕಸಭೆ ಚುನಾವಣೆ | ತಮ್ಮ ಸಂಬಂಧಿಕರಿಗೆ ಟಿಕೆಟ್‌ ಗಿಟ್ಟಿಸಲು ಪ್ರಮುಖ ಕಾಂಗ್ರೆಸ್ಸಿಗರ ಲಾಬಿ

Date:

ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಲಿಷ್ಠ ಆಕಾಂಕ್ಷಿಗಳು ಇಲ್ಲದಿರುವ ಕಾರಣ ತಮ್ಮ ಮಗನಿಗೆ ಟಿಕೆಟ್ ದೊರೆಯುವ ಭರವಸೆಯಲ್ಲಿದ್ದಾರೆ ಸಚಿವ ಮಹದೇವಪ್ಪ

ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ, ಸಂಸತ್ ಚುನಾವಣೆಯಲ್ಲಿ ದಕ್ಷಿಣ ಭಾರತವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಹವಣಿಸುತ್ತಿದೆ. ಅದಕ್ಕಾಗಿ, ಜಾತಿ ಲೆಕ್ಕಾಚಾರದಿಂದ ಹಿಡಿದು ಸ್ಥಳೀಯ ಶಾಸಕರಲ್ಲಿ ಒಮ್ಮತವನ್ನು ಖಚಿತಪಡಿಸಿಕೊಳ್ಳುವುದು ವರಿಷ್ಠರ ಬಲವಾದ ಇರಾದೆ. ಈ ನಡುವೆ, ತಮ್ಮ ಸಂಬಂಧಿಕರಿಗೆ ಟಿಕೆಟ್ ಗಿಟ್ಟಿಸಲು ಪ್ರಮುಖ ಕಾಂಗ್ರೆಸ್ಸಿಗರು ಲಾಬಿ ಮಾಡಲು ಆರಂಭಿಸಿದ್ದಾರೆ.‌ ಪಕ್ಷದ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.

ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರು ತಮ್ಮ ಮಗ ಸುನೀಲ್ ಬೋಸ್ ಅವರಿಗೆ ಚಾಮರಾಜನಗರ ಮೀಸಲು ಕ್ಷೇತ್ರದ ಟಿಕೆಟ್ ಬಯಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಶಿವಮೊಗ್ಗದಿಂದ ಕಣಕ್ಕಿಳಿಸಲು ಇಚ್ಛಿಸಿದ್ದಾರೆ.

ಶಾಸಕ ವಿಜಯಾನಂದ ಕಾಶಪ್ಪನವರ್ ತಮ್ಮ ಪತ್ನಿ ವೀಣಾ ಅವರಿಗೆ ಟಿಕೆಟ್ ಬಯಸಿದ್ದರೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಿಂದ ತಮ್ಮ ಮಗಳ ರಾಜಕೀಯ ಪ್ರವೇಶ ಬಯಸಿದ್ದಾರೆ. ತಮ್ಮ ಪುತ್ರ ಯತೀಂದ್ರ ಅವರನ್ನು ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಸುವ ಇರಾದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆಕಾಂಕ್ಷಿಗಳಲ್ಲಿ ಹೆಚ್ಚಿನವರು ಪ್ರಬಲ ಅಭ್ಯರ್ಥಿಗಳಾಗಿದ್ದರೂ, ಜಾತಿ ಲೆಕ್ಕಾಚಾರ ಮತ್ತು ಇತರ ಮಾನದಂಡಗಳ ಹೊಂದಾಣಿಕೆಯನ್ನು ಸಾಧಿಸುವ, ಇಲ್ಲವೇ ಸಮತೂಕ ಕಾಪಾಡುವ ಕಸರತ್ತು ಕಠಿಣವಾದೀತು ಎಂಬ ಅಭಿಪ್ರಾಯವಿದೆ.

“ಉದಾಹರಣೆಗೆ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪಕ್ಷಗಳು ಬಹುತೇಕ ಒಕ್ಕಲಿಗ ಹುರಿಯಾಳುಗಳನ್ನೇ ಇಳಿಸುತ್ತಿವೆ. ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಈ ಕ್ಷೇತ್ರದ ಒಕ್ಕಲಿಗ ಪ್ರಾಬಲ್ಯದ ಅಂಶವನ್ನು ಪಕ್ಷ ಹೇಗೆ ನಿರ್ವಹಿಸುತ್ತದೆ ಎಂಬುದು ಕುತೂಹಲಕರ ಸಂಗತಿ. ಅದೇ ರೀತಿ ಬೆಳಗಾವಿಯಲ್ಲಿ ಲಿಂಗಾಯತ-ವಾಲ್ಮೀಕಿ ಸಮುದಾಯದಕ್ಕೆ ಟಿಕೆಟ್ ನೀಡಿಕೆಯ ಇಬ್ಬಂದಿಯು ಕಾಂಗ್ರೆಸ್‌ನಲ್ಲಿ ತೊಡಕು-ಒಡಕು ಉಂಟು ಮಾಡುವ ಸಾಧ್ಯತೆ ಇದೆ” ಎಂಬುದು ಹಿರಿಯ ಕಾಂಗ್ರೆಸ್ಸಿಗರೊಬ್ಬರ ಅನಿಸಿಕೆ.

ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಲಿಷ್ಠ ಆಕಾಂಕ್ಷಿಗಳು ಇಲ್ಲದಿರುವ ಕಾರಣ ತಮ್ಮ ಮಗನಿಗೆ ಟಿಕೆಟ್ ದೊರೆಯುವ ಭರವಸೆಯಲ್ಲಿ ಸಚಿವ ಮಹದೇವಪ್ಪ ಇದ್ದಾರೆ. 2019ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಮರುನಾಮಕರಣ ಬಯಸಿದ್ದು, ಟಿಕೆಟ್‌ಗಾಗಿ ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಬಹಿರಂಗವಾಗಿ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶಿವರಾಜ್ ಕುಮಾರ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೋರಿದ್ದೂ ಇದೆ. ಆದರೆ, ಗೀತಾ ಶಿವರಾಜ್‌ ಕುಮಾರ್‌ ಅವರ ಸ್ಪರ್ಧೆಗೆ ಅವಕಾಶ ನೀಡುವಂತೆ ಬಹಿರಂಗವಾಗಿಯೇ ಶಿವರಾಜ್ ಕುಮಾರ್ ಕೋರಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಕಣಕ್ಕಿಳಿಸಲು ಸಿದ್ಧ ಎಂದು ಶೆಟ್ಟರ್ ಅವರಿಗೆ ಬಹಿರಂಗ ಆಹ್ವಾನವನ್ನು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಕೊಂಡು ಬರುತ್ತೇವೆ: ಡಿ ಕೆ ಶಿವಕುಮಾರ್

ಸಚಿವ ಜಮೀರ್ ಅಹ್ಮದ್ ಅವರು ಹಾವೇರಿ ಮತ್ತು ಬೆಂಗಳೂರು ಸೆಂಟ್ರಲ್ ಸೇರಿದಂತೆ ಕನಿಷ್ಠ ಎರಡು ಸ್ಥಾನಗಳಿಂದ ಅಲ್ಪಸಂಖ್ಯಾತರ ಟಿಕೆಟ್ ಬಯಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಎಐಸಿಸಿಗೆ ಕಳುಹಿಸಲಾಗುವುದು, ನಂತರ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ‌ ಪಟ್ಟಿಯನ್ನು ಅಂತಿಮಗೊಳಿಸಲು ಎರಡು ಸಮೀಕ್ಷೆಗಳನ್ನು ನಡೆಸುತ್ತಾರೆ. ಜನವರಿ ಅಂತ್ಯದ ವೇಳೆಗೆ ಪಟ್ಟಿ ಸಿದ್ಧವಾಗುತ್ತದೆಂಬ ನಿರೀಕ್ಷೆ ನಮ್ಮದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹೇಳಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...