ಜಾರ್ಖಂಡ್‌| ಶಿಬು ಸೊರೇನ್‌ ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ

Date:

ಜಾರ್ಖಂಡ್‌ನ ಸಂತಾಲ್ ಪರಗಣದ ಮೂರು ಲೋಕಸಭಾ ಸ್ಥಾನಗಳ ಚುನಾವಣೆ ನಡೆಯುತ್ತಿದ್ದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಧ್ಯಕ್ಷ ಶಿಬು ಸೊರೇನ್‌ ಅವರ ಇಬ್ಬರು ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ ನಡೆಯುತ್ತಿದೆ.

ಜೆಎಂಎಂನ ಭದ್ರಕೋಟೆಯನ್ನು ಮುರಿದು ಹಾಕಲು ಬಿಜೆಪಿ ಸರ್ವಪ್ರಯತ್ನ ಮಾಡುತ್ತಿದೆ. ಜಾರಿ ನಿರ್ದೇಶನಾಲಯವು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರನ್ನು ಬಂಧಿಸಿದ ನಂತರ ಜೆಎಂಎಂ ಅನ್ನು ದುರ್ಬಲಗೊಳಿಸಿ ಬಿಜೆಪಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಇದನ್ನು ಓದಿದ್ದೀರಾ?  ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಮ್ಕಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸೊರೇನ್‌ ಕುಟುಂಬದ ಹೊರಗಿನವರನ್ನು ಜೆಎಂಎಂ ಕಣಕ್ಕಿಳಿಸಿದೆ. ಶಿಬು ಸೊರೇನ್ ಅವರ ಸೊಸೆ ಸೀತಾ ಸೊರೇನ್ ಅವರು ಬಿಜೆಪಿ ಟಿಕೆಟ್‌ನಿಂದ ಜೆಎಂಎಂನ ನಳಿನ್ ಸೊರೇನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ನಳಿನ್ ಸೊರೇನ್ ಅವರು ದುಮ್ಕಾದಿಂದ ಸ್ಪರ್ಧಿಸಿದ್ದರೂ ಕೂಡಾ ಸೊಸೆಯಂದಿರು ಕಲ್ಪನಾ ಸೊರೇನ್ ಮತ್ತು ಸೀತಾ ಸೊರೇನ್ ನಡುವೆ ನಿಜವಾದ ಸ್ಪರ್ಧೆ ನಡೆಯುತ್ತಿದೆ.

ಪತಿಯ ಅನುಪಸ್ಥಿತಿಯಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್ ಅವರು ಸ್ಟಾರ್ ಪ್ರಚಾರಕರಾಗಿದ್ದಾರೆ. ಸಂತಾಲ್ ಪರಗಣದಲ್ಲಿ ಮಾತ್ರ 15ಕ್ಕೂ ಹೆಚ್ಚು ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದನ್ನು ಓದಿದ್ದೀರಾ?  ಭೂಹಗರಣ ಪ್ರಕರಣ | ಫೆ.22ರವರೆಗೆ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ನ್ಯಾಯಾಂಗ ಬಂಧನ

ಮೂರು ಅವಧಿಯ ಜೆಎಂಎಂ ಶಾಸಕಿ ಸೀತಾ ಸೊರೆನ್ ಅವರು ತಮ್ಮ ಪತಿ ನಿಧನವಾದ ನಂತರ ಜೆಎಂಎಂನಲ್ಲಿ ತನ್ನನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಎಂಎಂ ತೊರೆದು ಬಿಜೆಪಿ ಸೇರಿದ್ದಾರೆ. ಇದಾದ ಒಂದು ದಿನದಲ್ಲೇ ಕಲ್ಪನಾ ಸೊರೇನ್ ‘ಎಕ್ಸ್’ ಪೋಸ್ಟ್‌ನಲ್ಲಿ “ತಲೆ ಬಾಗುವುದು ಜಾರ್ಖಂಡ್ ಜನರ ಡಿಎನ್‌ಎಯಲ್ಲಿಲ್ಲ” ಎಂದು ಬರೆದುಕೊಂಡಿದ್ದಾರೆ. ಅಂದಿನಿಂದ ಸೊಸೆಯಂದಿರ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಬಿಜೆಪಿ ಸ್ಟಾರ್ ಪ್ರಚಾರಕರಾಗಿದ್ದಾರೆ. ದುಮ್ಕಾದಲ್ಲಿ ಸೀತಾ ಸೋರೆನ್, ಗೊಡ್ಡಾದಲ್ಲಿ ನಿಶಿಕಾಂತ್ ದುಬೆ ಮತ್ತು ರಾಜಮಹಲ್‌ನಲ್ಲಿತಾಲಾ ಮರಾಂಡಿ ಪರವಾಗಿ ಬಾಬುಲಾಲ್ ಮರಾಂಡಿ ಪ್ರಚಾರ ನಡೆಸಿದ್ದಾರೆ.

ದುಮ್ಕಾದಲ್ಲಿ ಬಾಬುಲಾಲ್ ಮರಾಂಡಿ ಅವರು 1998 ಮತ್ತು 1999ರಲ್ಲಿ ಶಿಬು ಸೊರೆನ್ ಅವರನ್ನು ಸೋಲಿಸಿ ಸಂತಾಲ್ ಪರಗಣದಲ್ಲಿ ತಮ್ಮನ್ನು ತಾವು ಬುಡಕಟ್ಟು ನಾಯಕರನ್ನಾಗಿಸಿದದಾರೆ. ಹೀಗಾಗಿ ಈ ಚುನಾವಣೆ ಅವರ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...