ಯುವ, ಮಹಿಳಾ ಹಾಗೂ ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್: ಡಿಸಿಎಂ ಡಿ ಕೆ ಶಿವಕುಮಾರ್

Date:

ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, “ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು”ಎಂದರು.

ಇಂದು ಸಂಜೆ ಅಂತಿಮ ಪಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.ʼ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಸಚಿವನಾಗಿದ್ದೇನೆ

ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಹೇಳಿದರು.

“ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು.

ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ” ಎಂದರು.

ಧಾರ್ಮಿಕ ಸಂಸ್ಥೆಗಳ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದಾಗ “ಈ ವಿಚಾರದಲ್ಲಿ ಬಿಜೆಪಿಯದ್ದು ಇಬ್ಬಗೆಯ ನೀತಿ. ಸಣ್ಣ, ಸಣ್ಣ ದೇವಾಲಯಗಳ, ಅರ್ಚಕರ ಅಭಿವೃದ್ದಿಗೆ ಪೂರಕವಾಗಿದ್ದ ಈ ಮಸೂದೆಯನ್ನು ಬಿಜೆಪಿ ವಿರೋಧಿಸಿ ತನ್ನ ನಿಜ ಬಣ್ಣವನ್ನು ಬಯಲುಮಾಡಿಕೊಂಡಿದೆ. ಮುಂದಿನ ಜೂನ್ ತಿಂಗಳ ಅಧಿವೇಶನದಲ್ಲಿ ಬಹುಮತ ಸಿಗಲಿದೆ” ಎಂದು ಉತ್ತರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...