ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

Date:

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಾರೆ ಎಂಬ ಮಾತುಗಳೂ ಇದ್ದು, ಅವರು ಈ ಬಾರಿ ಮೈಸೂರನ್ನು ಕಾಂಗ್ರೆಸ್ಸಿಗೆ ಗೆಲ್ಲಿಸಿಕೊಡಬೇಕು. ಇದೇ ಅವರು ಕಾಂಗ್ರೆಸ್‌ಗೆ ಕೊಡುವ ಉಡುಗೊರೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್‌ನ ಹಲವರನ್ನು ಪಕ್ಷಕ್ಕೆ ಸೆಳೆಯುವ ಮೂಲಕ, ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.

ಹಲವಾರು ಬಿಜೆಪಿ-ಜೆಡಿಎಸ್‌ ಮುಖಂಡರನ್ನು ಪಕ್ಷಕ್ಕೆ ಸೆಳೆಯುತ್ತಿರುವ ಕಾಂಗ್ರೆಸ್‌, ಇದೀಗ, ಬಿಜೆಪಿ ಯುವ ಮೂರ್ಚಾದ ಉಪಾಧ್ಯಕ್ಷ, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್‌ ಅವರನ್ನು ಪಕ್ಷಕ್ಕೆ ಕರೆತರಲು ಮುಂದಾಗಿದೆ. ಸದ್ಯ, ಧೀರಜ್ ಕೂಡ ಬಿಜೆಪಿ ತೊರೆಯಲು ಸಜ್ಜಾಗಿದ್ದು, ಒಂದು ವಾರದೊಳಗೆ ಕಾಂಗ್ರೆಸ್‌ ಸೇರುತ್ತಾರೆಂದು ಹೇಳಲಾಗುತ್ತಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ರಾಜವಂಸ್ಥರಿಗೆ ಬಿಜೆಪಿ ಮಣೆ ಹಾಕಿದ್ದು, ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ. ಇದು ಹಾಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವಾರು ಬಿಜೆಪಿಗರಿಗೆ ಅಸಮಾಧಾನ ಮೂಡಿಸಿದೆ. ಆದರೆ, ಪ್ರತಾಪ್ ಸಿಂಹ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸದೇ ಇದ್ದರೂ, ಪರೋಕ್ಷವಾಗಿ ಯದುವೀರ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೂ ಹಲವರು ಬಿಜೆಪಿ ತೊರೆಯಲು ಸಜ್ಜಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್, ಈ ಬಾರಿಯ ಚುನಾವಣೆಯಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ಮುಂದಾಗಿದ್ದು, ಅವರನ್ನು ಕಾಂಗ್ರೆಸ್‌ ನಾಯಕರು ಭೇಟಿ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಕೂಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಒಕ್ಕಲಿಗ ಸಮುದಾಯದ ಎಂ ಲಕ್ಷ್ಮಣ್‌ ಅವರನ್ನು ಕಣಕ್ಕಿಳಿಸಿರುವ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ನ ಅವರನ್ನು ಪಕ್ಷಕ್ಕೆ ಕರೆತಂದಿದೆ. ಈಗಾಗಲೇ, ಯಡಿಯೂರಪ್ಪ ಅವರ ಆಪ್ತರಾಗಿದ್ದ ಮೈಸೂರು ಮೂಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್, ಜೆಡಿಎಸ್‌ ಮುಖಂಡ ಕೆ.ವಿ ಮಲ್ಲೇಶ್, ಮೈಸೂರು ಪಾಲಿಕೆಯ ಮಾಜಿ ಮೇಯರ್ ಭೈರಪ್ಪ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರಿದ್ದಾರೆ. ಈಗ, ಧೀರಜ್ ಪ್ರಸಾದ್ ಕೂಡ ಕಾಂಗ್ರೆಸ್‌ ಸೇರಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...