ಲೋಕಸಭಾ ಚುನಾವಣೆ | ರಾಯಚೂರಿನಲ್ಲಿ ರವಿ ಪಾಟೀಲಗೆ ಕಾಂಗ್ರೆಸ್‌ ಟಿಕೆಟ್?

Date:

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಚುನಾವಣಾ ಆಯೋಗ ಅಧಿಕೃತ ಚುನಾವಣಾ ದಿನಾಂಕಗಳನ್ನು ಘೋಷಿಸಲು ಸಿದ್ದತೆಯಲ್ಲಿ ತೊಡಗಿದೆ. ಎಲ್ಲ ಪಕ್ಷಗಳು ಚುನಾವಣೆ ಎದುರಿಸಲು ಮತ್ತು ಗೆಲ್ಲಲು ಭಾರೀ ಕಸರತ್ತು ನಡೆಸುತ್ತಿವೆ. ರಾಜ್ಯದಲ್ಲಿ ನಾಲ್ಕುವರೆ ವರ್ಷಗಳಿಂದ ಕಾಣೆಯಲ್ಲಿದ್ದ ಕೆಲ ಸಂಸದರು ಈಗ ತಮ್ಮ ಕ್ಷೇತ್ರಗಳಲ್ಲಿ ಪ್ರತ್ಯಕ್ಷರಾಗಿದ್ದಾರೆ. ಇದೇ ಹೊತ್ತಿನಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ನಾಯಕರ ಬೆನ್ನತ್ತುತ್ತಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದವು. ಆದರೆ, ಆಂತರಿಕ ಅಸಮಾಧಾನ, ತೆರೆಮರೆಯ ವೈಷಮ್ಯಗಳಿಂದ ಹೀನಾಯ ಸೋಲು ಕಂಡಿದ್ದವು. ಇದೀಗ, ಮುಂದಿನ  ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ಅನ್ನು ಕಟ್ಟಿಹಾಕಲು ಯತ್ನಿಸುತ್ತಿವೆ. ಕಳೆದ ಚುನಾವಣೆಯಲ್ಲಿ ತನ್ನ ಭದ್ರಕೋಟೆಯನ್ನು ಬೇಧಿಸಿ ಗೆದ್ದಿದ್ದ ಬಿಜೆಪಿಯ ರಾಜಾ ಅಮರೇಶ್ವರ ನಾಯಕ ಅವರನ್ನು ಮಣಿಸಿ, ಮತ್ತೆ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ ಮಾಡುತ್ತಿದೆ.

ರಾಯಚೂರು ಕ್ಷೇತ್ರವು ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಎಸ್‌ಟಿ ಮೀಸಲು ಕ್ಷೇತ್ರವಾಗಿದೆ. ರಾಯಚೂರಿನ ಬಿಜೆಪಿ ಟಿಕೆಟ್‌ಗಾಗಿ ಮಾಜಿ ಸಂಸದ ಬಿ.ವಿ ನಾಯಕ ಪ್ರಯತ್ನಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಅವರು ಮಾನ್ವಿಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ ಲೋಕಸಭೆಗೆ ಹೋಗಲು ಯತ್ನಿಸುತ್ತಿದ್ದಾರೆ. ಒಂದು ವೇಳೆ, ತಮಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ, ಅವರು ಕಾಂಗ್ರೆಸ್‌ ಸೇರುವ ಎಲ್ಲ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಅವರಲ್ಲದೆ, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಕೂಡ ಟಿಕೆಟ್‌ಗಾಗಿ ಬಿಜೆಪಿ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಕಾಂಗ್ರೆಸ್‌ನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ ಸ್ಪರ್ಧಾಕಾಂಕ್ಷಿಯಾಗಿದ್ದಾರೆ. ರಾಯಚೂರಿನಲ್ಲಿ ನಾನಾ ದೇವಾಲಯಗಳಿಗೆ ಭೇಟಿ ನೀಡಿ, ಹಳ್ಳಿಗಳನ್ನು ಸುತ್ತುತ್ತಾ, ತಮ್ಮ ಸ್ಪರ್ಧೆಯ ಇಂಗಿತವನ್ನು ತೋರ್ಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಅಲ್ಲದೆ, ಸತೀಶ್ ಜಾರಕಿಹೊಳಿ ಅವರ ಸಂಬಂಧಿ ರವಿ ಪಾಟೀಲ್ ಅವರೂ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅವರನ್ನ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸತೀಶ್ ಕೂಡ ಉತ್ಸಾಹ ತೋರಿದ್ದಾರೆ ಎನ್ನಲಾಗುತ್ತಿದೆ. ರವಿ ಪಾಟೀಲ್ ಯಾದಗಿರಿ-ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡಿ, ಕಾರ್ಯಕರ್ತರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಹಾಗೂ ಕೆಲವು ರಾಜಕಾರಣಿ ಮುಖಂಡರು ಇವರೇ ಅಭ್ಯರ್ಥಿ ಎಂದೂ ಹೇಳುತ್ತಿದ್ದಾರೆ. ಅವರಿಗೆ ಟಿಕೆಟ್‌ ಸಿಕ್ಕರೆ, ಗೆಲುವು ನಿಶ್ಚಿತವೆಂಬ ಅಭಿಪ್ರಾಯಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...