ಲೋಕಸಭಾ ಚುನಾವಣೆ | ತುಮಕೂರು ಬಿಜೆಪಿಗೆ ನುಂಗಲಾರದ ಬಿಸಿತುಪ್ಪ

Date:

ಲೋಕಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೆ ತುಮಕೂರಿನ ಬಿಜೆಪಿ ವಲಯದಲ್ಲಿ ಟಿಕೆಟ್ ಕದನ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳೆಯದಲ್ಲಿ ಬಣ ರಾಜಕೀಯ ಶುರುವಾಗಿದೆ. ಹೀಗಾಗಿ, ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಹಾಲಿ ಸಂಸದ ಜಿ.ಎಸ್ ಬಸವರಾಜು ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರಿಂದ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಬಿಜೆಪಿ ಟಿಕೆಟ್ ಪಡೆದೇ ತಿರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಬಿಜೆಪಿ ಜಿಲ್ಲಾ ಖಜಾಂಚಿ, ಸಿದ್ಧಗಂಗಾ ಆಸ್ವತ್ರೆಯ ಡಾ. ಪರಮೇಶ್ ಅವರು ತಮಗೇ ಟಿಕೆಟ್‌ ಖಚಿತವೆಂದು ಹೇಳಿದ್ದು, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದರ ನಡುವೆ ಹಾಲಿ ಸಂಸದ ಜಿ.ಎಸ್ ಬಸವರಾಜು ಮಾತ್ರ ಸೋಮಣ್ಣ ಅವರನ್ನು ತುಮಕೂರಿನಿಂದ ಕಣಕ್ಕಿಳಿಸಬೇಕು ಎನ್ನುತ್ತಿದ್ದಾರೆ. ಹಾಗಾಗಿ ಜಿಲ್ಲಾ ಬಿಜೆಪಿಯಲ್ಲಿ ಮೂರು ಬಣಗಳಾಗಿವೆ.

ಬಣ ರಾಜಕಾರಣಕ್ಕೆ ಬ್ರೇಕ್ ಹಾಕಲು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಶಂಕರ್ ಗೊಂದಲದ ಹೇಳಿಕೆ ಕೋಡುವಂತಿಲ್ಲ ಎಂದು ಪರ್ಮಾನು ಹೊರಡಿಸಿದ್ದಾರೆ. ಜೊತೆಗೆ, ತಾವೂ ಅಕಾಂಕ್ಷಿ ಎಂದು ಹೇಳಿದ್ದಾರೆ. ಇದರ ನಡುವೆ ಮಾಜಿ ಸಂಸದ ಮುದ್ದಹನುಮೇಗೌಡರ ಮೇಲೆ ಪ್ರೀತಿ ಹೊಂದಿರುವ ಬಿ ಸುರೇಶ್ ಗೌಡ, ಮುದ್ದಹನುಮೇಗೌಡರೇ ಬಿಜೆಪಿ ಅಭ್ಯರ್ಥಿಯಾಗಲಿ ಎನ್ನುತ್ತಿದ್ದಾರೆ. ಆದರೆ, ಅವರು ಕಾಂಗ್ರೆಸ್ ಸೇರಲು ವೇದಿಕೆ ಸಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಬಿ.ಸಿ.ನಾಗೇಶ್, ಎಸ್.ಡಿ. ದಿಲೀಪ್ ಕುಮಾರ್, ರಿಯಲ್ ಎಸ್ಟೆಟ್ ಉದ್ಯಮಿ ಚಿದಾನಂದ್, ವಿನಯ್ ಬಿದರೆ, ಹೆಚ್.ಎನ್ ಚಂದ್ರಶೇಖರ್. ಅಂಬಿಕಾ ಹುಲಿನಾಯ್ಕರ್, ದೊಡ್ಡಮನೆ ಗೌಪಾಲಗೌಡ ಕೂಟ ಟಿಕೆಟ್‌ ರೇಸ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿದ್ದಾರೆ.

ಸೋಮಣ್ಣಗೆ ವಿರೋಧ

ಬಿಜೆಪಿ ಟಿಕೆಟ್ ಬೇಡಿಕೆ ಮುಂದಿಟ್ಟಿರುವ ಸೋಮಣ್ಣ ಅವರಿಗೆ ಸ್ವಪಕ್ಷೀಯರು, ಸ್ವಜಾತಿಯವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೂ, ಮಾಜಿ ಸಚಿವ ವಿ ಸೋಮಣ್ಣ ತಮ್ಮ ಬತ್ತಳಿಕೆಯಲ್ಲಿರುವ ಎಲ್ಲ ರಾಜಕೀಯ ಅಸ್ತ್ರಗಳನ್ನು ಪ್ರಯೋಗಿಸಿಸುತಿದ್ದಾರೆ. ಬಿಜೆಪಿ ಟಿಕೇಟ್ ಖಾತ್ರಿಗೆ ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಹಾಲಿ ಸಂಸದ ಜಿ.ಎಸ್ ಬಸವರಾಜು ಸಾಥ್ ನೀಡಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಟಿಕೆಟ್ ಬಯಸಿರುವ ಮಾಜಿ ಸಚಿವ ವಿ.ಸೋಮಣ್ಣ ದೆಹಲಿಯಲ್ಲಿ ನಿಂತು ರಾಜ್ಯಸಭೆ ಟಿಕೆಟ್‌ ಬೇಕೆಂಬ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ರಾಜ್ಯಸಭೆ, ಇಲ್ಲವೇ ಲೋಕಸಭೆ ಎಂಬ ದಾಳ ಉರುಳಿಸಿದ್ದರು. ಅದರೆ, ರಾಜ್ಯಸಭೆಗೆ ಹೋಗಬೇಕೆಂಬ ಬಯಕೆ ಫಲಕಾರಿಯಾಗಿಲ್ಲ. ಇದೀಗ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ವಿ.ಸೋಮಣ್ಣ ಬಿಜೆಪಿ ಪಾಳೆಯುದಲ್ಲಿ ಸಂಚನ ಸೃಷ್ಟಿಸಿದ್ದಾರೆ. ಅದರೆ, ಸ್ಥಳೀಯ ಆಕಾಂಕ್ಷಿಗಳು ಬೆಂಕಿ ಉಗುಳುತಿದ್ದಾರೆ.

ಸೋಮಣ್ಣ ಹೊರಗಿನವರು ಎಂಬ ದಾಳ ಉರುಳಿಸಿ ಸೋಮಣ್ಣರನ್ನು ತುಮಕೂರಿಗೆ ಬಾರದಂತೆ ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ರಿಯೆಲ್ ಎಸ್ಟೆಟ್ ಉದ್ಯಮಿ, ಬಿಜೆಪಿ ರಾಜ್ಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಚಿದನಾಂದ್, ಭಹಿರಂಗವಾಗಿಯೇ ಸೋಮಣ್ಣ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ. ಹಾಗೆ ಸಿದ್ಧಗಂಗಾ ಆಸ್ಪತ್ರೆಯ ಡಾ.ಪರಮೇಶ್, ಎಸ್.ಡಿ ದಿಲೀಪ್ ಕುಮಾರ್ , ಮಾಧುಸ್ವಾಮಿ ಕೂಡ ಸೋಮಣ್ಣಗೆ ವಿರುದ್ಧವಿದ್ದಾರೆ. ಹೊಲಸಿಗರಿಗೆ ಟಿಕೆಟ್ ನೀಡಬಾರದು ಎಂಬ ವಾದಕ್ಕೆ, ಸೋಮಣ್ಣ ಪಕ್ಷನಿಷ್ಠೆ, ತ್ಯಾಗವೆಂಬ ಪ್ರತಿವಾದ ಮುಂದಿಟ್ಟಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಬಹಿರಂಗವಾಗಿಯೇ ಸಂಸದ ಜಿ.ಎಸ್ ಬಸವರಾಜು ವಿರುದ್ದ ತೋಡೆ ತಟ್ಟಿ, ಬಸವರಾಜು ಒಳಒಪ್ಪಂದದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಎಸ್.ಡಿ ದಿಲೀಪ್ ಕುಮಾರ್ ಪಕ್ಷೇತರವಾಗಿ ಸ್ಪರ್ಧಿಸಿ ಶಕ್ತಿ ಪ್ರದರ್ಶಿಸಿದ್ದರು. ನಂತರ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕುದಲೆಳೆ ಅಂತರಲ್ಲಿ ಸೋತಿದ್ದರು. ಈಗ, ಲೋಕಸಭಾ ಚುನಾವಣೆಗೂ ಟಿಕೆಟ್ ಆಕಾಂಕ್ಷಿ ಎನ್ನುತ್ತಿದ್ದಾರೆ. ಇಲ್ಲದಿದ್ದರೆ, ಮಾಧುಸ್ವಾಮಿಗೆ ಟಿಕೆಟ್ ಕೊಡಬೇಕು ಎಂದೂ ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಚೇರಿಗಳಿಗೆ ಅನಗತ್ಯ ಅಲೆದಾಟಕ್ಕೆ ಬ್ರೇಕ್; ಇನ್ನು ಮುಂದೆ ಮನೆಯಿಂದಲೇ ರಿಜಿಸ್ಟ್ರೇಷನ್: ಸಚಿವ ಕೃಷ್ಣ ಬೈರೇಗೌಡ

ಬಸವರಾಜು ಅವರ ವಿರೋಧಿ ಬಣ ಶಾತಯಾಗತಾಯ ಬಸವರಾಜು ಬಣಕ್ಕೆ ಟಿಕೆಟ್ ಕೈ ತಪ್ಪಿಸಿ ಪಕ್ಷದೊಳಗೆ ಬಸವರಾಜು ಬಣವನ್ನು ಮಣಿಸಲು ಎಲ್ಲ ಸಿದ್ದತೆ ಮಾಡಿಕೊಂಡಿದೆ. ಇದು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಹಿರಂಗವಾಗಿತ್ತು.

ತುಮಕೂರಿನಲ್ಲಿ ವಿಧಾನಸಭೆಯಲ್ಲಿ ಮಣಿದವರು, ಬಿಜೆಪಿಯ ಜಿಲ್ಲಾ ಹುದ್ದೆಗಳಿಲ್ಲಿರುವವರಲ್ಲಿ ಹಲವರು ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಆದರೆ, ಸದ್ಯ, ಬಿಜೆಪಿ-ಜೆಡಿಎಸ್‌ ಮೈತ್ರಿ ಇರುವುದರಿಂದ ತುಮಕೂರು ಯಾವ ಪಕ್ಷದ ಪಾಲಿಗೆ ಹೋಗಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೂ, ಬಿಜೆಪಿಗೆ ಕ್ಷೇತ್ರ ಸಿಕ್ಕರೆ, ಮೈತ್ರಿ ಇರುವುದರಿಂದ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಹಲವಾರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಆರೆ, ಅವರಿಗೆ ತುಮಕೂರು ಲೋಕಸಭೆ ಫಲಿತಾಂಶದ ಚರಿತ್ರೆ ಅರ್ಥವಾಗಿಲ್ಲ ಎನ್ನುವುದು ಅಷ್ಟೇ ಸತ್ಯ. ಮೈತ್ರಿಯಲ್ಲಿ ಗೆಲುವೇನು ಸುಭವಲ್ಲ. ಒಳ ಏಟಿನ ಆತಂಕ ತಪ್ಪಿದ್ದಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...