ಲೋಕಾಯುಕ್ತ ದಾಳಿ, ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌ ಪರಾರಿ

Date:

ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ.

ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ರಿಂದ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ಲೋಕಾಯುಕ್ತ ದಾಳಿ ಸುಳಿವು ದೊರೆತ ಕುಮಾರ್ ಪರಾರಿಯಾಗಿದ್ದು,ಅವರ ಪತ್ತೆಗೆ ಶೋಧ ನಡೆಸಲಾಗಿದೆ.

ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನು ತಮ್ಮ ಸಂಬಂಧಿಕರಿಗೆ ಕಡಿಮೆ ಬೆಲೆಗೆ ನೋಂದಣಿ ಮಾಡಿಕೊಡುವಂತೆ ಇನ್ಸ್‌ಪೆಕ್ಟರ್‌ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ದಂಪತಿಗೆ ಇನ್ಸ್‌ಪೆಕ್ಟರ್‌ ಕಿರುಕುಳ ಕೊಟ್ಟಿದ್ದರು ಎನ್ನುವ ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ದಾಖಲಾಗಿದ್ದ ಪ್ರಕರಣದ ಸಂಬಂಧ ಬಿ ರಿಪೋರ್ಟ್‌ಗೆ ಹಾಕುತ್ತೇನೆ. ಮನೆಯನ್ನು ಬರೆದುಕೊಡಿ ಎಂದು ಇನ್ಸ್‌ಪೆಕ್ಟರ್‌ ಕುಮಾರ್ ಅವರು ಚೆನ್ನೇಗೌಡ ಅವರ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ಅವರು ವಿಡಿಯೋ ಮಾಡಿಕೊಂಡಿದ್ದರು.

ಇನ್ಸ್‌ಪೆಕ್ಟರ್‌ ಕುಮಾರ್ ಸಂಬಂಧಿಯೊಬ್ಬರಿಗೆ ಕಡಿಮೆ ಬೆಲೆಗೆ ಮನೆ ಕೊಡಿಸಲು ಸಂಚು ಮಾಡಿ 4 ಕೋಟಿ ಮೌಲ್ಯದ ಮನೆಯನ್ನು 60 ಲಕ್ಷ ರೂ.ಗೆ ಮಾರಾಟ ಮಾಡುವಂತೆ ಚೆನ್ನೇಗೌಡ ದಂಪತಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಮನೆ ನೋಡಿಕೊಂಡು ಬರಲು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರ ಜೊತೆ ಸಂಬಂಧಿಕರನ್ನು ಕಳುಹಿಸಿದ್ದರು.ಇನ್ಸ್‌ಪೆಕ್ಟರ್‌ ಸೂಚನೆಯಂತೆ ಇಬ್ಬರು ವ್ಯಕ್ತಿಗಳೊಂದಿಗೆ ಮನೆ ನೋಡಬೇಕೆಂದು ಹೆಡ್ ಕಾನ್ಸ್‌ಟೇಬಲ್ ಉಮೇಶ್ ಅವರು ಚೆನ್ನೇಗೌಡ ಅವರ ಮನೆಗೆ ನುಗ್ಗಿದ್ದರು.

ಮಾ. 18ರಂದು ಸಮಯ 3:25 ನಿಮಿಷಕ್ಕೆ ಕೆಂಪು ಬಣ್ಣದ ಕೆಎ 42 ಪಿ 0919 ನೋಂದಣಿಯ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನಿಸಿದ ಚೆನ್ನೇಗೌಡ ಅವರು ವಿಡಿಯೋ ಸಹ ಮಾಡಿದ್ದರು. ಈ ವೇಳೆ ಠಾಣೆಯಿಂದ ಕಾರು ಸಮೇತ ಕರೆದುಕೊಂಡು ಬರುವುದಾಗಿ ಹೇಳಿ ಹೆಡ್ ಕಾನ್ಸ್ ಟೇಬಲ್ ಉಮೇಶ್ ಅವರು ಅಲ್ಲಿಂದ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಮತ್ತೊಂದಡೆ ನಾಗರಭಾವಿಯ ಖಾಸಗಿ ಹೊಟೇಲ್‌ನಲ್ಲಿ ಡೀಲ್ ಮಾಡುತ್ತಿದ್ದ ಇಬ್ಬರು ಪೊಲೀಸ್ ಪೇದೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹೆಡ್ ಕಾನ್ಸ್‌ಟೇಬಲ್ ಉಮೇಶ್, ಅನಂತ್ ಲೋಕಾ ಬಲೆಗೆ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...