ಸೋತ ಸೋಮಣ್ಣರನ್ನು ‘ಚಿಕ್ಕಪೇಟೆ ಶಾಸಕ’ರನ್ನಾಗಿ ಮಾಡಿದ ಬಿಜೆಪಿ ಸಮಾವೇಶದ ಫ್ಲೆಕ್ಸ್‌!

Date:

  • ಜೆ ಪಿ ನಗರದಲ್ಲಿ ಬೆಂಗಳೂರು ದಕ್ಷಿಣ ಕಾರ್ಯಕರ್ತರ ಸಮಾವೇಶ
  • ಶಾಸಕರು’ ಎಂಬುದರ ಬದಲು ‘ಶಾಕಸರು’ ಎಂದು ತಪ್ಪು ಬರಹ

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಎಲ್ಲ ಕಡೆ ಎಡವಟ್ಟುಗಳ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಇದಕ್ಕೆ ಹೊಸ ಉದಾಹರಣೆ ಬೆಂಗಳೂರಿನಲ್ಲಿ ಇಂದು ನಡೆದಿದ್ದ ಬಿಜೆಪಿ ಸಮಾವೇಶಕ್ಕೆ ಸ್ವಾಗತ ಕೋರಿದ್ದ ಫ್ಲೆಕ್ಸ್‌.

ಬೆಂಗಳೂರಿನಲ್ಲಿ ಇಂದು ನಡೆದಿದ್ದ ಬಿಜೆಪಿ ಸಮಾವೇಶಕ್ಕೆ ಸ್ವಾಗತ ಕೋರಿದ್ದ ಫ್ಲೆಕ್ಸ್‌ನಲ್ಲಿ ‘ಮಾಜಿ ಸಚಿವ’ ಸೋಮಣ್ಣರನ್ನು ‘ಚಿಕ್ಕಪೇಟೆ ಶಾಸಕ’ ಎಂದು ಉಲ್ಲೇಖಿಸಿರುವ ಪ್ರಸಂಗ ನಡೆದಿದೆ.

ಜೆ.ಪಿ‌. ನಗರದ ಪುಟ್ಟೇನಹಳ್ಳಿಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ನಾಯಕರಿಗೆ ಸ್ವಾಗತ ಕೋರಿ ಫ್ಲೆಕ್ಸ್‌ ಹಾಕಲಾಗಿತ್ತು. ಈ ಫ್ಲೆಕ್ಸ್‌ನಲ್ಲಿ ಹಲವು ತಪ್ಪುಗಳು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 06 24 at 4.22.21 PM

ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ವಸತಿ ಸಚಿವ ವಿ. ಸೋಮಣ್ಣ ಎರಡೂ ಕಡೆಯಲ್ಲೂ ಸೋಲನನುಭವಿಸಿ, ಮುಖಭಂಗಕ್ಕೊಳಗಾಗಿದ್ದರು. ಇಂದು ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಅವರಿಗೂ ಸ್ವಾಗತ ಕೋರಿ ಹಾಕಿದ್ದ ಫ್ಲೆಕ್ಸ್‌ನಲ್ಲಿ ‘ಚಿಕ್ಕಪೇಟೆ ಶಾಸಕ’ ಎಂದು ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಧಾನಸೌಧದಲ್ಲೇ ‘ಮೌಢ್ಯ’ಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

ಇದಲ್ಲದೇ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರ ಹೆಸರನ್ನು ‘ಗರಡಾಚಾರ್’ ಎಂದೂ, ಅವರ ಪದನಾಮದಲ್ಲಿ ‘ಶಾಸಕರು’ ಎಂದು ಉಲ್ಲೇಖ ಮಾಡುವ ಬದಲು ‘ಶಾಕಸರು’ ಎಂದು ತಪ್ಪಾಗಿ ಮುದ್ರಿಸಲಾಗಿದೆ.

ಆರ್. ಅಶೋಕ್ ಅವರ ‘ಪದ್ಮನಾಭ ನಗರ’ ಕ್ಷೇತ್ರದ ಎಂದು ಮುದ್ರಿಸುವ ಬದಲು, ‘ಪದ್ಮಾನಗರ’ ಎಂದು ಉಲ್ಲೇಖಿಸಿದ್ದಾರೆ. ಜೊತೆಗೆ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರನ್ನು ರಾಜ್ಯ ಸದಸ್ಯರು ಎಂದು ಮುದ್ರಿಸಲಾಗಿದೆ. ಇದಲ್ಲದೇ, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿಯವರನ್ನು ಲೋಕಸಭಾ ಸದಸ್ಯ ಎಂದು ಉಲ್ಲೇಖಿಸಿ, ಮುದ್ರಿಸಿದ್ದನ್ನು ಹಾಕಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...