ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ | ಜನರನ್ನು ಬಿಜೆಪಿ `ಏಪ್ರಿಲ್‌ ಫೂಲ್‌’ ಮಾಡಲು ಹೊರಟಿದೆ : ಜೆಡಿಎಸ್‌

Date:

  • ಬೆಲೆ ಇಳಿಕೆ ಚುನಾವಣಾ ಗಿಮಿಕ್ ಎಂದ ಜೆಡಿಎಸ್‌
  • ಮಾರ್ಚ್‌ ತಿಂಗಳಲ್ಲಿ ಸಿಲಿಂಡರ್ ಬೆಲೆ ₹350ಕ್ಕೆ ಏರಿಕೆ

2024ರ ಆರ್ಥಿಕ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌, “ಬಿಜೆಪಿಯು ಏಪ್ರಿಲ್‌ 1ರಂದು ₹92 ಇಳಿಕೆ ಮಾಡಿ ‘ಫೂಲ್’ ಮಾಡಲು ಹೊರಟಿದೆ” ಎಂದು ಟೀಕಿಸಿದೆ.

ವಾಣಿಜ್ಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಹೊಸ ದರಗಳನ್ನು ಜಾರಿಗೆ ತರಲಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 350 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈಗ 91.50 ರೂಪಾಯಿ ಇಳಿಕೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್‌, “ಕಳೆದ ತಿಂಗಳು ಸಿಲಿಂಡರ್‌ಗೆ ₹350 ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ, ಏಪ್ರಿಲ್‌ 1ರಂದು ₹92 ಇಳಿಕೆ ಮಾಡಿ ‘ಫೂಲ್’ ಮಾಡಲು ಹೊರಟಿದೆ” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆವರೆಗೂ ಪ್ರಜೆಗಳನ್ನು ಎಷ್ಟು ಬೇಕೋ ಅಷ್ಟು ಲೂಟಿ ಮಾಡಿ, ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಣ್ಣೊರೆಸುವ ನಾಟಕವನ್ನು ರಾಜ್ಯ ಬಿಜೆಪಿ ಈ ಹಿಂದಿನಿಂದಲೂ ಮಾಡುತ್ತಾ ಬಂದಿದೆ” ಎಂದು ಕಿಡಿಕಾರಿದೆ.

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಕುರಿತು ಹರಿಹಾಯ್ದ ಜೆಡಿಎಸ್‌, “ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸಿಲಿಂಡರ್ ಬೆಲೆ ದುಪ್ಪಟ್ಟಾಯಿತು. ದೇಶದ ಸಾಮಾನ್ಯ ಜನರಿಗೆ ನೀಡಲಾಗಿದ್ದ ಸಬ್ಸಿಡಿಯನ್ನು ನೀಡುತ್ತಿಲ್ಲ” ಎಂದು ಟ್ವೀಟ್ ಮಾಡಿದೆ.

“ಆದರೆ, ಬಿಜೆಪಿಯ 25 ಸಂಸದರು ಈ ಯಾವ ವಿಚಾರಕ್ಕೂ ಧ್ವನಿ ಎತ್ತುತ್ತಿಲ್ಲ. ಬಸವರಾಜ ಬೊಮ್ಮಾಯಿ ಅವರಂತೂ 40% ರಾಜ್ಯದಿಂದ ಎತ್ತುವಳಿ ಮಾಡಿ ದೆಹಲಿಗೆ ಕಳುಹಿಸುವಲ್ಲಿ ಬ್ಯುಸಿ ಆಗಿದ್ದಾರೆ” ಎಂದು ಕುಟುಕಿದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್‌ನ ಎರಡನೇ ಪಟ್ಟಿ ಸಿದ್ಧ: ವರಿಷ್ಠರ ಅನುಮೋದನೆಗೆ ಸಲ್ಲಿಕೆ

“ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಇಳಿಕೆಯಾಗುತ್ತಿದ್ದರೂ ಅದರ ಲಾಭವನ್ನು ಜನರಿಗೆ ವರ್ಗಾಯಿಸುವ ಯಾವ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಕೈಗೊಂಡಿಲ್ಲ” ಎಂದು ಜೆಡಿಎಸ್‌ ಹೇಳಿದೆ.

“ಕೊರೊನಾ ಸಮಯದಲ್ಲಿ ಜನರು ಸಂಕಟದಲ್ಲಿದ್ದಾಗಲೂ ಬೆಲೆ ಏರಿಕೆ ಮಾಡಿ ಪ್ರಧಾನಿ ಮೋದಿ ದುಷ್ಟತನ ಮೆರೆದಿದ್ದರು. ಜನದ್ರೋಹಿ ಸರ್ಕಾರ ಮಾತ್ರ ಹೀಗೆ ಮಾಡಲು ಸಾಧ್ಯ” ಎಂದು ಜೆಡಿಎಸ್‌ ತರಾಟೆಗೆ ತೆಗೆದುಕೊಂಡಿದೆ.

“ಚುನಾವಣೆವರೆಗೆ ಬೆಲೆ ಏರಿಸಿ, ಚುನಾವಣೆ ವೇಳೆಗೆ ಬೆಲೆ ಇಳಿಕೆ ಮಾಡುವ ಬಿಜೆಪಿ, ಫಲಿತಾಂಶ ಬಂದ ಮರುದಿನ ಮತ್ತೆ ಬೆಲೆ ಏರಿಕೆ ಮಾಡಿದ್ದು ನಮ್ಮ ಕಣ್ಣ ಮುಂದಿದೆ” ಎಂದು ಹೇಳಿದೆ.

“ಇದು ಕೇಂದ್ರ ಸರ್ಕಾರದ ಅಹಂಕಾರದ ಪರಮಾವಧಿ. ಆದರೆ ಈ ಬಾರಿ ನಿಮ್ಮ ಕೊಬ್ಬು ರಾಜ್ಯ ಚುನಾವಣೆಯಲ್ಲಿ ಇಳಿಸಿ, ಮುಂದಿನ ಲೋಕಸಭಾ ಚುನಾವಣೆಗೆ ಇಲ್ಲಿಂದಲೆ ಸಂದೇಶ ನೀಡಲಿದ್ದೇವೆ” ಎಂದು ಟ್ವೀಟ್ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...