ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಇಂದು ಬೆಳಗ್ಗೆ ಬೆಳಗಾವಿಯ ಖಂಜರಗಲ್ಲಿ, ವೀರಭದ್ರ ನಗರದ ಉರ್ದು ಶಾಲೆ, ಸರ್ದಾರ್ ಪ್ರೌಢಶಾಲೆ ಹಾಗೂ ಕಿತ್ತೂರು ತಾಲೂಕಿನ ಹುಲಿಕಟ್ಟಿ ಮತ್ತು ಕಾದರವಳ್ಳಿ ಶಾಲೆಗೆ ಭೇಟಿ ನೀಡಿದರು.

ಶತಮಾನ ಕಂಡಿರುವ ಖಂಜರಗಲ್ಲಿಯಲ್ಲಿರುವ ಉರ್ದು ಶಾಲೆಯಲ್ಲಿ ಮಕ್ಕಳೊಂದಿಗೆ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಸಂವಿಧಾನ ಪೀಠಿಕೆ ಓದುವಿಕೆಯನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ನಿತ್ಯ ಶಾಲಾ ಮಕ್ಕಳಿಗೆ ವಿದ್ಯಾರ್ಥಿನಿಯರಿಗೆ ಕ್ಷೀರಭಾಗ್ಯ ಯೋಜನೆಯಡಿಯ ಬಿಸಿ ಹಾಲು ವಿತರಿಸಿ, ಸದೃಢವಾದ ಆರೋಗ್ಯದಿಂದರಲು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ವೀರಭದ್ರನಗರದಲ್ಲಿರುವ ಉರ್ದು ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ 254 ವಿದ್ಯಾರ್ಥಿಗಳು ಓದುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಶಾಲೆಯಲ್ಲಿ ಮಕ್ಕಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿ, ಶಾಲೆಗೆ ಕೂಡಲೇ ಬೆಂಚ್ ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಇದೇ ಶಾಲೆಯಲ್ಲಿ ಪ್ರೌಢಶಾಲೆ ಆರಂಭಿಸಬೇಕು ಎನ್ನುವ ಪೋಷಕರ ಪ್ರಶ್ನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಸ್ಥಳೀಯ ಶಾಸಕರಿಗೆ ಶಾಲೆಯ ಸಮಗ್ರ ಮಾಹಿತಿ ಸಂಗ್ರಹಿಸಿ ನೀಡಲು ಸಲಹೆ ನೀಡಿದರು.

ಅಲ್ಲದೇ, ಇದೇ ವೇಳೆ 173 ವರ್ಷ ಪೂರೈಸಿರುವ ಸರ್ದಾರ್ ಶಾಲೆಗೆ ಭೇಟಿ ನೀಡಿ, ಬ್ರಿಟಿಷ ಶೈಲಿಯ ಕಟ್ಟಡ ಹೊಂದಿರುವುದನ್ನು ಗಮನಿಸಿದರು. ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು. ಇಂತಹ ಪಾರಂಪರಿಕ ಶಾಲೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಸಿಯೂಟ ಸವಿದು ಭರವಸೆ ಈಡೇರಿಕೆ

ಅಧಿವೇಶನ ವೀಕ್ಷಣೆಗೆ ತೆರಳಿದ್ದ ಕಿತ್ತೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಮಕ್ಕಳನ್ನು ಭೇಟಿ ಮಾಡಿದ್ದ ಸಚಿವ ಮಧು ಬಂಗಾರಪ್ಪ ಅವರು, “ಅಧಿವೇಶನ ಮುಗಿಯುವ ನಡುವೆ ನಿಮ್ಮ ಶಾಲೆಗೆ ಬರುತ್ತೇನೆ. ನಿಮ್ಮ ಶಾಲೆಯಲ್ಲಿಯೇ ನಿಮ್ಮನ್ನು ಭೇಟಿ ಮಾಡಿ, ನಿಮ್ಮ ಶಾಲೆಯಲ್ಲಿ ನೀಡುವ ಬಿಸಿಯೂಟವನ್ನು ಮಾಡೋಣ” ಎಂದು ಭರವಸೆ ನೀಡಿದ್ದರು. ಅದರಂತೆ ಶಿಕ್ಷಣ ಸಚಿವರು, ಹುಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ತೆರಳಿ ಮಕ್ಕಳ ಜೊತೆ ಕುಳಿತು ಊಟ ಮಾಡುವ ಮೂಲಕ ಮಕ್ಕಳಿಗೆ ನೀಡಿದ್ದ ಭರವಸೆ ಈಡೇರಿಸಿದರು.

ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕರಾದ ಎಂ ಎಂ ಸಿಂಧೂರ, ಉಪನಿರ್ದೇಶಕರಾದ ಮೋಹನ್ ಕುಮಾರ್ ಹಂಚಾಟೆ, ಪ್ರಭಾರ ಉಪನಿರ್ದೇಶಕರಾದ ರವಿ ಭಜಂತ್ರಿ, ಬೆಳಗಾವಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಲೀಲಾವತಿ ಎಸ್ ಹಿರೇಮಠ, ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಡಿ ಹಿರೇಮಠ, ಇಸಿಓ, ಬಿ.ಆರ್.ಪಿ, ಸಿ.ಆರ್.ಪಿಗಳು ಮತ್ತು ನಗರ ಸೇವಕರು ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...