ಮಧ್ಯಪ್ರದೇಶ | ಕಾಂಗ್ರೆಸ್‌ನ ಅಘೋಷಿತ ಸಿಎಂ ಕಮಲ್‌ ನಾಥ್‌ ಯಾರು ಗೊತ್ತೇ?

Date:

ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್ – ಮೂರು ತಲೆಮಾರಿನ ಗಾಂಧಿಯವರೊಂದಿಗೆ ಕೆಲಸ ಮಾಡಿರುವ ಕಮಲ್ ನಾಥ್ ಅವರು ಬ್ರಾಹ್ಮಣ ವ್ಯಾಪಾರಿ ಕುಟುಂಬದ ಹಿನ್ನೆಲೆ ಉಳ್ಳವರು. ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಕಮಲ್‌ ನಾಥ್ ಅವರ ರೀತಿಯಲ್ಲೇ ರಾಜಕೀಯದಲ್ಲಿ ಬೆಳೆದಿದ್ದಾರೆ.

ಔಹಾಣ್‌ ಅವರು ವಿದಿಶಾ ಪ್ರದೇಶದ ಒಬಿಸಿ ಸಮುದಾಯಕ್ಕೆ ಸೇರಿದವರು. ಅವರು ಬೆಳೆದಿದ್ದೆಲ್ಲವೂ ಇದೇ ಪ್ರದೇಶದಲ್ಲಿ. ಆದರೆ, ಕಮಲ್‌ ನಾಥ್‌ ಅವರು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬೆಳೆದವರು. ಹೀಗಾಗಿ, ಅವರು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾಗಿ ನೇಮಕಗೊಂಡಾಗಿನಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ‘ಹೊರಗಿನವರು’ ಎಂಬ ಹಣೆಪಟ್ಟಿಯನ್ನು ಎದುರಿಸುತ್ತಿದ್ದಾರೆ. ಆದರೆ, ಅವರ ರಾಜಕೀಯಕ್ಕೆ ‘ಹೊರಗಿನವರು’ ಎಂಬ ಪದ ಯಾವುದೇ ಸಂದರ್ಭದಲ್ಲೂ ತೊಡಕಾಗಿಲ್ಲ ಎಂಬುದು ವಿಶೇಷ.

1980ರಿಂದ ಬುಡಕಟ್ಟು ಪ್ರಾಬಲ್ಯ ಹೆಚ್ಚಿರುವ ಚಿಂದ್ವಾರಾ ಕ್ಷೇತ್ರವನ್ನು ಕಮಲ್‌ ನಾಥ್ ಪ್ರತಿನಿಧಿಸುತ್ತಿದ್ದಾರೆ. ಹಲವಾರು ದೊಡ್ಡ ಕೈಗಾರಿಕಾ ಸಂಸ್ಥೆಗಳನ್ನು ಹೊಂದಿರುವ ಕಮಲ್‌ ನಾಥ್ ಅವರು 134.24 ಕೋಟಿ ರೂ. (ಲೋಕಸಭೆ ಚುನಾವಣೆಗೆ ಸಲ್ಲಿಸಿದ್ದ ಅಫಿಡವಿಟ್‌ ಪ್ರಕಾರ) ಮೌಲ್ಯದ ಘೋಷಿತ ಆಸ್ತಿಯನ್ನು ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕಮಲ್‌ ಅವರನ್ನು ತಮ್ಮ ಮೂರನೇ ಮಗ ಎಂದು ಕರೆದಿದ್ದರು. 1980ರ ಚುನಾವಣೆಯಲ್ಲಿ ಕಮಲ್‌ ನಾಥ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದ ಇಂದಿರಾ ಗಾಂಧಿ, “ಇವರು ನನ್ನ ಮೂರನೇ ಮಗ. ದಯವಿಟ್ಟು ಅವರಿಗೆ ಮತ ನೀಡಿ” ಎಂದಿದ್ದರು. ಆ ಕಾರಣದಿಂದಾಗಿ ಆ ಸಂದರ್ಭದಲ್ಲಿ, “ಇಂದಿರಾ ಕೆ ದೋ ಹಾಥ್, ಸಂಜಯ್ ಗಾಂಧಿ ಔರ್ ಕಮಲ್ ನಾಥ್” ಎಂಬ ಘೋಷಣೆಗಳು ಕೇಳಿಬಂದಿದ್ದವು.

ಸಂಜಯ್ ಗಾಂಧಿಯವರಿಗೂ ನಿಕಟವರ್ತಿಯಾಗಿದ್ದ ಕಮಲ್‌ ನಾಥ್ ಅವರು ರಾಜೀವ್ ಗಾಂಧಿಯವರ ವಿಶ್ವಾಸಾರ್ಹರಾಗಿದ್ದರು. ಮಿತ್ರಪಕ್ಷಗಳು ಮತ್ತು ವಿರೋಧವನ್ನು ನಿರ್ವಹಿಸುವ ಕೆಲಸವನ್ನು ಕಮಲ್‌ ನಾಥ್‌ ನಿರ್ವಹಿಸುತ್ತಿದ್ದರು. ಅವರು ಪ್ರಧಾನ ಮಂತ್ರಿಗಳಾದ ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಅಡಿಯಲ್ಲಿ ಕೇಂದ್ರ ಸರ್ಕಾರದಲ್ಲಿ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಕಮಲ್‌ ನಾಥ್ ಮುಖ್ಯಮಂತ್ರಿಯೂ ಆಗಿದ್ದರು. ಆದರೆ, ಈಗ ಕೇಂದ್ರ ಸಚಿವರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ 21 ಮಿತ್ರ ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆಪರೇಷನ್‌ ಕಮಲಕ್ಕೆ ಬಲಿಯಾದ ಕಮಲ್‌ ನಾಥ್‌ ಸರ್ಕಾರ 2020ರಲ್ಲಿ ಪತನವಾಗಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...