ಮಧ್ಯಪ್ರದೇಶ | ಬಿಜೆಪಿಗೆ ಭಾರೀ ಮುನ್ನಡೆ; ಲೋಕಸಭೆಯಲ್ಲೂ ಗೆಲ್ಲುತ್ತೇವೆ ಎನ್ನುತ್ತಿದೆ ಕೇಸರಿ ಪಡೆ

Date:

ಮಧ್ಯಪ್ರದೇಶದಲ್ಲಿ ಮತ ಎಣಿಕೆಯ ಆರಂಭದಲ್ಲೇ ಬಿಜೆಪಿ ಸರಳ ಬಹುಮತಕ್ಕೆ ಅಗತ್ಯವಿರುವ ಸ್ಥಾನಗಳನ್ನು ದಾಟಿ ಮುನ್ನಡೆ ಸಾಧಿಸಿದೆ ಮತ್ತೊಮ್ಮೆ ಅಧಿಕಾರಕ್ಕೇರುತ್ತೇವೆಂದು ಬಿಜೆಪಿ ಭರವಸೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ ಶರ್ಮಾ ಅವರು ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದು, ಮತ ಹಾಕಿದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಪ್ರಸ್ತುತ ಮಧ್ಯಪ್ರದೇಶದಲ್ಲಿ ಬಿಜೆಪಿ 143 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 59 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಗೊಂಡ್ವಾನಾ ಗಣತಂತ್ರ ಪಕ್ಷ (ಜಿಜಿಪಿ) ಮತ್ತು ಬಿಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಭೋಪಾಲ್‌ನ ಗೋವಿಂದಪುರದ ಬಿಜೆಪಿ ಅಭ್ಯರ್ಥಿ ಕೃಷ್ಣ ಗೌರ್ ಪ್ರತಿಪಾದಿಸಿದ್ದಾರೆ.

2024ರ ಲೋಕಸಭೆಯಲ್ಲಿ ಎಲ್ಲ 29 ಸ್ಥಾನಗಳನ್ನು ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಕಾಂಗ್ರೆಸ್ ತನ್ನ ಸೋಲನ್ನು ಅರ್ಥಮಾಡಿಕೊಂಡಿದೆ. ಇದು ನಮಗೆ ಐತಿಹಾಸಿಕ ಜಯವಾಗಲಿದೆ. ಬಿಜೆಪಿ ಸರ್ಕಾರದಲ್ಲಿ ರಾಜ್ಯ ಮತ್ತು ದೇಶದ ಭವಿಷ್ಯ ಸುಭದ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಬಾಬುಲಾಲ್ ಗೌರ್ ಅವರ ಸೊಸೆ ಕೃಷ್ಣ ಗೌರ್ ಅವರು ಗೋವಿಂದಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸ್ಥಾನವಿಲ್ಲ ಮತ್ತು ಮಧ್ಯಾಹ್ನ 12 ರ ನಂತರ ಅದರ ಸೋಲಿಗೆ ಇವಿಎಂ ಯಂತ್ರಗಳನ್ನು ದೂಷಿಸುತ್ತಾರೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ನರಸಿಂಗ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...