ಮಹಾ ಡಿಸಿಎಂ ಅಜಿತ್ ಪವಾರ್‌ಗೆ ಲಾಟರಿ; ತೆರಿಗೆ ಇಲಾಖೆ ಜಪ್ತಿ ಮಾಡಿದ್ದ 1,000 ಕೋಟಿ ರೂ. ಆಸ್ತಿ ವಾಪಸ್!

Date:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ‘ಬಂಪರ್ ಲಾಟರಿ’ ಸಿಕ್ಕಿದೆ. 2021ರಲ್ಲಿ ಬೇನಾಮಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅಜಿತ್ ಪವಾರ್ ಕುಟುಂಬದಿಂದ ವಶಪಡಿಸಿಕೊಂಡಿದ್ದ 1,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ತೆರಿಗೆ ಇಲಾಖೆ ವಾಪಸ್‌ ಕೊಟ್ಟಿದೆ.

‘ಬೇನಾಮಿ ಆಸ್ತಿ ತಡೆ ಮೇಲ್ಮನವಿ ನ್ಯಾಯಮಂಡಳಿ’ಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿದ್ದ ಬೇನಾಮಿ ಆಸ್ತಿ ಮಾಲೀಕತ್ವ ಪ್ರಕರಣವನ್ನು ವಜಾಗೊಳಿಸಿದೆ. ಅಜಿತ್ ಕುಟುಂಬವನ್ನು ಆರೋಪ ಮುಕ್ತಗೊಳಿಸಿದೆ. ಈ ಬಳಿಕ, ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಆಸ್ತಿಯನ್ನು ತೆರಿಗೆ ಇಲಾಖೆ ವಾಪಸ್‌ ಕೊಟ್ಟಿದೆ.

ಗಮನಾರ್ಹ ವಿಚಾರವೆಂದರೆ, ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಹಾಗೂ ಶಿವಸೇನೆಯ ಏಕನಾಥ್ ಶಿಂದೆ ಮತ್ತು ಎನ್‌ಸಿಪಿಯ ಅಜಿತ್‌ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ಬಳಿಕ ಈ ತೀರ್ಪು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ ಅಜಿತ್ ಪವಾರ್ ಅವರು ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ (ಎಂವಿಎ) ಸರ್ಕಾರದಲ್ಲಿ ಸಚಿವರಾಗಿದ್ದರು. ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ಎನ್‌ಸಿಪಿಯಲ್ಲಿ ಇದ್ದರು. ಆ ವೇಳೆ, ಅಜಿತ್ ಪವಾರ್ ಮತ್ತು ಅವರ ಪತ್ನಿ ಸುನೇತ್ರಾ ಪವಾರ್, ಮಗ ಪಾರ್ಥ ಪವಾರ್ ಅವರು ಬೇನಾಪಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ 2021ರ ಅಕ್ಟೋಬರ್ 7ರಂದು ಅಜಿತ್ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಸೇರಿದಂತೆ ಹಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು.

ಆ ನಂತರ, 2022ರಲ್ಲಿ ಅಜಿತ್ ಪವಾರ್ ಅವರು ಶರದ್ ಪವಾರ್ ವಿರುದ್ಧವೇ ಬಂಡಾಯ ಎದ್ದು, ಎನ್‌ಸಿಪಿಯನ್ನು ವಿಭಜಿಸಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರು. ಬಿಜೆಪಿ ಮತ್ತು ಶಿವಸೇನೆ (ಶಿಂದೆ ಬಣ)ದ ಜೊತೆ ಸೇರಿ ಮಹಾಯುತಿ ಸರ್ಕಾರ ರಚಿಸಿದರು. ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯೂ ಆದರು. ಆ ಬಳಿಕ, ಅಜಿತ್ ವಿರುದ್ದದ ಎಲ್ಲ ಪ್ರಕರಣಗಳಿಗೆ ತಡೆ ನೀಡಲಾಗಿತ್ತು. ಇದೀಗ, ಎರಡನೇ ಬಾರಿಗೆ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ.

ಇದೆಲ್ಲದರ ನಡುವೆ, ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ನ್ಯಾಯಪೀಠವು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ದದ ಆರೋಪಗಳನ್ನು ವಜಾಗೊಳಿಸಿದೆ. “ಅಜಿತ್ ಪವಾರ್ ಅಥವಾ ಅವರ ಕುಟುಂಬವು ಬೇನಾಮಿ ಆಸ್ತಿಗಳನ್ನು ಪಡೆಯಲು ಹಣವನ್ನು ವರ್ಗಾಯಿಸಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ” ಎಂದು ನ್ಯಾಯಪೀಠ ಹೇಳಿದೆ.

“ಅಜಿತ್ ಪವಾರ್ ವಿರುದ್ಧದ ಆರೋಪಗಳಿಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಅವರ ಕುಟುಂಬವು ಯಾವುದೇ ತಪ್ಪು ಮಾಡಿಲ್ಲ. ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವ ವ್ಯವಹಾರಗಳನ್ನು ಬ್ಯಾಂಕಿಂಗ್ ವ್ಯವಸ್ಥೆ ಸೇರಿದಂತೆ ಕಾನೂನುಬದ್ಧ ಮಾರ್ಗಗಳ ಮೂಲಕ ಮಾಡಲಾಗಿದೆ” ಎಂದು ಅಜಿತ್ ಅವರ ವಕೀಲ ವಕೀಲ ಪ್ರಶಾಂತ್ ಪಾಟೀಲ್ ಹೇಳಿದ್ದಾರೆ.

ಅಂದರೆ, ನೀವು ದೇಶವನ್ನು ಲೂಟಿ ಹೊಡೆದರೂ, ಸಾರ್ವಜನಿಕವಾಗಿ ಲೂಟಿಕೋರರು ಎಂದು ಕುಖ್ಯಾತಿ ಗಳಿಸಿದರೂ, ಬಿಜೆಪಿ ಮತ್ತು ಮೋದಿ ಬೆಂಬಲಿಸಿದರೆ, ನೀವು ಸತ್ಯಸಂಧರಾಗಬಹುದು. ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ನಿಮ್ಮೆಲ್ಲ ಕೊಳಕನ್ನು ತೊಳೆದುಕೊಳ್ಳಬಹುದು ಎಂಬುದಕ್ಕೆ ಮತ್ತೊಂದು ಹೊಸ ಉದಾಹರಣೆ- ಅಜಿತ್ ಪವಾರ್ ಪ್ರಕರಣ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...