ಮಹಾರಾಷ್ಟ್ರ ಚುನಾವಣೆ | ಬಿಜೆಪಿಯ ಬಿ-ಟೀಮ್ ಎಐಎಂಐಎಂ; ಓವೈಸಿಯ ಪಕ್ಷಕ್ಕೆ ಗಫಾರ್ ಖಾದ್ರಿ ಗುಡ್‌-ಬೈ

Date:

ಮಹಾರಾಷ್ಟ್ರ ಚುನಾವಣಾ ಕಣ ಗರಿಗೆದರಿದೆ. ಎಲ್ಲ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿವೆ. ಟಿಕೆಟ್‌ಗಾಗಿ ಹಲವಾರು ಅಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ. ಟಿಕೆಟ್‌ ಸಿಗದೆ ಅಥವಾ ಟಿಕೆಟ್‌ಗಾಗಿ ಪಕ್ಷಾಂತರ ಪರ್ವವೂ ಇನ್ನೇನು ಅರಂಭವಾಗುವ ಸಾಧ್ಯತೆಗಳಿವೆ. ಇದೆಲ್ಲದರ ನಡುವೆ, ಪ್ರಮುಖ ಬೆಳವಣಿಗೆಯಲ್ಲಿ ಓವೈಸಿ ಅವರ ಎಐಎಂಐಎಂ ಪಕ್ಷದ ಮಹಾರಾಷ್ಟ್ರ ಕಾರ್ಯಾಧ್ಯಕ್ಷ ಅಬ್ದುಲ್ ಗಫಾರ್ ಖಾದ್ರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ‘ಪಕ್ಷದ ಉನ್ನತ ನಾಯಕರು ಬಿಜೆಪಿಯಿಂದ ಹಣ ಪಡೆದು ಅಜೆಂಡಾಗಳನ್ನು ರೂಪಿಸುತ್ತಿದ್ದಾರೆ. ಬಿಜೆಪಿ ಗೆಲುವಿಗೆ ನೆರವಾಗಲು ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಸಂಸದ ಅಸಾದುದ್ದೀನ್ ಓವೈಸಿ ಅವರು ಎಐಎಂಐಎಂ ಪಕ್ಷವನ್ನು ಆರಂಭಿಸಿ ಸಮಯದಿಂದಲೂ, ಎಐಎಂಐಎಂ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಲಾಗಿತ್ತು. ಮುಸ್ಲಿಂ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳ ಮತಗಳನ್ನು ವಿಭಜಿಸಿ ಬಿಜೆಪಿ ಗೆಲುವಿನ ಅವಕಾಶ ಮಾಡಿಕೊಡಲು ಎಐಎಂಐಎಂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪಗಳಿದ್ದವು. ಇದೀಗ, ಅದೇ ಪಕ್ಷದಲ್ಲಿ ಕಾರ್ಯಾಧ್ಯಕ್ಷರಾಗಿದ್ದ ಗಫಾರ್ ಖಾದ್ರಿ ಅವರು ಅದೇ ಆರೋಪ ಮಾಡಿ, ಪಕ್ಷ ತೊರೆದಿದೆ. ಅದರೊಂದಿಗೆ, ಎಐಎಂಐಎಂ ಪಕ್ಷವು ಬಿಜೆಪಿಯ ಬಿ-ಟೀಮ್‌ ಆಗಿ ಕೆಲಸ ಮಾಡಿದೆ ಮತ್ತು ಮಾಡುತ್ತಿದೆ ಎಂಬುದು ಬಹಿರಂಗವಾಗಿದೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎಐಎಂಐಎಂ ಪಕ್ಷದ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿದ್ದ ಗಫಾರ್ ಖಾದ್ರಿ, ಕಳೆದ ವಾರ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಅಕ್ಟೋಬರ್ 8ರಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಖಾದ್ರಿ, ತಮ್ಮ ದಶಕದ ರಾಜಕೀಯ ಪಯಣ, ಪಕ್ಷಕ್ಕಾಗಿ ತಾವು ಮಾಡಿರುವ ಪ್ರಯತ್ನ, ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತನಾಡಿದ್ದರು. “ಓವೈಸಿ ಅವರು ಮಹಾರಾಷ್ಟ್ರದ ಚುನಾವಣೆಗೆ ಐದು ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಆದರೆ, ಅದರಲ್ಲಿ ನನ್ನ ಹೆಸರಿಲ್ಲ. ಇದು ನನ್ನ ಪ್ರಾಮಾಣಿಕ ಕೆಲಸಗಳಿಗೆ ಕೊಟ್ಟ ಹೊಡೆತವಾಗಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಸಮಾಜವಾದಿ ಪಕ್ಷವು ಹಲವಾರು ಕ್ಷೇತ್ರಗಳಲ್ಲಿ AIMIM ಅನ್ನು ಬೆಂಬಲಿಸಿತು. ಆದರೂ, ಸಂಭಾಜಿನಗರ ಪೂರ್ವ ಕ್ಷೇತ್ರದಲ್ಲಿ ನನ್ನ ವಿರುದ್ಧ ಸಮಾಜವಾದಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಆ ಅಭ್ಯರ್ಥಿಯು 5,500ಕ್ಕೂ ಅಧಿಕ ಮತಗಳನ್ನು ಪಡೆದು ನಾನು ಸೋಲುವಂತೆ ಮಾಡಿದರು. ನನ್ನನ್ನು ಸೋಲಿಸುವಲ್ಲಿ ನಮ್ಮದೇ ಪಕ್ಷದ (ಎಐಎಂಐಎಂ) ನಾಯಕರ ಕೈವಾಡವಿತ್ತು. ಈಗ, ಟಿಕೆಟ್ ಕೊಡದೆ ನನ್ನನ್ನು ಮೂಲೆಗುಂಪು ಮಾಡುತ್ತಿದ್ದಾರೆ” ಎಂದು ಕ್ವಾದ್ರಿ ಆರೋಪಿಸಿದ್ದರು.

ಈ ವರದಿ ಓದಿದ್ದೀರಾ?: ಪಾತಕಿ ಲಾರೆನ್ಸ್‌ ಗ್ಯಾಂಗ್ ಜೊತೆ ಬಿಜೆಪಿ ನಂಟು?

ಅಂದಹಾಗೆ, ಖಾದ್ರಿ ಅವರು ಎಐಎಂಐಎಂ ಪಕ್ಷದ ಕೆಲವು ನಡೆಗಳನ್ನು ಖಂಡಿಸುತ್ತಿದ್ದರು. ಪಕ್ಷದ ಸೈದ್ಧಾಂತಿಕ ನಿಲುವುಗಳ ಬಗ್ಗೆ ಪ್ರಶ್ನೆ ಎತ್ತುತ್ತಿದ್ದರು. ಆ ಕಾರಣಕ್ಕಾಗಿಯೇ 2019ರ ಚುನಾವಣೆಯಲ್ಲಿ ಅವರನ್ನು ಸೋಲಿಸುವ ತಂತ್ರಗಳು ನಡೆದಿದ್ದವು ಎಂದು ಆರೋಪಿಸಲಾಗಿದೆ. ಇದೀಗ, ಅವರು ಪಕ್ಷವನ್ನೇ ತೊರೆದಿದ್ದಾರೆ.

ಗಮನಾರ್ಹವಾಗಿ, ಓವೈಸಿ ಅವರ ಎಐಎಂಐಎಂ ಪಕ್ಷವು ಎಲ್ಲ ರಾಜ್ಯಗಳ ಚುನಾವಣೆಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತಂತ್ರ ರೂಪಿಸುತ್ತದೆ. ಎಲ್ಲ ರಾಜ್ಯಗಳಲ್ಲಿಯೂ ಸ್ಪರ್ಧಿಸುತ್ತದೆ. ತನಗೆ ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿಯೂ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಓವೈಸಿ ಅವರು ಭಾರೀ ಪ್ರಚಾರಗಳನ್ನೂ ನಡೆಸುತ್ತಾರೆ. ಓವೈಸಿ ಪ್ರಚಾರ ನಡೆಸುವ ಹಲವಾರು ಕ್ಷೇತ್ರಗಳು ಬಿಜೆಪಿ ಗೆಲುವಿಗೆ ತೊಡಕಾಗುವ ಕ್ಷೇತ್ರಗಳೇ ಆಗಿರುತ್ತವೆ. ಅಂತಹ ಕ್ಷೇತ್ರಗಳಲ್ಲಿ ಓವೈಸಿ ಪ್ರಚಾರದಿಂದ ಮುಸ್ಲಿಂ ಮತಗಳು ವಿಭಜನೆಯಾಗಿ, ಬಿಜೆಪಿ ಗೆಲುವಿಗೆ ಅವಕಾಶ ದೊರೆಯುತ್ತದೆ ಎಂಬ ಆರೋಪಗಳಿವೆ. ಅದೇ ಆರೋಪವನ್ನು ಖಾದ್ರಿ ಅವರೂ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...