ಮಹಾರಾಷ್ಟ್ರ | ಇದು ಜನರ ತೀರ್ಪಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ: ಸಂಜಯ್ ರಾವತ್

Date:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಹಿನ್ನೆಡೆ ಕಾಣುತ್ತಿದ್ದಂತೆ ಶಿವಸೇನೆ (ಉದ್ದವ್ ಠಾಕ್ರೆ) ಬಣ ನಾಯಕ ಸಂಜಯ್ ರಾವತ್, “ಏನೋ ನಡೆದಿದೆ, ಇದು ಜನರ ತೀರ್ಪಾಗಿರಲು ಸಾಧ್ಯವಿಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ” ಎಂದು ಅಭಿಪ್ರಾಯಿಸಿದ್ದಾರೆ.

ಆದರೆ ಸಂಜಯ್ ರಾವತ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, “ರಾಜ್ಯಸಭಾ ಸಂಸದ ಮಾನಸಿಕ ದಿವಾಳಿತನದಿಂದ ಬಳಲುತ್ತಿದ್ದಾರೆ” ಎಂದು ಹೇಳಿದೆ.

“ಏನೋ ಗೊಂದಲವಿದೆ, ಇದು ಜನರ ತೀರ್ಪು ಆಗಿರಲು ಸಾಧ್ಯವೇ ಇಲ್ಲ” ಎಂದು ಹೇಳಿರುವ ಸಂಜಯ್ ರಾವತ್, ಮತಯಂತ್ರದಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುವುದೇ ಅಥವಾ ಬೇರೆ ರೀತಿಯಲ್ಲಿ ಮತಗಳನ್ನು ತಿರುಚಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣಾ ಫಲಿತಾಂಶ | ಮಹಾರಾಷ್ಟ್ರದಲ್ಲಿ ‘ಮಹಾಯುತಿ’, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮುನ್ನಡೆ

“ಎಲ್ಲಾ ಕ್ಷೇತ್ರದಲ್ಲಿಯೂ ಹಣದ ಮೆಷಿನ್ ಅಳವಡಿಸಲಾಗಿದೆ. ಓರ್ವ ಶಾದಕ ಸೋತರೂ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿದ್ದರು. ಯಾವುದೇ ಚುನಾವಣೆಯಲ್ಲಿ ಈ ರೀತಿ ನಡೆದಿದೆಯೇ? ಯಾವ ಧೈರ್ಯದಲ್ಲಿ ಶಿಂದೆ ಹೇಳಿಕೆ ನೀಡಿದರು? ಇದು ಯಾವ ರೀತಿಯ ಪ್ರಜಾಪ್ರಭುತ್ವ” ಎಂದು ಪ್ರಶ್ನಿಸಿದರು.

“ಯಾರಿಗಾದರೂ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಲಭಿಸಲು ಸಾಧ್ಯವೇ? ರಾಜ್ಯದಲ್ಲಿ ಪ್ರಾಮಾಣಿಕತೆ ಇಲ್ಲದಂತೆ ತೋರುತ್ತದೆ. ಆದರೆ ಈ ರಾಜ್ಯದ ಜನರು ಅಪ್ರಾಮಾಣಿಕರಲ್ಲ” ಎಂದು ಹೇಳಿದರು.

ಈ ಫಲಿತಾಂಶವನ್ನು ನಿಮ್ಮ ಪಕ್ಷ ಸ್ವೀಕರಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾವತ್, “ಇಲ್ಲ, ಜನರು ಕೂಡಾ ಈ ಫಲಿತಾಂಶವನ್ನು ಒಪ್ಪಲಾರರು ಎಂದು ನಾನು ಭಾವಿಸುತ್ತೇನೆ. ನಾನು ಮತ್ತೆ ಹೇಳುತ್ತೇನೆ, ಇದು ಜನರ ತೀರ್ಪಲ್ಲ. ಏಕನಾಥ್ ಶಿಂದೆ ಬಣ 60 ಸ್ಥಾನಗಳನ್ನು, ಅಜಿತ್ ಪವಾರ್ ಬಣ 40 ಸ್ಥಾನಗಳನ್ನು, ಬಿಜೆಪಿ 125 ಸ್ಥಾನಗಳನ್ನು ಪಡೆಯಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಎಂದ ಚುನಾವಣೋತ್ತರ ಸಮೀಕ್ಷೆಗಳು

ಇನ್ನು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸಂಜಯ್ ರಾವತ್, ಮತ್ತೆ ಈ ಆರೋಪವನ್ನೇ ಮಾಡಿದ್ದಾರೆ. ಜೊತೆಗೆ “ಮತ್ತೊಮ್ಮೆ ಮತಪತ್ರ ಬಳಸಿ ಚುನಾವಣೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ 145 ಬಹುಮತವಾಗಿದೆ. ಈಗಾಗಲೇ ಮಹಾಯುತಿ ಮೈತ್ರಿಕೂಟವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮತ್ತೆ ಸರ್ಕಾರ ಅಧಿಕಾರ ಪಡೆಯಲು ತಯಾರಿ ನಡೆಸುತ್ತಿದೆ. ಇಂಡಿಯಾ ಒಕ್ಕೂಟ ಭಾರಿ ಹಿನ್ನೆಡೆ ಅನುಭವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...