ಮಹಾರಾಷ್ಟ್ರ ಚುನಾವಣೆ | ಮುಂಬೈನಲ್ಲಿ ‘ಶಾಯಿ’ ತಿರುಚಿದ, ನಕಲಿ ಮತದಾನದ ಗಂಭೀರ ಆರೋಪ

Date:

ಗುರುವಾರ (ಜ.15), ಮಹಾರಾಷ್ಟ್ರದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮತದಾನದ ವೇಳೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ, ವಿವಾದಗಳು ಭುಗಿಲೆದ್ದಿವೆ. ಶೀಘ್ರವೇ ಅಳಿಸಬಹುದಾದ ಶಾಯಿಯನ್ನು ಹಾಕುವ ಮೂಲಕ ಪುನರಾವರ್ತಿತ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಈ ಆರೋಪವನ್ನು ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ನಿರಾಕರಿಸಿವೆ.

ಬಿಎಂಸಿ ವ್ಯಾಪ್ತಿಯಲ್ಲಿ ಮತದಾನದ ವೇಳೆ ಮತದಾರರಿಗೆ ಹಾಕಲಾಗುವ ಶಾಯಿಯ ಗುರುತುಗಳನ್ನು ಕೆಲವೇ ನಿಮಿಷಗಳಲ್ಲಿ ಅಳಿಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆ ವರದಿಯನ್ನು ಬಿಎಂಸಿ ತಳ್ಳಿಹಾಕಿದೆ. ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಮತದಾರರ ಎಡಗೈ ಬೆರಳಿಗೆ ಪ್ರಮಾಣಿತ ಶಾಯಿಯನ್ನು ಹಾಕಲಾಗುತ್ತಿದೆ” ಬಿಎಂಸಿ ಆಯುಕ್ತ ಭೂಷಣ್ ಗಗ್ರಾಣಿ ಹೇಳಿದ್ದಾರೆ.

ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ ಅವರು, “ಚುನಾವಣೆಗಳಲ್ಲಿ ಬಳಸಲಾಗುವ ಸಾಂಪ್ರದಾಯಿಕ ಶಾಯಿಯ ಬದಲಿಗೆ ‘ಹೊಸ ಪೆನ್ನು’ಅನ್ನು ಬಳಸಲಾಗುತ್ತಿದೆ. ಇದರಿಂದ ಹಚ್ಚಲಾಗುವ ಶಾಯಿಯನ್ನು ಸ್ಯಾನಿಟೈಸರ್‌ನಿಂದ ಸುಲಭವಾಗಿ ತೆಗೆದುಹಾಕಲಾಗುತ್ತಿದೆ. ರಾಜ್ಯ ಮಹಾಯುತಿ ಸರ್ಕಾರವು ಅಧಿಕಾರಕ್ಕಾಗಿ ವಂಚನೆಯನ್ನು ಅವಲಂಬಿಸಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ಮತದಾರರು ಸಿಕ್ಕಿಬಿದ್ದಿದ್ದಾರೆ. ಶಾಯಿ ಹಚ್ಚಿಸಿಕೊಂಡು ಮತದಾನ ಮಾಡಿ ಹೊರಬಂದು ಅದನ್ನು ಅಳಿಸಿಕೊಂಡು, ಮತ್ತೆ ಮರು ಮತ ಚಲಾಯಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. “ನಕಲಿ ಶಾಯಿ ಬಳಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬೇಕು” ಎಂದು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.

ಅವರ ಆರೋಪವನ್ನು ನಿರಾಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ಈ ರೀತಿ ಗದ್ದಲದ ಸೃಷ್ಟಿಸುವುದು ತಪ್ಪು. ನನಗೂ ಶಾಯಿ ಹಾಕಲಾಗಿದೆ. ಅದನ್ನು ಅಳಿಸಲಾಗುತ್ತಿದೆಯೇ? ಚುನಾವಣಾ ಆಯೋಗ ತನಿಖೆ ಮಾಡಲಿ ಅಥವಾ ಎಣ್ಣೆ ಬಣ್ಣವನ್ನು ಬಳಸಲಿ; ಚುನಾವಣೆಗಳು ನಿಷ್ಪಕ್ಷಪಾತವಾಗಿರಬೇಕು” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ ಮೇಲೆ ಕೋಮುವಾದದ ಕರಿನೆರಳು!

ಶಾಯಿ ತಿರುಚುವಿಕೆ ಮಾತ್ರವಲ್ಲದೆ, ಮತದಾನದ ವೇಳೆಯೇ, ವಿವಿಪ್ಯಾಟ್‌ಗಳ ಅನುಪಸ್ಥಿತಿ, ಕೊನೆ ಕ್ಷಣದಲ್ಲಿ PADU ಬಳಕೆ, ನಕಲಿ ಮತದಾರರಿಂದ ಮತ ಚಲಾವಣೆ, ವಿಭಿನ್ನ ಪಕ್ಷಗಳ ಪರವಾಗಿ ಎರಡು ಕ್ಷೇತ್ರಗಳಲ್ಲಿ ಓರ್ವ ಅಭ್ಯರ್ಥಿ ಸ್ಪರ್ಧೆ, ಮತಗಟ್ಟೆಗಳ ಸರಿಯಾದ ಮಾಹಿತಿ ಇಲ್ಲದಿರುವುದು, ಕೆಟ್ಟು ಸ್ಥಗಿತಗೊಳ್ಳುತ್ತಿರುವ ಇವಿಎಂಗಳು ಹಾಗೂ ಅನಿಯಂತ್ರಿತ ಹಣ ವಿತರಣೆಯ ಆರೋಪಗಳು ಕೇಳಿಬರುತ್ತಿವೆ. ಆದರೂ, ಚುನಾವಣಾ ಆಯೋಗವು ಗಂಭೀರವಾಗಿ ಸಮಸ್ಯೆಗಳನ್ನು ಪರಿಗಣಿಸುತ್ತಿಲ್ಲ ಮತ್ತು ಪರಿಹರಿಸುತ್ತಿಲ್ಲ ಎಂದೂ ಹೇಳಲಾಗುತ್ತಿದೆ. ಇದು, ಆಯೋಗದ ಅದಕ್ಷತೆಯತ್ತ ಬೊಟ್ಟುಮಾಡಿತೋರುತ್ತಿದೆ.

ಈಗಾಗಲೇ ಅನುಮಾನದ ಸುಳಿಯಲ್ಲಿ ಸಿಲುಕಿರುವ ಚುನಾವಣಾ ಪ್ರಕ್ರಿಯೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಚುನಾವಣಾ ಆಯೋಗವು ತನ್ನದೇ ಆದ ಸ್ವತಂತ್ರ ಅಸ್ತಿತ್ವವನ್ನು ಉಳಿಸಿಕೊಂಡಿದೆಯೇ? ಚುನಾವಣೆಗಳನ್ನು ವಿಶ್ವಾಸಾರ್ಹ, ಸುರಕ್ಷಿತ ಹಾಗೂ ದೋಷರಹಿತ ರೀತಿಯಲ್ಲಿ ನಡೆಸಲಾಗುತ್ತಿದೆಯೇ ಎಂಬ ಪ್ರಶ್ನೆಗಳು ಮುನ್ನಲೆಯಲ್ಲಿವೆ.

ಬಿಎಂಸಿ 227 ವಾರ್ಡ್‌ಗಳನ್ನು ಹೊಂದಿದ್ದು, 1,700 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 10,231 ಮತದಾನ ಕೇಂದ್ರಗಳನ್ನು ತೆಗೆಯಲಾಗಿದ್ದು, ಚುನಾವಣಾ ಕರ್ತವ್ಯಕ್ಕಾಗಿ 64,375 ಸಿಬ್ಬಂದಿಯನ್ನು ನೇಮಿಸಲಾಗಿದೆ. 3.49 ಕೋಟಿ ಮತದಾರರು ಮತದಾನ ಚಲಾಯಿಸುತ್ತಿದ್ದಾರೆ. ಬೆಳಗ್ಗೆ 11:30ರವರೆಗೆ 17.73% ಮತದಾನವಾಗಿದೆ. ಆ ನಂತರದ ಮತದಾನದ ಅಂಕಿಅಂಶವನ್ನು ಆಯೋಗ ಇನ್ನೂ ಪ್ರಕಟಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...