ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಕಾಯ್ದುಕೊಳ್ಳುವುದು ಮುಖ್ಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದನ್ನ ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಇಂದಿನಿಂದ ಮಾರ್ಚ್ 6 ರವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೊ ಲಸಿಕಾ ಅಭಿಯಾನದಲ್ಲಿ 5 ವರ್ಷದ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.‌

ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೊ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾದ ನವೀನ್ ಭಟ್ ಪಾಲ್ಗೊಂಡಿದ್ದರು.

ಮಾರ್ಚ್ 3 ರಿಂದ 6ರವರೆಗೆ ಪೋಲಿಯೊ ಲಸಿಕೆ ಅಭಿಯಾನ

Wild Polio Virusನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ಭಾರತದ ನೆರೆ ರಾಷ್ಟ್ರಗಳೂ ಸೇರಿರುವುದು ಭಾರತಕ್ಕೆ ಕಳವಳಕಾರಿಗಿದೆ. ಹೀಗಾಗಿ ಪೋಲಿಯೊ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳುಬೇಕಿದೆ.‌ India Expert Advisory Group (IEAG) ಶಿಫಾರಸ್ಸಿನನ್ವಯ 0-5 ವರ್ಷದೊಳಗಿನ ಎಲ್ಲ ಮಕ್ಕಳನ್ನು ವ್ಯಾಪ್ತಿಗೊಳಪಡಿಸಿದಂತೆ ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನವನ್ನ ಮಾರ್ಚ್ 3 ರಿಂದ 6ರ ವರೆಗೆ ಹಮ್ಮಿಕೊಳ್ಳಲಾಗಿದೆ.‌

ಮೊದಲನೇ ದಿನ ಮಾರ್ಚ್ 3ರಂದು ಪೋಲಿಯೊ ಬೂತ್‌ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ 2 ಹನಿ ಪೋಲಿಯೊ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ.

ಪಿ-2 ವಿಧದ ಪೋಲಿಯೊ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ.‌ ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಧಿಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019 ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿರುವುದು. ದಿನಾಂಕ:13.01.2011ರಲ್ಲಿ ಪಶ್ಚಿಮ ಬಂಗಳಾದಲ್ಲಿ ಕೊನೆಯ ಪೋಲಿಯೊ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇಲ್ಲಿಯವರೆಗೂ ಯಾವುದೇ ಪೋಲಿಯೊ ಪ್ರಕರಣಗಳು ವರದಿಯಾಗಿರುವುದಿಲ್ಲ.

ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೊ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್‌ಜಕ್ಟಬಲ್ ಪೋಲಿಯೊ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲು ಗುರಿ ಹೊಂದಲಾಗಿದೆ.

ಸುಮಾರು 33,712 ಪೋಲಿಯೊ ಬೂತ್‌ಗಳನ್ನ ತೆರೆಯಲಾಗಿದ್ದು, 1,11,370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನ ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನ ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೊ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ನಿಮ್ಮ ಹತ್ತಿರದ ಪೋಲಿಯೊ ಬೂತ್ ಅನ್ನು ಗುರುತಿಸಲು ‘Nearby Vaccination centre Karnataka’ ಆ್ಯಂಡ್ರಾಯ್ಡ್ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...