ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

Date:

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು ನಷ್ಟ ಆಗಿದ್ದು ರಾಜ್ಯಕ್ಕೆ. ಈ ಬಾರಿ ಮತ್ತೆ ಅಂತಹ ತಪ್ಪಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಬೃಹತ್ ಜನಸಮಾವೇಶವನ್ನು ಉದ್ಘಾಟಿಸಿ, ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮುಖಂಡರುಗಳನ್ನು ಸ್ವಾಗತಿಸಿದ ಬಳಿಕ ಮಾತನಾಡಿದ ಅವರು, “ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ” ಎಂದರು.

“371ಜೆ ಜಾರಿ ಆಗೋದಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಕಾರಣ. ಇವರ ಹೋರಾಟ, ಶ್ರಮದಿಂದಾಗಿ ಈ ಭಾಗಕ್ಕೆ 371ಜೆ ಜಾರಿಯಾಗಿ ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ವರದನವಾಗಿದೆ. ಬಿಜೆಪಿಯವರು 371ಜೆ ಕೊಡಲು ಖಡಾಖಂಡಿತವಾಗಿ ನಿರಾಕರಿಸಿದ್ದರು. ಆದರೆ ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು. ಇದರ ಫಲವಾಗಿ 371ಜೆ ಈ ಭಾಗಕ್ಕೆ ದೊಡ್ಡ ಮಟ್ಟದ ಅನುಕೂಲ ಆಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಲಿಕಾರ್ಜುನ ಖರ್ಗೆಯವರ ಸೋಲಿನಿಂದ ಈ ಭಾಗಕ್ಕೆ ಬಹಳ ನಷ್ಟ ಆಗಿದೆ. ಈ ಬಾರಿ ಅದಕ್ಕೆ ಅವಕಾಶ ಕೊಡಬಾರದು. KKRDB ಮೂಲಕ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂ. 5000 ಕೋಟಿ ನೀಡಲಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರ ಅಭಿವೃದ್ಧಿ ಮತ್ತು‌ ಏಳಿಗೆಗಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ನುಡಿದಂತೆ ನಡೆದು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ” ಎಂದು ಹೇಳಿದರು.

“ಮೋದಿಯವರು ಹತ್ತತ್ತು ವರ್ಷ ಪ್ರಧಾನಿಯಾಗಿ ಬಡ ಭಾರತೀಯರ, ಮಧ್ಯಮ ವರ್ಗದ ಭಾರತೀಯರ ಪ್ರಗತಿಗಾಗಿ, ಏಳಿಗೆಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿ ಮಾಡಿದ ಉದಾಹರಣೆ ಇದ್ದರೆ ತೋರಿಸಿ” ಎಂದು ಸವಾಲು ಹಾಕಿದರು.

“ನಮ್ಮ ಗ್ಯಾರಂಟಿಗಳನ್ನು ಕದ್ದಿರುವ ಮೋದಿ ಮತ್ತು ಟೀಮು ಪರಮ ಸುಳ್ಳುಗಾರರು ಎನ್ನುವುದು ದೇಶದ ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಆಗಿದೆ. ಸುಳ್ಳುಗಳ ಮೂಲಕ ಭಾರತೀಯರನ್ನು ನಿರಂತರವಾಗಿ ಬಕ್ರಾ ಮಾಡುವ ಬಿಜೆಪಿಯ ಅಭಿಯಾನಕ್ಕೆ ಬ್ರೇಕ್ ಹಾಕಿ” ಎಂದು ಕರೆ ನೀಡಿದರು.

“ಬಿಜೆಪಿ ಸಂಸದರ ಅಯೋಗ್ಯತನದ ಕಾರಣದಿಂದ ರಾಜ್ಯಕ್ಕೆ ಬರಬೇಕಾದ ಬರಗಾಲದ ಪಾಲನ್ನು ಪಡೆಯಲು ನಾವು ಸುಪ್ರೀಂಕೋರ್ಟ್‌ಗೆ ಹೋಗಬೇಕಾಯಿತು. ಬರಗಾಲದ ಅನುದಾನದ ವಿಚಾರದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವ ಅಮಿತ್ ಶಾ ರಾಜ್ಯದ ಜನರಿಗೆ ದೊಡ್ಡ ಸುಳ್ಳು ಹೇಳಿದರು” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...