ರಾಜ್ಯ ಚುನಾವಣಾ ಅಖಾಡಕ್ಕೆ ಮಮತಾ ಬ್ಯಾನರ್ಜಿ; ಜೆಡಿಎಸ್‌ ಪರ ಪ್ರಚಾರ

Date:

  • ರಾಜ್ಯದಲ್ಲಿ ಜೆಡಿಎಸ್‌ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ
  • ಕುತೂಹಲ ಕೆರಳಿಸಿದ ಮಮತಾ ಬ್ಯಾನರ್ಜಿ – ಕುಮಾರಸ್ವಾಮಿ ಭೇಟಿ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೆಲುವಿಗಾಗಿ ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದೆಡೆ ರಾಷ್ಟ್ರೀಯ ಪಕ್ಷ ಬಿಜೆಪಿ ತನ್ನ ದೆಹಲಿ ನಾಯಕರನ್ನು ವಾರಕ್ಕೊಬ್ಬರಂತೆ ಪ್ರಚಾರಕ್ಕೆ ಕರೆಸುತ್ತಿದ್ದರೆ, ಮತ್ತೊಂದೆಡೆ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರಚಾರದ ಅಖಾಡಕ್ಕಿಳಿಸುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಸೀಟುಗಳನ್ನು ಗೆಲ್ಲಬೇಕೆಂದು ಪಣ ತೊಟ್ಟಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆಯ ಮೂಲಕ ರಾಜ್ಯದ ಮೂಲೆ ಮೂಲೆಗೂ ಪ್ರಯಾಣಿಸಿ, ಪಕ್ಷದ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆಯೇ ರಾಷ್ಟ್ರೀಯ ಮಟ್ಟದ ನಾಯಕರನ್ನು ರಾಜ್ಯ ಚುನಾವಣಾ ಪ್ರಚಾರಕ್ಕೆ ಕರೆತರಲು ಮುಂದಾಗಿರುವ ಕುಮಾರಸ್ವಾಮಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿದ ಬಳಿಕ ಕುಮಾರಸ್ವಾಮಿ ವಿಶೇಷ ವಿಮಾನದಲ್ಲಿ ಕೋಲ್ಕತ್ತಾಗೆ ತೆರಳಿದ್ದಾರೆ. ಮಮತಾ ಬ್ಯಾನರ್ಜಿ ಅವರೊಂದಿಗಿನ ಸುದೀರ್ಘ ಮಾತುಕತೆಯ ಬಳಿಕ ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಟಿಎಂಸಿ ನಾಯಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ” ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇವೆ” ಎಂದು ಸಭೆಯ ಕುರಿತು ವಿವರಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿರುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ಬಾರಿ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆದಾಗಲೂ ಕೇಂದ್ರ ಸರ್ಕಾರ ವಿಪರೀತ ಕಿರುಕುಳ ನೀಡಿತು. ಆದರೂ ಜನತೆಯ ಆಶೀರ್ವಾದದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂತು. ಅದೇ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಅಧಿಕಾರಕ್ಕೆ ಬರಲಿದೆ ಎಂದು ಮಮತಾ ಅವರು ಹೇಳಿದ್ದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

“’ನೀವು ಯಾವಾಗ ಹೇಳಿದರೂ ನಾನು ಕರ್ನಾಟಕಕ್ಕೆ ಬಂದು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ. ನೀವು ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಿ’ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದರು. ಇದರಿಂದ ನನಗೆ ಬಹಳ ಸಂತಸ ಆಗಿದೆ. ಇಂದು ಅವರು ನನ್ನನ್ನು ಅತ್ಯಂತ ಆದರಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು” ಎಂದಿದ್ದಾರೆ.

“ಇದೇ 26ರಂದು ಮೈಸೂರಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಬಗ್ಗೆಯೂ ಮಮತಾ ಅವರು ಮಾಹಿತಿ ಪಡೆದರು. ಅಲ್ಲದೆ, ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು” ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಸಹ ಕೆಲ ತಿಂಗಳಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತೃತೀಯರಂಗ ರಚನೆ ಕುರಿತು ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಕುಮಾರಸ್ವಾಮಿ ಅವರು ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯನ್ನು ಹುಟ್ಟುಹಾಕುವುದು ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿ ಅವರು ಕಳೆದ ವಾರ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆ ಮಾತುಕತೆ ನಡೆಸಿದ್ದರು. ಇದೀಗ ಎಚ್.ಡಿ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದ್ದಾರೆ. ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಿದ್ದಾರೆ. ಪ್ರಾದೇಶಿಕ ಪಕ್ಷಗಳ ನಾಯಕರ ನಡೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಕೆರಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...