ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ನಿಯಮಾನುಸಾರ ಜಾಗ ಮೀಸಲು: ಎಂ ಬಿ ಪಾಟೀಲ್‌

Date:

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇ. 24.1ರಷ್ಟು ಜಾಗವನ್ನು‌ ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ನಿಯೋಗವು ಸಚಿವರ ಬಳಿ ಮಾತನಾಡಿ, “ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ” ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸ್ಪಂದಿಸಿದ ಸಚಿವರು, “ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇಕಡಾ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರಕಾರದ ಬದ್ಧತೆಯ ಬಗ್ಗೆ ಅನುಮಾನ ಬೇಡ. ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು” ಎಂದು ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

“ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು” ಎಂದು ಅವರು ನುಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...