ಮಂಡ್ಯ | ಆಡಳಿತಕ್ಕಾಗಿ ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್:‌ ಸಚಿವ ಚಲುವರಾಯಸ್ವಾಮಿ ತಿರುಗೇಟು

Date:

“ರಮ್ಮಿ ಆಟದಲ್ಲಿ ಜೋಕರ್ ಇರುವ ಎಲೆಯನ್ನು ಯಾವುದಕ್ಕಾದರೂ ಸೇರಿಸಬಹುದು. ಆಡಳಿತಕ್ಕಾಗಿ ಯಾರ ಜತೆ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್ ಆಗಿದ್ದಾರೆಯೇ ಹೊರತು ನಾನಲ್ಲ. ಆದ್ದರಿಂದ ಆ ಪದಕ್ಕೆ ಅವರೇ ಹೆಚ್ಚು ಸೂಕ್ತ” ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯವರು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ

ತಮ್ಮನ್ನ ಜೋಕರ್‌ ಎಂದಿರುವ ಕುಮಾರಸ್ವಾಮಿ ವಿರುದ್ಧ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಗೆ ಬಾಯಿ ಚಪಲ ಜಾಸ್ತಿ. ನಾಲಗೆಗೆ ಎಲುಬಿಲ್ಲ ಅಂತ ಮನಸ್ಸಿಗೆ ಬಂದಿದ್ದನೆಲ್ಲ ಮಾತಾಡಿದರೆ ಗೌರವ ಸಿಗಲ್ಲ, ತನ್ನನ್ನು ಮಂತ್ರಿ ಮಾಡಿದ್ದೆ ಅಂತ ಹೇಳಿದರೆ ಅವರನ್ನು ಮುಖ್ಯಮಂತ್ರಿ ಮಾಡಲು ತಾನೂ ಕಾರಣನಾಗಿದ್ದೆ ಅನ್ನೋದನ್ನು ಕೇಂದ್ರ ಸಚಿವ ಮರೆಯಬಾರದು” ಎಂದು ಹೇಳಿದರು.

“ಕುಮಾರಸ್ವಾಮಿ ಆಗಾಗ ಟಿವಿಯಲ್ಲಿ ಕಾಣಿಸಿಕೊಳ್ಳದಿದ್ದರೆ ನಿದ್ದೆ ಬರಲ್ಲ. ಟಿವಿಯಲ್ಲಿ ಬಂದಾಕ್ಷಣ ಸಿದ್ದರಾಮಯ್ಯರನ್ನು, ಶಿವಕುಮಾರ್ ಅವರನ್ನು ಮತ್ತು ನನ್ನನ್ನು ಬಯ್ಯುವುದಷ್ಟೇ ಅವರು ಮಾಡೋದು, ಅವರಿಗೆ ಸೌಜನ್ಯತೆ ಎಂಬುದೇ ಗೊತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಐಐಟಿ ಪದಕ್ಕೆ ಅರ್ಥ ಗೊತ್ತಿದೆಯೇ’ ಎನ್ನುವ ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, “ಮಂಡ್ಯಕ್ಕೆ ಐಐಟಿ ತರಲು ಅವರು ಪತ್ರ ಬರೆದಿದ್ದಾರಾ?. ಅವರ ತಂದೆ ಪ್ರಧಾನಮಂತ್ರಿ, ನನ್ನ ತಂದೆ ರೈತ. ನಾನು ಜಿ.ಪಂ. ಸದಸ್ಯನಿಂದ ರಾಜಕಾರಣ ಮಾಡಿದ್ದೇನೆ. ನನಗೆ ಜನರ ಕಷ್ಟ ಗೊತ್ತಿದೆ. ಅವರು ನನ್ನ ಮಂತ್ರಿ ಮಾಡಿದ್ದೇನೆ ಎನ್ನುವುದಾದರೆ, ನಾನು ಅವರನ್ನು ಮುಖ್ಯಮಂತ್ರಿ ಮಾಡಿದ್ದೀನಿ ಎನ್ನುವುದು ತಪ್ಪಲ್ಲ” ಎಂದರು. 

ಈ ಸುದ್ದಿ ಓದಿದ್ದೀರಾ? ಚಲುವರಾಯಸ್ವಾಮಿ ನೂರಕ್ಕೆ ನೂರರಷ್ಟು ಜೋಕರ್: ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವ್ಯಂಗ್ಯ

“ಕುಮಾರಸ್ವಾಮಿಯಿಂದ ರಾಜಕಾರಣ ಕಲಿಯುವ ಅವಶ್ಯಕತೆ ನನಗಿಲ್ಲ. ಎಚ್‌ಡಿಕೆಯನ್ನು ನಾಯಕನನ್ನಾಗಿ ಮಾಡಲು ನಾವು ಸಾಥ್ ಕೊಟ್ವಾ, ಇಲ್ವಾ ಎನ್ನುವುದನ್ನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುತ್ತಾರಾ?. ಮೂರು ಹೊತ್ತೂ ಬೇರೆಯವರನ್ನು ಬೈಯುತ್ತ ನಾಲಗೆ ಚಪಲ ತೀರಿಸಿಕೊಳ್ಳುವ ಅವರ ಬಗ್ಗೆ ಮಾತನಾಡಿ ನಾಲಗೆ ಹೊಲಸು ಮಾಡಿಕೊಳ್ಳಲು ಇಷ್ಟವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...