ಮಂಡ್ಯ | ಪಾರ್ಕ್‌ನಲ್ಲಿ ವಾಕಿಂಗ್‌ ಮಾಡುತ್ತಲೇ ಸಾರ್ವಜನಿಕರ ಅಭಿಪ್ರಾಯ ಆಲಿಸಿದ ಶಾಸಕ ರವಿಕುಮಾರ್ ಗಣಿಗ

Date:

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್‌ನಲ್ಲಿ ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭಿವೃದ್ಧಿಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಆಲಿಸಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳು, ಪಾದಚಾರಿ ಮಾರ್ಗ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕೆಲಸಗಳಿಗೆ ನಾಗರಿಕರ ಬೆಂಬಲದ ಅಗತ್ಯವಿದೆ ಎಂದು ಶಾಸಕರು ತಿಳಿಸಿದ್ದಾರೆ.

ಶಾಸಕರೊಂದಿಗೆ ಮಾತನಾಡಿದ ಸಾರ್ವಜನಿಕರು ಮಂಡ್ಯ ನಗರವನ್ನು ಅಭಿವೃದ್ಧಿ ಪಡಿಸಲು ಕೈಗೊಳ್ಳಬೇಕಾದ ಹಲವು ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ. ಯುವ ಜನರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ನಿರುದ್ಯೋಗ. ಯುವ ಜನರನ್ನು ಸರಿದಾರಿಗೆ ತರಲು ಮಂಡ್ಯದಲ್ಲಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬೇಕು. ಮಾದಕ ವಸ್ತುಗಳ ದಂಧೆಕೋರರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ನಗರವಾಸಿಗಳ ಸಲಹೆ, ಸೂಚನೆಗಳನ್ನು ಆಲಿಸಿದ ಶಾಸಕರು, “ಮಂಡ್ಯ ನಗರದ ಸಮಸ್ಯೆಗಳು ಕುರಿತು ಸದನದಲ್ಲಿ ಚರ್ಚಿಸುತ್ತೆನೆ. ಶೀಘ್ರದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇವೆ. ನನ್ನ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಬಡಜನರು ಇಂದಿಗೂ ಸಹ ಸ್ವಂತ ನಿವೇಶನ ಹಾಗೂ ಮನೆ ಇಲ್ಲದೆ ಕಷ್ಟಪಡುತ್ತಿದ್ದಾರೆ. ಅದರೆ, ಬೇಕಾದಷ್ಟು ಸರ್ಕಾರಿ ಜಾಗಗಳು ದಾಖಲೆಗಳಲ್ಲಿ ಇದ್ದರೂ, ಹಲವೆಡೆ ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿಯಾಗಿರುವ ಭೂಮಿಯನ್ನ ತೆರವುಗೊಳಿಸುವ ಬಗ್ಗೆ ಯೋಜಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರಾವಧಿಯ 5 ವರ್ಷಗಳಲ್ಲಿ ಕ್ಷೇತ್ರದ ಮತದಾರರಿಗೆ ಬೇಕಿರುವ ಸೌಲಭ್ಯಗಳಾದ ಶಿಕ್ಷಣ, ಆರೋಗ್ಯ ಹಾಗೂ ರೈತರು, ಕಾರ್ಮಿಕರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಸರ್ಕಾರದ ಜೊತೆ ಚರ್ಚಿಸಿ, ಕಾರ್ಯಗತಗೊಳಿಸಲು ಶ್ರಮಿಸುತ್ತೇನೆ. ಮಂಡ್ಯ ನಗರವನ್ನು ಅಭಿವೃದ್ಧಿ ಪಡಿಸುವ ಹೊಣೆ ನನ್ನ ಮೇಲಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...