ಮಂಗಳೂರು ಘಟನೆ | ‘ಪಾಕಿಸ್ತಾನ್ ಜಿಂದಾಬಾದ್’ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು: ಗೃಹ ಸಚಿವ ಪರಮೇಶ್ವರ್

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್, ‘ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾರಣ’ ಎಂದು ಮಂಗಳವಾರ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಸ್ಪಷ್ಟನೆ ನೀಡಿದ್ದು, “ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ನನ್ನದಲ್ಲ, ಕೊಲೆ ಆರೋಪಿಗಳದ್ದು” ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನ ಹೇಳಿಕೆಯು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾದದ್ದು ನನ್ನ ಗಮನಕ್ಕೆ ಬಂದಿದೆ. ಹಾಗಾಗಿ, ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ. ಪಾಕಿಸ್ತಾನ ಜಿಂದಾಬಾದ್ ಹೇಳಿದ ಅಂತ ಕೊಲೆ ಆರೋಪಿಗಳು ಹೇಳಿದ್ದು. ಅದು ನನ್ನದಲ್ಲ” ಎಂದು ತಿಳಿಸಿದ್ದಾರೆ.

“ಗುಂಪು ಹಲ್ಲೆ ನಡೆಸಿದ್ದವರ ಪೈಕಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ಮಾಡುವಾಗ ಮೃತಪಟ್ಟ ಯುವಕ ‘ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ’ ಎಂದು ಹೇಳಿಕೆ ನೀಡಿದ್ದರು. ನೀವೆಲ್ಲ(ಮಾಧ್ಯಮ) ನಾನು ಹೇಳಿದಂಗೆ ಹೇಳಿಬಿಟ್ಟಿದ್ದೀರ. ಆರೋಪಿಗಳ ಪ್ರತಿಕ್ರಿಯೆಯಲ್ಲಿ ಈ ಮಾತು ಬಂದಿದೆ ಅಂತ ನಾನು ಹೇಳಿಕೆ ನೀಡಿದ್ದೆ” ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಕ್ಕೆ ಯಾವುದೇ ಪುರಾವೆ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಹೇಳಿದ್ದಾರೋ ಬಿಟ್ಟಿದ್ದಾರೋ ಎಂಬ ಬಗ್ಗೆ ನಮ್ಮಲ್ಲಿ ಮಾಹಿತಿ ಇಲ್ಲ. ಇದಕ್ಕೂ ನಮಗೆ ಸಾಕ್ಷಿ ಬೇಕಾಗುತ್ತದೆ. ಅದು ಕೂಡ ದೃಢೀಕರಿಸಬೇಕಿದೆ. ಕ್ರಿಕೆಟ್ ಆಡಲು ಹೋದವರಲ್ಲಿ ಅನೇಕರಿದ್ದರು. ಹಾಗಾಗಿ, ಎಲ್ಲರನ್ನೂ ಕರೆದು ವಿಚಾರಿಸಲಾಗುತ್ತಿದೆ” ಎಂದು ಗೃಹ ಸಚಿವರು ಪ್ರತಿಕ್ರಿಯೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಮೃತಪಟ್ಟ ಅಶ್ರಫ್‌ ಅಂತ್ಯಸಂಸ್ಕಾರ; ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

“ನನಗೆ ಘಟನೆಯ ಬಗ್ಗೆ ಇನ್ನೂ ಪೂರ್ಣ ವರದಿ ಬಂದಿಲ್ಲ. ಸಂಪೂರ್ಣ ವರದಿ ಬಂದ ನಂತರ ಎಲ್ಲ ಮಾಹಿತಿಯನ್ನು ಹಂಚುತ್ತೇನೆ. ಯಾವುದೇ ಪ್ರಕರಣವನ್ನು ನಾವು ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ತನಿಖೆಯನ್ನು ಮಾಡುತ್ತಿದ್ದೇವೆ.” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...