ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಪ್ರಧಾನಿ ಹಾಸ್ಯ : ರಾಹುಲ್ ಗಾಂಧಿ ಗಂಭೀರ ಆರೋಪ

Date:

‘ಲೋಕಸಭೆಯಲ್ಲಿ ನಿನ್ನೆ ಪ್ರಧಾನಿ ಎರಡು ಗಂಟೆ ಹದಿಮೂರು ನಿಮಿಷ ಭಾಷಣ ಮಾಡಿದರು. ಮಣಿಪುರವು ಕಳೆದ ನಾಲ್ಕು ತಿಂಗಳುಗಳಿಂದ ಉರಿಯುತ್ತಿದೆ. ಜನರನ್ನು ಕೊಲ್ಲಲಾಗುತ್ತಿದೆ. ಮಹಿಳೆಯರನ್ನು ಅತ್ಯಾಚಾರ ಮಾಡಲಾಗುತ್ತಿದೆ. ಮಕ್ಕಳನ್ನು ಕೊಲ್ಲಲಾಗುತ್ತಿದೆ. ಆದರೆ ಪ್ರಧಾನಿ ನಗುತ್ತಾ, ಜೋಕ್ ಮಾಡುತ್ತಾ, ತಮಾಷೆ ಮಾಡುತ್ತಾ ಲಜ್ಜೆ ಇಲ್ಲದೆ ಹಾಸ್ಯ ಮಾಡುತ್ತಿದ್ದರು. ದೇಶದ ಪ್ರಧಾನಿಯಾಗಿ ಆ ರೀತಿ ನಡೆದುಕೊಂಡಿರುವುದು ಪ್ರಧಾನಿ ಹುದ್ದೆಗೆ ಸರಿ ಹೊಂದುವುದಿಲ್ಲ’ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಲೋಕಸಭೆಯಲ್ಲಿ ಎರಡು ಗಂಟೆ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಬಳಿಕ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಮಣಿಪುರ ಈಗ ಒಂದಾಗಿಲ್ಲ, ಬಿಜೆಪಿಯಿಂದಾಗಿ ಎರಡಾಗಿದೆ. ಮಣಿಪುರ ಈಗ ಒಂದು ರಾಜ್ಯವಾಗಿ ಉಳಿದಿಲ್ಲ’ ಎಂಬ ಭಯಾನಕ ಸತ್ಯವನ್ನು ರಾಹುಲ್ ಗಾಂಧಿ ಬಿಚ್ಚಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಣಿಪುರಕ್ಕೆ ಭೇಟಿ ನೀಡಿದ ವೇಳೆ ನನಗೆ ಒಂದು ಸತ್ಯದ ಅನಾವರಣವಾಗಿದೆ. ಆದರೆ ಆ ಸತ್ಯವನ್ನು ನಾನು ಈ ಮೊದಲೇ ಹೇಳಬೇಕಿತ್ತು. ಈ ಸತ್ಯವನ್ನು ಕಣ್ಣಾರೆ ಕಂಡಿದ್ದೇನೆ. ಆ ಸತ್ಯ ಏನೆಂದರೆ ಮಣಿಪುರ ಈಗ ಒಂದಾಗಿಲ್ಲ, ಬಿಜೆಪಿಯಿಂದಾಗಿ ಎರಡಾಗಿದೆ. ಮಣಿಪುರ ಈಗ ಒಂದು ರಾಜ್ಯವಾಗಿ ಉಳಿದಿಲ್ಲ. ಏಕೆಂದರೆ ನಾನು ಭೇಟಿ ನೀಡಿದಾಗ ಮೈತೇಯಿ ಸಮುದಾಯದ ಮಂದಿ ನೀವು ಭೇಟಿ ನೀಡುವ ಗುಂಪಿನಲ್ಲಿ ಕುಕಿಗಳು ಇದ್ದರೆ ದಯವಿಟ್ಟು ಕರೆ ತರಬೇಡಿ, ನಾವು ಅವರನ್ನು ಗುಂಡಿಟ್ಟು ಕೊಲ್ಲುತ್ತೇವೆ. ಇದೇ ರೀತಿ, ಕುಕಿ ಸಮುದಾಯವರನ್ನು ಭೇಟಿ ನೀಡುವ ಮುಂಚೆಯೇ ಮೈತೇಯಿ ಸಮುದಾಯದ ಮಂದಿ ಇರಬಾರದು ಎಂಬ ಸ್ಪಷ್ಟವಾದ ಸೂಚನೆ ನಮಗೆ ದೊರಕಿತ್ತು. ಹಾಗಾಗಿ, ನಾವು ಬೇರೆ ಬೇರೆ ಗುಂಪಾಗಿಯೇ ಭೇಟಿ ನೀಡಬೇಕಾಯಿತು. ನನ್ನ 19 ವರ್ಷದ ರಾಜಕೀಯ ಜೀವನದಲ್ಲಿ ಈ ಮೊದಲು ಈ ರೀತಿಯ ಅನುಭವ ನನಗೆ ಆಗಿರಲಿಲ್ಲ. ಹಾಗಾಗಿಯೇ, ನಾನು ಲೋಕಸಭೆಯಲ್ಲಿ ಭಾರತ ಮಾತೆಯ ಹತ್ಯೆಯಾಗಿದೆ ಎಂದು ಹೇಳಿದ್ದೆ” ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಮಣಿಪುರ ಈಗ ಒಂದಾಗಿ ಉಳಿದಿಲ್ಲ. ಒಂದು ರಾಜ್ಯದ ಎರಡು ಭಾಗವಾಗಿ ಒಡೆದುಹೋಗಿದೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಇದಕ್ಕೆಲ್ಲ ಅಲ್ಲಿನ ಬಿಜೆಪಿ ಸರ್ಕಾರದ ನಡವಳಿಕೆಯೇ ಕಾರಣ. ಅವರಿಂದಾಗಿಯೇ ಈ ರೀತಿ ಆಗಿದೆ. ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸುರಕ್ಷಾ ದಳದ ಅಧಿಕಾರಿಗಳು ಕೂಡ, ನಮಗೆ ಯಾವತ್ತೂ ಈ ರೀತಿಯ ಅನುಭವ ಆಗಿಲ್ಲ ಎಂಬುದನ್ನು ನಮ್ಮೊಂದಿಗೆ ಹಂಚಿಕೊಂಡರು ಎಂದು ರಾಹುಲ್ ಗಾಂಧಿ ಹೇಳಿದರು.

‘ಅಲ್ಲಿನ ಅಧಿಕಾರಿಗಳು ನಮ್ಮ ಕೈಯಿಂದ ಪರಿಸ್ಥಿತಿ ಮೀರಿ ಹೋಗಿದೆ ಎಂದು ಹೇಳುತ್ತಿದ್ದಾರೆ. ಹಾಗಾಗಿ, ಒಂದು ವೇಳೆ ಭಾರತೀಯ ಸೇನೆಗೆ ಮಣಿಪುರದ ಪರಿಸ್ಥಿತಿಯನ್ನು ಹಸ್ತಾಂತರಿಸಿದರೆ ಕೇವಲ ಮೂರು ದಿನಗಳಲ್ಲಿ ಮತ್ತೆ ಮುಂದಿನ ಸ್ಥಿತಿಗೆ ತಲುಪಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬೆಂಕಿಯನ್ನು ನಂದಿಸಲು ಇಷ್ಟವಿಲ್ಲ. ಇದುವೇ ನಿಜ ಸ್ಥಿತಿ’ ಎಂದು ರಾಹುಲ್ ಗಾಂಧಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...