ಮಣಿಪುರಕ್ಕೆ ಭೇಟಿ ನೀಡಿದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗ

Date:

ಪ್ರತಿಪಕ್ಷ ನೇತೃತ್ವದ ‘ಇಂಡಿಯಾ’ ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿಗಾಗಿ ಶನಿವಾರ (ಜುಲೈ 29) ಹಿಂಸಾಚಾರ ಪೀಡಿತ ಮಣಿಪುರ ರಾಜ್ಯಕ್ಕೆ ತೆರಳಿದೆ.

ಇಂಡಿಯಾ ಒಕ್ಕೂಟ ರಚನೆಯಾದ ನಂತರ ಪ್ರತಿಪಕ್ಷ ಸದಸ್ಯರ ಮೊದಲ ಭೇಟಿ ಇದಾಗಿದೆ. ಎರಡು ದಿನಗಳ ಭೇಟಿಯಲ್ಲಿ ವಿಪಕ್ಷ ನಾಯಕರು ಇಂಫಾಲ್‌ಗೆ ಬಂದಿಳಿದು ನಂತರ ಚುರಾಚಂದಪುರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿ ಅಲ್ಲಿ ಕುಕಿ, ಮೀತೀ ಸಮುದಾಯದ ಬುಡಕಟ್ಟು ಮುಖಂಡರು, ನಾಗರಿಕ ಸಮಾಜ ಮತ್ತು ಮಹಿಳಾ ಗುಂಪುಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. ನಿಯೋಗವು ಭಾನುವಾರ ಮಣಿಪುರದ ರಾಜ್ಯಪಾಲ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಲಿದೆ. 

ಕಾಂಗ್ರೆಸ್‌ನ ಗೌರವ್ ಗೊಗೊಯ್ ಅವರು “ಮಣಿಪುರಕ್ಕೆ ಹೋಗಿ ಸತ್ಯವನ್ನು ಕಂಡುಕೊಳ್ಳುತ್ತೇವೆ ಮತ್ತು ಆ ಸತ್ಯವನ್ನು ಸಂಸತ್ತಿನ ಮುಂದೆ ಮಂಡಿಸುತ್ತೇವೆ. ಮಣಿಪುರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ವಿಫಲವಾಗಿದೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ಏನು ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ಅವಲೋಕಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಜೆಡಿಯ ಮನೋಜ್ ಝಾ, “ಮಣಿಪುರದ ಜನರ ಮಾತುಗಳನ್ನು ಕೇಳಲು ಮತ್ತು ಅವರ ನೋವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಾಗಿ” ಹೇಳಿದರು.

ನಿಯೋಗದಲ್ಲಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಫುಲೋ ದೇವಿ ನೇತಮ್, ಕೆ ಸುರೇಶ್, ಟಿಎಂಸಿಯ ಸುಶ್ಮಿತಾ ದೇವ್, ಡಿಎಂಕೆಯ ಕನಿಮೋಳಿ, ಡಿ. ರವಿಕುಮಾರ್, ಆರ್‌ಜೆಡಿಯ ಮನೋಜ್ ಕುಮಾರ್ ಝಾ, ಜೆಡಿಯುನಿಂದ ರಾಜೀವ್ ರಂಜನ್ ಸಿಂಗ್, ಅನಿಲ್ ಪ್ರಸಾದ್ ಹೆಗ್ಡೆ, ಮೊಹಮ್ಮದ್ ಫೈಜಲ್ (ರಾಷ್ಟ್ರೀಯ ಕಾಂಗ್ರೆಸ್ ಪಕ್ಷ), ಜಯಂತ್ ಚೌಧರಿ (ರಾಷ್ಟ್ರೀಯ ಲೋಕದಳ), ಎನ್.ಕೆ. ಪ್ರೇಮಚಂದ್ರನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ) ಮತ್ತು ಟಿ. ತಿರುಮಾವಲವನ್ (ವಿಸಿಕೆ), ಸಿಪಿಐನ ಸಂತೋಷ್ ಕುಮಾರ್, ಸಿಪಿಐಎಂನ ಎ ಎ ರಹೀಮ್, ಸಮಾಜವಾದಿ ಪಕ್ಷದ ಜಾವೇದ್ ಅಲಿ ಖಾನ್, ಐಯುಎಂಎಲ್‌ನ ಇ ಟಿ ಮೊಹಮ್ಮದ್ ಬಶೀರ್, ಎಎಪಿಯ ಸುಶೀಲ್ ಗುಪ್ತಾ, ಅರವಿಂದ್ ಸಾವಂತ್(ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ)  ನಾಯಕರು ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದ ಅಕ್ಕಿ ರಫ್ತು ನಿಷೇಧ ಮತ್ತು ಜಾಗತಿಕ ಪರಿಣಾಮಗಳು

ಈ ತಿಂಗಳು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರ ಹಿಂಸಾಚಾರದ ವಿಷಯ ಸದನದಲ್ಲಿ ಗದ್ದಲಗಳಿಗೆ ಕಾರಣವಾಗಿದೆ. ವಿರೋಧ ಪಕ್ಷದ ಸಂಸದರು ಮಣಿಪುರದ ಬಗ್ಗೆ ಸುದೀರ್ಘ ಚರ್ಚೆಗೆ ಹಾಗೂ ಸದನದಲ್ಲಿ ಪ್ರಧಾನಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ನೋಟಿಸ್ ಕೂಡ ನೀಡಲಾಗಿದೆ.

ಲೋಕಸಭೆಯ ಸ್ಪೀಕರ್ ಅವಿಶ್ವಾಸ ನಿರ್ಣಯದ ಪ್ರಸ್ತಾವವನ್ನು ಅಂಗೀಕರಿಸಿದ್ದಾರೆ. ಆದರೆ ಅವಿಶ್ವಾಸ ಮತದ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...