ಸಿಂಗ್‌ ಅವರು ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕ ಸಂಕಷ್ಟದಿಂದ ಮೇಲೆತ್ತಿದರು: ಸಿದ್ದರಾಮಯ್ಯ

Date:

ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿ, “ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು” ಎಂದರು.

“ತಾವು ಅಲಂಕರಿಸಿದ ಎಲ್ಲ ಹುದ್ದೆಗಳಿಗೂ ನ್ಯಾಯ ಒದಗಿಸಿದರು. RBI ಗವರ್ನರ್ ಆಗಿ, ಆರ್ಥಿಕ ಸಚಿವರಾಗಿ, ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಎಲ್ಲಾ ಹುದ್ದೆಗಳಿಗೂ ಪ್ರಾಮಾಣಿಕ ನ್ಯಾಯ ಒದಗಿಸಿದರು. ಸೋನಿಯಾಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಹುದ್ದೆಗೆ ಮನಮೋಹನ್ ಸಿಂಗ್ ಅವರನ್ನು ಆರಿಸಿದರು. ಹತ್ತು ವರ್ಷಗಳ ಕಾಲ ದೇಶವನ್ನು ಅತ್ಯಂತ ಸದೃಡವಾಗಿ ಮುನ್ನಡೆಸಿದರು. ಭಾರತ ಆರ್ಥಿಕ ಸಂಕಷ್ಟದಲ್ಲಿದ್ದಾಗ ಉದಾರೀಕರಣ ಜಾರಿ ಮಾಡಿ ದೇಶವನ್ನು ಆರ್ಥಿಕವಾಗಿ ಮೇಲೆತ್ತಿದರು” ಎಂದು ವಿಶ್ಲೇಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನಮೋಹನ್ ಸಿಂಗ್ ಅವರಿಗಿಂತ ಮೊದಲು ದೇಶದ ಆರ್ಥಿಕತೆಯನ್ನು ವಿಶ್ವ ಆರ್ಥಿಕತೆ ಜೊತೆಗೆ ಮುಕ್ತ ಮಾಡಿರಲಿಲ್ಲ. ಇವರು ಮುಕ್ತಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದರು. ನಮ್ಮ ಸಂವಿಧಾನದ ಮೂಲಭೂತ ಆಶಯಗಳನ್ನು ಅಕ್ಷರಶಃ ಜಾರಿ ಮಾಡಿದರು. ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಹಲವು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಿ ದೇಶದ ಬಡವರು, ಮಧ್ಯಮವರ್ಗದವರನ್ನು ಆರ್ಥಿಕವಾಗಿ ಮೇಲೆತ್ತುವುದರಲ್ಲಿ ಯಶಸ್ವಿಯಾದರು” ಎಂದು ತಿಳಿಸಿದರು.

ಸಿಂಗ್‌ ಅಗಲಿಕೆ ವಿಶ್ವ ಆರ್ಥಿಕತೆಗೆ ಆಗಿರುವ ನಷ್ಟ

“ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನಾವು ಆರಂಭಿಸಿದಾಗ ನಾವು ಮನಮೋಹನ್ ಸಿಂಗ್ ಅವರನ್ನು ಕರೆಸಿದ್ದೆವು. ಕರ್ನಾಟಕದ ಆರ್ಥಿಕತೆ ಬಗ್ಗೆ ಒಂದು ಕಾರ್ಯಕ್ರಮಕ್ಕೆ ನಾವು ಕರೆಸಿದ್ದೆವು. ಆಗ, ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕತೆ ಅತ್ಯಂದ ಸದೃಡವಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದರು. ಅವರ ಜ್ಞಾನ ಭಾರತದ ಅನೇಕ ಸಮಸ್ಯೆಗಳಿಗೆ ಪರಹಾರ ಕಂಡುಕೊಳ್ಳಲು ಸಾಧ್ಯವಾಯಿತು. ದೇಶದ ಆರ್ಥಿಕ ಸಮಸ್ಯೆಗಳನ್ನು ನಿಖರವಾಗಿ ಗ್ರಹಿಸಿ, ಪರಿಹರಿಸುತ್ತಿದ್ದ ಅವರು ನಿಗರ್ವಿ ಆಗಿದ್ದರು. ಅತ್ಯಂತ ವಿನಯಶೀಲರಾಗಿದ್ದರು. ನಾನು ಬದುಕಿರುವಾಗ ನನ್ನ ಕೆಲಸಗಳಿಗೆ ಹೆಚ್ಚು ಮಾನ್ಯ ಸಿಗದಿದ್ದರೂ ಮುಂದೆ ನಮ್ಮ ಕೆಲಸಗಳಿಗೆ ಹೆಚ್ಚು ಮಹತ್ವ ಸಿಗಲಿದೆ ಎಂದು ಮನಮೋಹನ್ ಸಿಂಗ್ ಅವರು ಅವತ್ತೇ ಹೇಳಿದ್ದರು‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...