ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

Date:

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇಂದು (ಭಾನುವಾರ) ಪ್ರಧಾನಿ ನರೇಂದ್ರ ಮೋದಿ ಅವರ 102ನೇ ಮನ್‌ ಕಿ ಬಾತ್‌ ಸಂಚಿಕೆಯಲ್ಲಿ, ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸುವಿರಾ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಇಂದು ಮೋದಿಯವರ 102ನೇ ಸಂಚಿಕೆಯ ಮನ್‌ ಕಿ ಬಾತ್‌. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆ. ಮೋದಿಯವರೇ, ಇಂದಿನ ಮನ್ ಕಿ ಬಾತ್‌ನಲ್ಲಾದರೂ ಚರ್ವಿತ ಚರ್ವಣದಂತೆ ಹೇಳಿದನ್ನೇ ಹೇಳುವುದ ಬಿಟ್ಟು ಹೊಸದೇನಾದರೂ ಹೇಳುವಿರಾ” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೇ, ನಿಮ್ಮ ಇಂದಿನ ಮನ್ ಕಿ ಬಾತ್ ಬಗ್ಗೆ ಅನೇಕ ನಿರೀಕ್ಷೆಗಳಿವೆ. ಇಂದು ನಿಮ್ಮ ಮನದಾಳದ ಮಾತಿನಲ್ಲಿ ಮಣಿಪುರದ ಹಿಂಸಾಚಾರದ ಬಗ್ಗೆ ಮಾತಾಡುವಿರೆ? ಮಹಿಳಾ ಕುಸ್ತಿಪಟುಗಳ ಮೇಲೆ ನಿಮ್ಮ ಪಕ್ಷದ ಸಂಸದ ಎಸಗಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತಾಡುವಿರೆ? ಚೀನಾ ಮತ್ತು ಭಾರತದ ಗಡಿ ಸಂಘರ್ಷದ ಬಗ್ಗೆ ದೇಶದ ಜನರೆದುರು ಸತ್ಯ ಮಾತಾಡುವಿರೆ?” ಎಂದು ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿಯವರೇ, ನಮ್ಮ ರಾಜ್ಯಕ್ಕೆ ಅಕ್ಕಿ ಕೊಡಲು ಒಪ್ಪಿ ನಂತರ ನಿರಾಕರಿಸಿದ ಬಗ್ಗೆ ಮನ್‌ ಕಿ ಬಾತ್‌ನಲ್ಲಿ ಮಾತಾಡುವಿರೆ? ಬಡವರಿಗೆ ಸಿಗಬೇಕಾಗಿದ್ದ ಅಕ್ಕಿಯನ್ನು ಹೆಂಡ ತಯಾರಿಸಲು ಬೇಕಾದ ಎಥೆನಾಲ್ ಉತ್ಪಾದನೆಗೆ‌ ಕೊಟ್ಟಿದ್ಯಾಕೆ ಎಂಬ ಬಗ್ಗೆ ಮಾತಾಡುವಿರೆ? ನೀವು ಇಲ್ಲಿಯವರೆಗೂ ಕೊಟ್ಟ ಆಶ್ವಾಸನೆಗಳು ಎಷ್ಟು ಈಡೇರಿದೆ ಎಂಬ ಬಗ್ಗೆ ‌ಮಾತಾಡುವಿರೆ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೂರು ತಿಂಗಳೊಳಗೆ ‘108’ ಆರೋಗ್ಯ ಸೇವೆಗೆ ಹೊಸ ರೂಪ: ದಿನೇಶ್‌ ಗುಂಡೂರಾವ್‌

“ಮೋದಿಯವರೇ, ನಿಮ್ಮ ಇಂದಿನ ಮನ್ ಕಿ‌ ಬಾತ್ ಸತ್ಯ ಹಾಗೂ ವಾಸ್ತವದ ಅನಾವರಣವಾಗಿರಲಿ. ಸತ್ಯ ಹೇಳುವ ಮೂಲಕ ಈ ಮನ್ ಕಿ ಬಾತ್‌ ವಿಶಿಷ್ಟ ವಿಭಿನ್ನವಾಗಿರಲಿ. ಮೋದಿಯವರೆ ಸತ್ಯ ಮಾತಾಡಲು ಹೃದಯ ಶುದ್ಧಿಯಿರಬೇಕು ಹಾಗೂ ಮನಸ್ಸು ಕಲ್ಮಶ ರಹಿತವಾಗಿರಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಧೈರ್ಯವಿರಬೇಕು.‌ ಇಂದಾದರೂ ನಾವು ನಿಮ್ಮಿಂದ ಸತ್ಯ ನಿರೀಕ್ಷಿಸಬಹುದೇ?” ಎಂದು ಕುಟುಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...