ಕಾಂಗ್ರೆಸ್ ಸೇರಲು ಬಹಳಷ್ಟು ಜನರಿಂದ ಅಪೇಕ್ಷೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Date:

  • ಸರ್ಕಾರಕ್ಕೆ ನೂರು ದಿನ, ಆದರೂ ವಿಪಕ್ಷದ ನಾಯಕನ ಆಯ್ಕೆ ಆಗಿಲ್ಲ ಎಂದ ಮಾಜಿ ಸಿಎಂ
  • ಗದಗದಲ್ಲಿ ಬಿಜೆಪಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಾಗ್ದಾಳಿ

“ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ” ಎಂದು ಮಾಜಿ ಸಿಎಂ, ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

ಗದಗದಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದಮಾಜಿ ಸಿಎಂ, “ಸರ್ಕಾರ ರಚಿಸಿ ನೂರು ದಿನಗಳಾದರೂ ರಾಜ್ಯದಲ್ಲಿ ವಿಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಬಿಜೆಪಿ ಎಷ್ಟು ಶೋಚನೀಯ ಪರಿಸ್ಥಿತಿಯಲ್ಲಿದೆ ಎಂಬುದನ್ನು ಇದು ಸೂಚಿಸುತ್ತದೆ. ಚೀಟಿ ಎತ್ತುವ ಮೂಲಕವಾದರೂ ಬಿಜೆಪಿ ತಾತ್ಕಾಲಿಕ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿ. ರಾಜ್ಯ ಬಿಜೆಪಿ ಕೆಲವರ ಕಪಿಮುಷ್ಠಿಯಲ್ಲಿದೆ. ಹೀಗಾಗಿ ಸುಧಾರಣೆ ಆಗಿಲ್ಲ” ಎಂದು ಪರೋಕ್ಷವಾಗಿ ಬಿ ಎಲ್ ಸಂತೋಷ್ ವಿರುದ್ಧ ಕಿಡಿಕಾರಿದರು.

“ಬಿಜೆಪಿಯಲ್ಲಿ ‘ಮಿಸ್‌ ಮ್ಯಾನೇಜ್‌ಮೆಂಟ್‌’ ಇದೆ. ಬಿಜೆಪಿಯ ಮಾಜಿ ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಕ್ಷೋಭೆ ಉಂಟಾಗಿದೆ. ಕಾಂಗ್ರೆಸ್‌ ಬರಬೇಕು ಎಂದು ಬಹಳಷ್ಟು ಜನರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರನ್ನೂ ಸೆಳೆಯುವ ಪ್ರಶ್ನೆಯೇ ಇಲ್ಲ. ಅವರಾಗಿಯೇ ಬರುತ್ತಿದ್ದಾರೆ. ಮಾಜಿ ಸಚಿವ ಬಿ.ಸಿ.ಪಾಟೀಲ್​ ಸಂಪರ್ಕದಲ್ಲಿಲ್ಲ” ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗಾಯತರಿಗೆ ಅನ್ಯಾಯವಾಗಿದೆ ಎಂಬ ಕೂಗಿಗೆ ಈಗ ಹೋರಾಟದ ರೂಪ ಸಿಗುತ್ತಿದೆ. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಲಿಂಗಾಯತರನ್ನು ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದರ ನೇತೃತ್ವವನ್ನು ಧರ್ಮದ ಜಗದ್ಗುರುಗಳು ವಹಿಸಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...