ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮರಾಠ ಮೀಸಲಾತಿಗೆ ಒಪ್ಪಿದ ಶಿಂಧೆ ಸರ್ಕಾರ: ನಾಲ್ಕು ದಶಕಗಳ ಹೋರಾಟ ಅಂತ್ಯ

Date:

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ, ಮೀಸಲಾತಿಗೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ನಾಲ್ಕು ದಶಕಗಳ ಹೋರಾಟ ಅಂತ್ಯಗೊಂಡಿದೆ.

ನಮ್ಮ ಮನವಿಯನ್ನು ಸ್ವೀಕರಿಸಿ ಮಹಾರಾಷ್ಟ್ರ ಸರ್ಕಾರವು ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದೆ. ಹಾಗಾಗಿ, ನನ್ನ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿದ್ದೇನೆ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಜ್ ಪಾಟೀಲ್ ಲಕ್ಷಾಂತರ ಜನರ ಮುಂದೆ ಘೋಷಿಸಿದರು. ಈ ವೇಳೆ ನೆರೆದಿದ್ದ ಮಂದಿ ಕೇಕೆ, ಶಿಳ್ಳೆ ಹೊಡೆದು ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿ.ಎಂ ಏಕನಾಥ್ ಶಿಂಧೆ ಅವರು ಮನೋಜ್ ಅವರಿಗೆ ಜ್ಯೂಸ್ ನೀಡಿದರು. ಅದನ್ನು ಸ್ವೀಕರಿಸಿದ ಅವರು, ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ ಎಂದು ಘೋಷಣೆ ಮಾಡಿದರು.

ಮುಖ್ಯಮಂತ್ರಿಯವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ನಮ್ಮ ಬೇಡಿಕೆಗಳಿಗೆ ಒಪ್ಪಿಗೆಯನ್ನು ಸೂಚಿಸುವ ಮೂಲಕ ನನ್ನ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿದ್ದೇನೆ. ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದೇನೆ ಎಂದು ಹೇಳಿದರು.

ತಮ್ಮ ಬೇಡಿಕೆಗೆ ಆಗ್ರಹಿಸಿ ಜನವರಿ 20ರಂದು ಜಲ್ನಾದಿಂದ ಪ್ರಾರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರವನ್ನು ಪ್ರವೇಶಿಸಲು ಸಜ್ಜಾಗುತ್ತಿದ್ದಂತೆ ಅವರ ಘೋಷಣೆ ಹೊರಬಿದ್ದಿದೆ.

ಸಾಮಾಜಿಕ ಕಾರ್ಯಕರ್ತ ಮನೋಜ್ ಜಾರಾಂಗೆ ನೇತೃತ್ವದಲ್ಲಿ ಶುಕ್ರವಾರ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭವಾಗಿತ್ತು. ದಕ್ಷಿಣ ಮುಂಬೈನ ಆಝಾದ್ ಮೈದಾನದಲ್ಲಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಇದರೊಂದಿಗೆ ನಾಲ್ಕು ದಶಕಗಳಿಂದ ನಡೆಯುತ್ತಿದ್ದ ಹೋರಾಟ ಅಂತ್ಯಗೊಂಡಿದೆ.

ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಪ್ರತಿಭಟನೆ ಸುಖಾಂತ್ಯ ಕಂಡಿದೆ. ನಂತರ ಮಹಾರಾಷ್ಟ್ರ ಸರ್ಕಾರವು ಜಾತಿ ಮೀಸಲಾತಿ ಕುರಿತು ಸರ್ಕಾರಿ ಆದೇಶ ಹೊರಡಿಸಿದ್ದು, ಸಚಿವರಾದ ದೀಪಕ್ ಕೇಸರ್ಕರ್ ಮತ್ತು ಮಂಗಲ್ ಪ್ರಭಾತ್ ಲೋಧಾ ಅವರು ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಪತ್ರ ನೀಡಿದ್ದಾರೆ.

ನಾಲ್ಕು ದಶಕಗಳಿಂದ ನಡೆಯುತ್ತಿದ್ದ ಹೋರಾಟ
ಮಹಾರಾಷ್ಟ್ರ ಜನಸಂಖ್ಯೆಯಲ್ಲಿ 33% ಒಳಗೊಂಡಿರುವ ಮರಾಠ ಸಮುದಾಯವು ದಶಕಗಳಿಂದ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿದ್ದವು. 1981 ರಲ್ಲಿ ಮರಾಠಾ ಮೀಸಲಾತಿಗೆ ಒತ್ತಾಯಿಸಿ ಮೊದಲ ಪ್ರತಿಭಟನೆಯು ಮತ್ತಾಡಿ ಕಾರ್ಮಿಕ ಸಂಘದ ನಾಯಕ ಅಣ್ಣಾಸಾಹೇಬ ಪಾಟೀಲ ನೇತೃತ್ವದಲ್ಲಿ ನಡೆದಿತ್ತು.

2019ರಲ್ಲಿ ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ 16% ಮೀಸಲಾತಿ ನೀಡಿತು. ಆದರೆ, 2021ರಲ್ಲಿ ಸುಪ್ರೀಂ ಕೋರ್ಟ್‌ ಶೇ.50 ಮೀಸಲಾತಿಯನ್ನು ಉಲ್ಲೇಖಿಸಿ ಶೇ.16ರ ಕೋಟಾವನ್ನು ರದ್ದುಗೊಳಿಸಿತ್ತು. ಅಂದಿನಿಂದ ಮನೋಜ್ ಜಾರಂಗೆ ನೇತೃತ್ವದಲ್ಲಿ ಮತ್ತೆ ಪ್ರತಿಭಟನೆ ಭುಗಿಲೆದ್ದಿತ್ತು. ಕೆಲವು ಕಡೆಗಳಲ್ಲಿ ಪ್ರತಿಭಟನೆಯು ಹಿಂಸಾರೂಪಕ್ಕೂ ತಾಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...