ಮಥುರಾ ದೇವಾಲಯ-ಮಸೀದಿ ಪ್ರಕರಣ | ಮುಸ್ಲಿಂ ಮುಖಂಡರ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿ, ವಿವಾದ ಸೃಷ್ಟಿಸಿದ್ದ ಹಿಂದುತ್ವವಾದಿಗಳ ಕಣ್ಣು ಈಗ ಮಥುರಾ ಮೇಲೆ ನೆಟ್ಟಿದೆ. ಮಥುರಾದ ಕೃಷ್ಣ ದೇವಾಲಯ ಮತ್ತು ಶಾಹಿ ಈದ್ಗಾ ಮಸೀದಿ ಒಂದೇ ಜಾಗದಲ್ಲಿದ್ದು, ಅದನ್ನು ವಿವಾದ ಸ್ಥಳವಾಗಿಸಲು ಮುಂದಾಗಿವೆ. ಈದ್ಗಾ ಮಸೀದಿ ಇರುವ ಸ್ಥಳ ಕೃಷ್ಣ ಜನ್ಮಭೂಮಿಗೆ ಸೇರಿದ್ದೆಂದು ಹಿಂದುತ್ವವಾದಿಗಳು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯ ಅಂಗೀಕಾರಾರ್ಹತೆ ಪ್ರಶ್ನಿಸಿ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ.

ಶಾಹಿ ಈದ್ಗಾ ಮಸೀದಿ ಪರವಾಗಿ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಅರ್ಜಿಯಲ್ಲಿ ಆದೇಶ 7 ನಿಯಮ 11 ಸಿಪಿಡಿ ಅಡಿಯಲ್ಲಿ ಹೈಕೋರ್ಟ್‌ ವಜಾಗೊಳಿಸಿದೆ. ಕೃಷ್ಣ ಜನ್ಮಭೂಮಿ ಪರವಾಗಿ ಹಿಂದುತ್ವವಾದಿಗಳು ಸಲ್ಲಿಸಿರುವ ಎಲ್ಲ 18 ಮೊಕದ್ದಮೆಗಳು ಅಂಗೀಕಾರಾರ್ಹವಾಗಿದೆ ಎಂದು ಕೋರ್ಟ್‌ ಹೇಳಿದೆ.

ಹಿಂದುತ್ವವಾದಿಗಳು ಸಲ್ಲಿಸಿರುವ ಹಲವು ಅರ್ಜಿಗಳಲ್ಲಿ ರಾಜ ಔರಂಗಜೇಬ್ ಕಾಲದಲ್ಲಿ ದೇವಾಲಯವನ್ನು ನೆಲಸಮಗೊಳಿಸಿ, ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ವಾದಿಸಲಾಗಿದೆ. ಮಸೀದಿಯನ್ನು ಆ ಸ್ಥಳದಿಂದ ತೆರವುಗೊಳಿಸುವಂತೆ ಕೋರಲಾಗಿದೆ. ಅಲ್ಲದೆ, ಪೂಜಾಸ್ಥಳಗಳ ಕಾಯ್ದೆ, ಲಿಮಿಟೇಷನ್ ಕಾಯ್ದೆ ಮತ್ತು ವಕ್ಫ್ ಕಾಯ್ದೆಗಳು ಈ ಪ್ರಕರಣದಲ್ಲಿ ಅನ್ವಯವಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಶೋಷಿತರ ವಿರುದ್ಧ ಅಸ್ತ್ರವಾದ ಅತ್ಯಾಚಾರ; ಇಸ್ರೇಲ್‌ನಿಂದ ಹೇಯ ಕೃತ್ಯ – ಭಾರತವೂ ಹೊರತಾಗಿಲ್ಲ

ಮಸೀದಿ ಇರುವ ಭೂಮಿಯನ್ನು ಯಾವುದೇ ಸರ್ಕಾರಿ ದಾಖಲೆಗಳಲ್ಲಿ ಈದ್ಗಾ ಮಸೀದಿಯ ಹೆಸರಿನಲ್ಲಿ ಗುರುತಿಸಲಾಗಿದೆ. ಹೀಗಾಗಿ, ಮಸೀದಿಯು ಅತಿಕ್ರಮಣ ಕಟ್ಟಡವಾಗಿದೆ. ಈ ಭೂಮಿಯು ವಕ್ಫ್ ಮಂಡಳಿಯ ಆಸ್ತಿಯಾಗಿದೆ ಎಂಬುದು ನಿಜವಾಗಿದ್ದಲ್ಲ, ಮಸೀದಿ ಸಮಿತಿಯು ಆ ಭೂಮಿಯನ್ನು ಮಸೀದಿಗೆ ದೇಣಿಗೆ ನೀಡಿದ ದಾನಿಯ ಕುರಿತು ಮಾಹಿತಿ ಒದಗಿಸಬೇಕು ಹಿಂದುತ್ವವಾದಿ ಅರ್ಜಿದಾರರು ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.

1992ರಿಂದ ಅಯೋಧ್ಯೆಯ ಬಾಬರಿ ಮಸೀದಿ ಇದ್ದ ಸ್ಥಳವು ವಿವಾದದ ಸ್ಥಳವಾಗಿತ್ತು. ಬಾಬರಿ ಮಸೀದಿ ಇದ್ದ ಸ್ಥಳವು ರಾಮ ಜನ್ಮಭೂಮಿಯಾಗಿದ್ದು, ಅದನ್ನು ರಾಮಮಂದಿರಕ್ಕೆ ನೀಡಬೇಕೆಂದು ಆರ್‌ಎಸ್‌ಎಸ್‌, ಬಿಜೆಪಿ ನೇತೃತ್ವದಲ್ಲಿ ಹಿಂದುತ್ವವಾದಿಗಳು ವಿವಾದ ಸೃಷ್ಟಿಸಿದ್ದರು. ಆ ಭೂಮಿ ರಾಮಮಂದಿರಕ್ಕೆ ಸೇರಿದ್ದು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲದಿದ್ದರೂ, ಜನರ ಭಾವನೆಯನ್ನು ಪರಿಗಣಿಸಿ ಬಾಬರಿ ಮಸೀದಿ ಇದ್ದ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ಆ ಸಂದರ್ಭದಲ್ಲಿಯೇ ರಾಜ್ಯದ ಬಿಜೆಪಿ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು, ಮಥುರಾ, ಕಾಶಿಗಳನ್ನೂ ಬಿಡುವುದಿಲ್ಲ. ಅಲ್ಲಿಯೂ ಮಸೀದಿಗಳನ್ನು ತೆರವುಗೊಳಿಸಿ ದೇವಾಲಯ ಕಟ್ಟುತ್ತೇವೆಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ, ಮಥುರಾದಲ್ಲಿ ಮಸೀದಿ ತೆರವಿಗೆ ಒತ್ತಾಯಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೆ, ಜ್ಞಾನವಾಪಿ ಮಸೀದಿಯನ್ನು ವಿವಾದದ ಬಿಂದುವಾಗಿಸಿದ್ದು, ಮಸೀದಿ ಸಂಕೀರ್ಣದ ಸರ್ವೇ ಮಾಡಲು ವಾರಣಾಸಿ ನ್ಯಾಯಾಲಯ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...