ಎಸಿ ನ್ಯಾಯಾಲಯಗಳಲ್ಲಿನ ಬಾಕಿ ತಕರಾರು ಅರ್ಜಿ ಇತ್ಯರ್ಥಕ್ಕೆ ಮೇ.20ರ ಗಡುವು: ಸಚಿವ ಕೃಷ್ಣ ಬೈರೇಗೌಡ

Date:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 32,787 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ ಶೇ.82 ರಷ್ಟು ಸರಾಸರಿಯಲ್ಲಿ 26,961 ಪ್ರಕರಣಗಳಿಗೆ ಇದೀಗ ಮುಕ್ತಿ ನೀಡಲಾಗಿದೆ. ಇದೇ ಸಮಯದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ 59,339 ಪ್ರಕರಣಗಳ ಪೈಕಿ 40,394 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ” ಎಂದು ಅಧಿಕಾರಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದರು.

ಮುಂದುವರೆದು, “ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ. ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ ವೇಗ ಪಡೆಯುತ್ತಿದೆ. ಆದರೂ, ಎರಡು ವರ್ಷದಲ್ಲಿ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು ಎಂಬ ಇಲಾಖೆಯ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ಪರಿಣಾಮ ಇನ್ನೂ 22,967 ಪ್ರಕರಣಗಳು ಬಾಕಿ ಇವೆ. ಮುಂದಿನ ಮೇ 20ಕ್ಕೆ ಸರ್ಕಾರಕ್ಕೂ ಎರಡು ವರ್ಷ ತುಂಬುತ್ತಿದ್ದು, ಅಷ್ಟರೊಳಗೆ ಈ ಪೈಕಿ ಕನಿಷ್ಟ 10 ರಿಂದ 12 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, “ಸರ್ಕಾರದ ಕಾನೂನಿನಂತೆ ಎಸಿ ನ್ಯಾಯಾಲಯದ ಪ್ರಕಣಗಳನ್ನು ಆರು ತಿಂಗಳ ಒಳಗೆ ಮುಗಿಸಬೇಕು ಎಂಬ ನಿಯಮ ಇದೆ. ಆದರೂ, ನಿಮಯ ಮೀರಿ ಐದು ವರ್ಷಕ್ಕೂ ಮೇಲ್ಪಟ್ಟ 5826ಪ್ರಕರಣಗಳು ಬಾಕಿ ಇದ್ದು, ಈ ಪ್ರಕರಣಗಳನ್ನು ಆದ್ಯತೆ ಮೇರೆ ಶೀಘ್ರ ವಿಲೇವಾರಿಗೊಳಿಸಬೇಕು. ಜೊತೆಗೆ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ 300 ಹಾಗೂ ವಿಶೇಷ ಉಪ ವಿಭಾಗಾಧಿಕಾರಿಗಳು ತಿಂಗಳಿಗೆ ಕನಿಷ್ಟ 150 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಗುಣಮಟ್ಟದ ವಿಲೇವಾರಿಗೆ ಸಚಿವರ ಮೆಚ್ಚುಗೆ

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಅಭಿಯಾನ ಮಾದರಿಯಲ್ಲಿ ಇತ್ಯರ್ಥಗೊಳಿಸಲಾಗುತ್ತಿದೆ. ಬಾಕಿ ಪ್ರಕರಣಗಳ ಇತ್ಯರ್ಥ ಹಿಂದೆದಿಗಿಂತಲೂ ಭಾರೀ ಮಟ್ಟದಲ್ಲಿ ಸುಧಾರಣೆಯಾಗಿದೆ. ಈ ನಡುವೆ ಪ್ರಕರಣಗಳ ಗುಣಮಟ್ಟದ ವಿಲೇವಾರಿಗೂ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮೆಚ್ಚುಗೆ ಸೂಚಿಸಿದರು.

ಎಸಿ ನ್ಯಾಯಾಲಯಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ ಪ್ರಕರಣಗಳ ಪೈಕಿ ಶೇ.80 ರಷ್ಟು ಹಾಗೂ ಒಂದು ವರ್ಷಕ್ಕೆ ಮೇಲ್ಪಟ್ಟ ಶೇ.70 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಆದರೆ, ಡಿಸಿ ನ್ಯಾಯಾಲಯಕ್ಕೆ ಬಂದಿರುವ ಮೇಲ್ಮನವಿಗಳ ಸಂಖ್ಯೆ ಕೇವಲ ಶೇ.6 ರಷ್ಟು ಮಾತ್ರ. ಈ ಸಂಖ್ಯೆ ಎಸಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಗುಣಮಟ್ಟದ ಇತ್ಯರ್ಥಕ್ಕೆ ಸಾಕ್ಷಿಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಬಗ್ಗೆ ಪ್ರಶ್ನೆ ಏಳಬಹುದು. ಹೀಗಾಗಿ ಅಧಿಕಾರಿಗಳು ಎಂದಿನಂತೆ ಎಚ್ಚರ ವಹಿಸಬೇಕಿದೆ” ಎಂದು ತಿಳಿಸಿದರು.

ದಾಖಲೆಗಳ ಡಿಜಿಟಲೀಕರಣ

ʼಭೂ ಸುರಕ್ಷಾ ʼ ಯೋಜನೆಯ ಅಡಿಯಲ್ಲಿ ಈಗಾಗಲೇ ಭೂ ಮಾಪನಾ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಉಪ ವಿಭಾಗಾಧಿಕಾರಿಗಳ ಕಚೇರಿಗಳಲ್ಲೂ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು. ಅಲ್ಲದೆ, ಇಂಟರ್ ಲಿಂಕ್ ಮಾಡಿ ಸಾರ್ವಜನಿಕ ಡೊಮೈನ್ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮುಂದುವರೆದು, “ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿದ್ರೆ ಜನ ಗುರುತಿಸುತ್ತಾರೆ. ಇದನ್ನೇ ಪ್ರೇರಕ ಶಕ್ತಿಯನ್ನಾಗಿಸಿಕೊಂಡು ಜನರಿಗಾಗಿ ಮತ್ತಷ್ಟು ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಬೇಕು. ಇದರಿಂದ ಇಲಾಖೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ, ಜನರಿಗೂ ಒಳ್ಳೆಯದಾಗುತ್ತದೆ” ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...