ಸಂವಿಧಾನದ ಬಗ್ಗೆ ಹೇಳಿಕೆ | ಮಾಧ್ಯಮಗಳು ಸಮಾಜ ಒಡೆಯುವ ಕೆಲಸ ಮಾಡಬಾರದು: ಪೇಜಾವರ ಸ್ವಾಮಿ

Date:

ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯು ವಿವಾದವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮಿ ವಿಶ್ವಪ್ರಸನ್ನ ತೀರ್ಥರು “ಮಾಧ್ಯಮಗಳು ಸಮಾಜ ಒಡೆಯುವ, ಕಲಹ ಸೃಷ್ಟಿಸುವ ಕೆಲಸ ಮಾಡಬಾರದು” ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಳ್ಳು ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ ಎಂದು ಆರೋಪಿಸಿದರು.

ವಕ್ಪ್ ಮಂಡಳಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸನಾತನ ಮಂಡಳಿ ರಚನೆ ಆಗಬೇಕು. ನಮಗೆ ಗೌರವ ತರುವ ಸಂವಿಧಾನ ಜಾರಿಯಾಗಬೇಕು ಎಂದು ಪೇಜಾವರ ಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು.

ಈ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, “ಪೇಜಾವರ ಶ್ರೀಗಳು ಕೂಡಾ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ನಮ್ಮ ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ. ಸಂವಿಧಾನದ ಬಗ್ಗೆ ಉಡುಪಿಯ ಪೇಜಾವರ ಸ್ವಾಮೀಜಿ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರು ಮನುಸ್ಮೃತಿ ಪ್ರತಿಪಾದನೆ ಮಾಡುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಪೇಜಾವರ ಸ್ವಾಮಿ ಸಂವಿಧಾನಕ್ಕೆ ಅಗೌರವ; ದೇಶದ್ರೋಹ ಪ್ರಕರಣ ದಾಖಲಿಸಲು ಬಿಎಸ್‌ಪಿ ಆಗ್ರಹ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪೇಜಾವರ ಸ್ವಾಮಿ “ಜನಗಣತಿಯೇ ಹೇಳುವಂತೆ ಭಾರತ, ಹಿಂದೂಸ್ತಾನ ಹಿಂದೂಗಳು ಬಹುಸಂಖ್ಯಾತರು ಆಗಿರುವ ದೇಶ. ಇಲ್ಲಿ ಹಿಂದೂಗಳ ಭಾವನೆಗಳಿಗೆ ಬೆಲೆ ಕೊಡುವ ಸರ್ಕಾರವನ್ನು ನಾವು ತರಬೇಕು ಎಂದು ಹೇಳಿರುವುದು ನಿಜ. ಆದರೆ ಸಂವಿಧಾನ ಬದಲಾಯಿಸಬೇಕು ಅಥವಾ ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ನಾವು ಹೇಳಿಲ್ಲ. ಹಾಗಾಗಿ ಈ ರೀತಿ ಹೇಳಿಕೆ ನೀಡುವುದು (ಸಿಎಂ ಹೇಳಿಕೆ) ಸರಿಯಲ್ಲ” ಎಂದು ಹೇಳಿದರು.

“ಒಂದು ಮತೀಯರನ್ನು ಓಲೈಸುವ ಪ್ರವೃತ್ತಿಯನ್ನು ನಾವು ಅಲ್ಲಲ್ಲಿ ಕಾಣುತ್ತಿದ್ದೇವೆ ಅದು ನಿಲ್ಲಬೇಕು. ಇತರ ಮತೀಯರ ಶ್ರದ್ಧಾ ಕೇಂದ್ರಗಳನ್ನು ಸ್ವತಂತ್ರವಾಗಿ ಬಿಡಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರಗಳನ್ನು ತಮ್ಮ ಮುಷ್ಟಿಯಲ್ಲಿ ಇಟ್ಟುಕೊಳ್ಳಲಾಗಿದೆ. ಪೂಜಾರಿಗಳಿಗೆ ಸರಿಯಾದ ವೇತನವಿಲ್ಲ. ನಾನಾ ಕಾರಣಗಳಿಂದ ದೇವಾಲಯದ ಭೂಮಿ ಸರ್ಕಾರದ ಭೂಮಿಯಾಗಿ ಬದಲಾಗುತ್ತಿದೆ. ಇಂತಹ ದ್ವಿಮುಖ ನೀತಿ ಯಾಕೆ” ಎಂದು ಪ್ರಶ್ನಿಸಿದರು.

“ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಸಂತರು ಸೇರಿ ಲಿಖಿತ ರೂಪದ ನಿರ್ಣಯ ಕೈಗೊಂಡಿದ್ದೆವು. ರಾಜ್ಯಪಾಲರಿಗೆ ನೀಡಿದ ಪ್ರತಿಯಲ್ಲಿ ಸಂವಿಧಾನ ಕುರಿತ ಯಾವುದೇ ಮಾತು ಉಲ್ಲೇಖವಾಗಿಲ್ಲ. ನಾವು ಹೇಳದಿರುವ ಮಾತನ್ನು ಹಬ್ಬಿಸಿ ಜನರು ದಂಗೆ ಎದ್ದಂತೆ ವರ್ತಿಸುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಈ ರೀತಿ ನಿರಾಧಾರ ಆರೋಪ ಮಾಡಬಾರದು. ಆ ಕುರಿತ ವಿಡಿಯೋ ಕ್ಲಿಪ್ಪಿಂಗ್ ಹಾಗೂ ಲಿಖಿತ ರೂಪದ ಪತ್ರವನ್ನು ಪರಿಶೀಲಿಸಬಹುದು” ಎಂದು ಸ್ಪಷ್ಟನೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...