ರಾಹುಲ್‌ ಅನರ್ಹತೆ ವಿಚಾರ | ಕಾಂಗ್ರೆಸ್‌ನಿಂದ ನಿಲುವಳಿ ಸೂಚನೆ ಸಲ್ಲಿಕೆ

Date:

  • ಏಪ್ರಿಲ್‌ 6ರವರೆಗೆ ನಡೆಯಲಿರುವ ಎರಡನೇ ಅವಧಿಯ ಅಧಿವೇಶನ
  • ಲೋಕಸಭೆಗೆ ನಿಲುವಳಿ ಸೂಚನೆ ಸಲ್ಲಿಸಿದ ಮನೀಶ್‌ ತಿವಾರಿ

ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಸಂಸತ್ತಿನಲ್ಲಿರುವ ಕಾಂಗ್ರೆಸ್‌ ಸಂಸದೀಯ ಪಕ್ಷದ ಕಚೇರಿಯಲ್ಲಿ ಸೋಮವಾರ (ಮಾರ್ಚ್‌ 27) ಬೆಳಿಗ್ಗೆ 10.30ಕ್ಕೆ ಸಭೆ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆಯ ವಿಚಾರವಾಗಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ. ಅದಾನಿ ಹಗರಣ ಹಾಗೂ ರಾಹುಲ್‌ ಅವರ ಅನರ್ಹತೆಗೆ ಸಂಬಂಧಿಸಿ ಕೇಂದ್ರದ ವಿರುದ್ಧ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಕಾಂಗ್ರೆಸ್‌ ಸಂಸದರು ಸಂಸತ್ತು ಅಧಿವೇಶನಕ್ಕೆ ಕಪ್ಪು ವಸ್ತ್ರ ಧರಿಸಿ ಹಾಜರಾಗಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರ ಅನರ್ಹತೆ ವಿಚಾರವನ್ನು ಚರ್ಚೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕ ಮನೀಶ್‌ ತಿವಾರಿ ಸೋಮವಾರ ನಿಲುವಳಿ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಅವಧಿಯ ಬಜೆಟ್‌ ಅಧಿವೇಶನ ಆರಂಭವಾದಾಗಿನಿಂದ ಉದ್ಯಮಿ ಗೌತಮ್ ಅದಾನಿ ಕುರಿತ ಹಿಂಡನ್‌ಬರ್ಗ್‌ ಸಂಶೋಧನಾ ವರದಿ ವಿಚಾರವಾಗಿ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಒತ್ತಾಯಿಸಿ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳು ಪ್ರತಿಭಟಿಸುತ್ತಿವೆ.

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಅನರ್ಹತೆ | ನರೇಂದ್ರ ಮೋದಿ ಒಬ್ಬ ಹೇಡಿ: ಪ್ರಿಯಾಂಕ ವಾದ್ರಾ ಕಿಡಿ

ಸಮಾನಮನಸ್ಕ ಪ್ರತಿಪಕ್ಷಗಳು ಸದನದಲ್ಲಿ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಸಂಸದರು ಸಭೆ ಸೇರಿವೆ. ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ ಸಂಸದರೂ ಭಾಗವಹಿಸಿರುವುದಾಗಿ ವರದಿಯಾಗಿದೆ.

ಎರಡನೇ ಅವಧಿಯ ಬಜೆಟ್‌ ಅಧಿವೇಶನದ ಮೂರನೇ ವಾರವೂ ಪ್ರತಿಪಕ್ಷಗಳ ಪ್ರತಿಭಟನೆಗೆ ಉಭಯ ಸದನಗಳೂ ಸಾಕ್ಷಿಯಾಗಿವೆ. ಮಾರ್ಚ್‌ 13ರಿಂದ ಆರಂಭವಾಗಿರುವ ಎರಡನೇ ಅವಧಿ ಅಧಿವೇಶನ ಏಪ್ರಿಲ್‌ 6ರವರೆಗೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...