ಗಣಿ-ಪರಿಸರ ಪುನಶ್ಚೇತನ ನಿಗಮದ ಸಭೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

Date:

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಸೂಚಿಸಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದರು.

ಕೆಎಂಇಆರ್‌ಸಿಗೆ CEPMIZ ಯೋಜನೆಯಡಿ ಒಟ್ಟು 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದೆ. ಇದರಲ್ಲಿ ಯೋಜನೆಗಳ ಆಯ್ಕೆ ಹಾಗೂ ಕಾಮಗಾರಿಗಳ ಪ್ರಗತಿಯ ಮೇಲ್ವಿಚಾರಣಾ ಪ್ರಾಧಿಕಾರ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಒಟ್ಟು 7928.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದ್ದಾರೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ ಸಿಎಂ, ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ನಿರ್ದೇಶನ ನೀಡಿದರು.

ವರ್ಷ ಕಳೆದರೂ ಡಿಪಿಆರ್ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ, ಅಧಿಕಾರಿಗಳ ವಿಳಂಬ ಧೋರಣೆಗೆ ಗರಂ ಆದರು. ಸರ್ಕಾರಿ ಕೆಲಸಗಳಲ್ಲಿ ವಿಳಂಬ ಧೋರಣೆ ಸಹಿಸುವದಿಲ್ಲ. ತಪ್ಪಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

“ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ mobilization advance ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟಪಡಿಸಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಸೂಚಿಸಿದ ಸಿಎಂ, ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ‌ ಮಾಡುವಂತೆ ಸೂಚಿಸಿದರು.

ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡುವಂತೆ ಸೂಚಿಸಿದರು.

ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು. ಮುಂದಿನ ಸಭೆಯಲ್ಲಿ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಭಾಗವಹಿಸುವಂತೆ ಸೂಚಿಸಿದರು. ಕಾಮಗಾರಿಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯ ಗುಣಮಟ್ಟವನ್ನು ಖಾತರಿಪಡಿಸಬೇಕು ಎಂದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...