ವಿರೋಧ ಪಕ್ಷಗಳ ಸಭೆ | ಗಣ್ಯರಿಗೆ ಸ್ವಾಗತ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಒಗ್ಗಟ್ಟು ಪ್ರದರ್ಶನ
  • ಕಾಂಗ್ರೆಸ್ ನೇತೃತ್ವದ ಸಭೆಗೆ 24 ಪಕ್ಷಗಳ ಗಣ್ಯರಿಗೆ ಆಹ್ವಾನ ನೀಡಲಾಗಿದೆ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣ್ಯರಿಗೆ ಸ್ವಾಗತ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಸರ್ವಾಧಿಕಾರಿ, ಕೋಮುವಾದಿ ಮತ್ತು ಭ್ರಷ್ಟ ಪ್ರಭುತ್ವದ ವಿರುದ್ಧದ ಹೋರಾಟದಲ್ಲಿ ಒಂದಾಗಲು ಆಗಮಿಸುತ್ತಿರುವ ದೇಶದ ಪ್ರಮುಖ ವಿರೋಧಪಕ್ಷಗಳ ನಾಯಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಪ್ರಭುತ್ವದ ಆಶಯಗಳ ಕೂಡು ಬದುಕಿನ ದೀರ್ಘ ಪರಂಪರೆ ಹೊಂದಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ ಎನ್ನುವುದು ಕನ್ನಡಿಗರೆಲ್ಲರ ಒಕ್ಕೊರಲಿನ ಹಾರೈಕೆ” ಎಂದು ತಿಳಿಸಿದ್ದಾರೆ.

ವಿಪಕ್ಷಗಳ ಮಹಾಮೈತ್ರಿಕೂಟದ ಸಭೆ ಈ ಮೊದಲು ಬಿಹಾರದಲ್ಲಿ ನಡೆದಿತ್ತು. ಅಲ್ಲಿ 15 ಪಕ್ಷಗಳ 32ನಾಯಕರು ಪಾಲ್ಗೊಂಡಿದ್ದರು. ಆದರೆ, ಕೇಜ್ರಿವಾಲ್ ಸೇರಿ ಹಲವು ನಾಯಕರು ಆ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಸಂಚಾಲಕರ ನೇಮಕ ಮಾಡಲು ಸಾಧ್ಯವಾಗಿರಲಿಲ್ಲ. ನಂತರ ಹಿಮಾಚಲಪ್ರದೇಶದಲ್ಲಿ ಸಭೆ ಆಯೋಜಿಸಲು ನಿರ್ಧರಿಸಿ ಹವಮಾನ ವೈಪರಿತ್ಯದ ಕಾರಣ ಕೈಬಿಡಲಾಗಿತ್ತು. ಆದರೆ ಈಗ ಎರಡನೆಯ ಸಭೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿದೆ. ಸಭೆಗೆ ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷಗಳ ಒಕ್ಕೂಟದ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್​ನ ಹಾಲಿ ಸಿಎಂ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಸಹ ಆಗಮಿಸಲಿದ್ದಾರೆ.

ಎನ್​ಸಿಪಿಯ ಶರದ್ ಪವಾರ್, ಆರ್​ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಶಿವಸೇನೆಯ ಉದ್ಧವ್ ಠಾಕ್ರೆ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ, ಸಿಪಿಐ ನಾಯಕ ಡಿ ರಾಜಾ, ಸಿಪಿಐಎಂ ನಾಯಕ ಸೀತಾರಾಂ ಯಚೂರಿ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ. ಇವರಲ್ಲಿ ಆರು ಮಂದಿ ಹಾಲಿ ಸಿಎಂಗಳಾಗಿದ್ದರೆ, ಆರು ಮಂದಿ ಮಾಜಿ ಸಿಎಂಗಳು ಇದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ನಿರ್ಧಾರ ಪ್ರಕಟಿಸುವೆ: ವಿ ಸೋಮಣ್ಣ

ಈಗಾಗಲೇ ಕೆಲ ವಿಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಸಿಪಿಐನ ಸೀತಾರಾಂ ಯೆಚೂರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸೋಮವಾರ ಸಂಜೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಖರ್ಗೆ ಅವರ ಜತೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

ವಿಪಕ್ಷಗಳ ಸಭೆಗೆ ಈ ಬಾರಿ ಜೆಡಿಎಸ್​ಗೆ ಅಧಿಕೃತವಾಗಿ ಆಹ್ವಾನ ನೀಡಿಲ್ಲ. ಇನ್ನು ಕೊನೆ ಕ್ಷಣದಲ್ಲಿ ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ವಿಪಕ್ಷಗಳ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ. ಸಂಚಾಲಕರ ನೇಮಕ, 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇನ್ನು ವಿಪಕ್ಷಗಳ ನಾಯಕರಿಗೆ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಔತಣ ಕೂಟ ಏರ್ಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...