ದೇಶವಿರೋಧಿ ಚಟುವಟಿಕೆ ಆರೋಪ: ಜಮ್ಮು-ಕಾಶ್ಮೀರದ ಮುಸ್ಲಿಂ ಲೀಗ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

Date:

ದೇಶವಿರೋಧಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಹೆಸರಿನ ಸಂಘಟನೆಗೆ ಕೇಂದ್ರ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ(ಯುಎಪಿಎ) ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸಾರತ್ ಆಲಂ ಗ್ರೂಪ್) ಸಂಘಟನೆಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸಾರತ್ ಆಲಂ ಬಣ)/ಎಂಎಲ್‌ಜೆಕೆ-ಎಂಎಯನ್ನು ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾರೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ದೇಶದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂದೇಶವಾಗಿದೆ” ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮುಸ್ಲಿಂ ಲೀಗ್ ಮಸಾರತ್ ಆಲಂ ಗ್ರೂಪ್ ಮಸಾರತ್ ಆಲಂ ಭಟ್ ನೇತೃತ್ವದಲ್ಲಿದೆ. ಈ ಸಂಘಟನೆಯು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿ, ಈ ನಿಷೇಧ ಹೇರಿದೆ. ಸಂಘಟನೆಯ ಸದಸ್ಯರು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅಲ್ಲದೆ, ದೇಶದ ಸಾಂವಿಧಾನಿಕ ಅಧಿಕಾರದ ಕಡೆಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತಿದ್ದಾರೆ ಎಂದು ಅಧಿಸೂಚನೆ ಹೇಳಿದೆ.

masarat alam bhat

ಸಂಘಟನೆಯ ಮುಖಂಡರು, ವಿಶೇಷವಾಗಿ ಅದರ ಅಧ್ಯಕ್ಷ ಮಸಾರತ್ ಆಲಂ, ದೇಶದ ಏಕತೆ, ಸಮಗ್ರತೆ, ಭದ್ರತೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧವು ಮುಂದಿನ ಐದು ವರ್ಷಗಳವರೆಗೆ ಇರಲಿದೆ ಎಂದು ವರದಿಯಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಕೇಂದ್ರ ಸರ್ಕಾರವು ಯಾವುದೇ ಸಂಘಟನೆಯನ್ನು ‘ಕಾನೂನುಬಾಹಿರ’ ಅಥವಾ ‘ಭಯೋತ್ಪಾದಕ’ ಎಂದು ಘೋಷಿಸಬಹುದು. ಇದನ್ನೇ ಸಾಮಾನ್ಯ ಭಾಷೆಯಲ್ಲಿ ‘ನಿರ್ಬಂಧ ಅಥವಾ ನಿಷೇಧ’ ಎನ್ನುತ್ತಾರೆ.

ಸಂಘಟನೆಯನ್ನು ‘ಕಾನೂನುಬಾಹಿರ’ ಅಥವಾ ‘ಭಯೋತ್ಪಾದಕ’ ಅಥವಾ ‘ನಿಷೇಧಿಸಲಾಗಿದೆ’ ಎಂದು ಘೋಷಿಸಿದರೆ, ಅದರ ಸದಸ್ಯರನ್ನು ಅಪರಾಧಿಗಳೆಂದು ಪರಿಗಣಿಸಬಹುದು ಮತ್ತು ಅದರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು.

ಗೃಹ ಸಚಿವಾಲಯದ ಪ್ರಕಾರ, ಪ್ರಸ್ತುತ ದೇಶದಲ್ಲಿ 42 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಲಾಗಿದೆ. ಅಂದರೆ, ಅವುಗಳನ್ನು ನಿಷೇಧಿಸಲಾಗಿದೆ. ಇವುಗಳಲ್ಲಿ ಅನೇಕ ಖಲಿಸ್ತಾನಿ ಸಂಘಟನೆಗಳು, ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್, ಎಲ್‌ಟಿಟಿಇ ಮತ್ತು ಅಲ್ ಖೈದಾ ಮುಂತಾದ 42 ಸಂಘಟನೆಗಳು ಸೇರಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...